ಕ್ಷಯ ರೋಗದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ದಿಟ್ಟ ಹೆಜ್ಜೆ
ಹುಬ್ಬಳ್ಳಿ, ಸೆಪ್ಟೆಂಬರ್ 24 : ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 10 ಕ್ಷಯ ರೋಗಿಗಳನ್ನು ದತ್ತು ಪಡೆದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ 'ಕ್ಷಯ ರೋಗ ಮುಕ್ತ ಭಾರತ ಅಭಿಯಾನ'ಕ್ಕೆ ಕೈಜೋಡಿಸಿದ್ದಾರೆ. ಈ ಮೂಲಕ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಡೆ ಮಾದರಿಯಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿರುವ 'ಕ್ಷಯ ಮುಕ್ತ ಭಾರತ ಅಭಿಯಾನ'ಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಸಾಥ್ ನೀಡಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 10 ಕ್ಷಯ ರೋಗಿಗಳನ್ನು ದತ್ತು ಪಡೆಯುವ ಮೂಲಕ ಕೇಂದ್ರ ಸಚಿವರು ಕ್ಷಯ ರೋಗ ಮುಕ್ತ ಭಾರತ ಅಭಿಯಾನವನ್ನು ಬೆಂಬಲಿಸಿದ್ದಾರೆ.
ಪ್ರತಿ ವರ್ಷ ಭಾರತದಲ್ಲಿ ಅಂದಾಜು 26 ಲಕ್ಷ ಕ್ಷಯ ರೋಗದ ಹೊಸ ಪ್ರಕರಣಗಳು ದಾಖಲಾಗುತ್ತಿವೆ. ಸುಮಾರು 4.45 ಲಕ್ಷ ಜನ ಈ ಮಾರಕ ರೋಗಕ್ಕೆ ಬಲಿಯಾಗುತ್ತಿದ್ದಾರೆ. ಇಂದಿಗೂ ಕ್ಷಯ ರೋಗ ನಿರ್ಮೂಲನೆ ದೇಶದಲ್ಲಿ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಕ್ಷಯ ರೋಗ ಮಾನವನಿಗೆ ಮತ್ತು ಹಲವು ಪ್ರಾಣಿಗಳಿಗೆ ಬರುವ ಒಂದು ಮಾರಕ ರೋಗ. ಈ ರೋಗವು ಮೈಕೊಬ್ಯಾಕ್ಟೀರಿಯಂ ಜಾತಿಯ ಹಲವು ಬ್ಯಾಕ್ಟೀರಿಯಗಳಿಂದ ಬರುತ್ತದೆ. ಪ್ರಮುಖವಾಗಿ ಪುಪ್ಪಸಗಳಿಗೆ ಹಾನಿ ಮಾಡುವ ಈ ರೋಗ ಮುಂದೆ ದೇಹದ ಹಲವು ಅಂಗಾಂಗಗಳ ಮೇಲೆ ತನ್ನ ದುಷ್ಪರಿಣಾಮ ಬೀರುತ್ತದೆ.
ರೋಗಿಯು ಬಿಡದೆ ಸೂಕ್ತ ಅವಧಿಗೆ ಸೂಕ್ತವಾದ ಔಷಧಿಗಳನ್ನು ನಿಯಮಿತವಾಗಿ ತೆಗೆದುಕೊಂಡರೆ, ಕ್ಷಯರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದು. ಆದರೆ ಔಷಧಗಳ ಸೂಕ್ತ ಪರಿಪಾಲನೆ ಇಲ್ಲದಿದ್ದರೆ, ರೋಗಿಯು ಸಾವನ್ನಪ್ಪಬಹುದು.
2025 ರ ವೇಳೆಗೆ ಭಾರತವನ್ನು ಕ್ಷಯರೋಗ ಮುಕ್ತವನ್ನಾಗಿಸಲು ಕೇಂದ್ರ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದೆ. ಟಿಬಿ ಮುಕ್ತ ಭಾರತ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ.
ಕ್ಷಯ ರೋಗದ ವಿರುದ್ಧದ ಹೋರಾಟವನ್ನು ಜನಾಂದೋಲನ ಮಾದರಿಯಲ್ಲಿ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಅಭಿಯಾನ ಬೆಂಬಲಿಸಿ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅಭಿಯಾನದಲ್ಲಿ ಎಲ್ಲರೂ ಭಾಗಿಯಾಗಿ ಕ್ಷಯರೋಗದ ಕುರಿತು ಜಾಗೃತರಾಗಲು ಮನವಿ ಮಾಡಿದ್ದಾರೆ.
ಮಹತ್ವದ ಅಭಿಯಾನಕ್ಕಾಗಿ ಕೇಂದ್ರ ಆರೋಗ್ಯ ಸಚಿವಾಲಯ Ni-kshay 2.0 Platform ಆರಂಭಿಸಿದ್ದು, http://communitysupport.nikshay.in ವೆಬ್ಸೈಟ್ಗೆ ಭೇಟಿ ನೀಡಿ ನೋಂದಾಯಿಸಿಕೊಂಡು ನೀವು "ನಿಕ್ಷಯ ಮಿತ್ರರಾಗಿ.. ಬನ್ನಿ ಭಾರತವನ್ನು ಕ್ಷಯ ಮುಕ್ತಗೊಳಿಸೋಣ" ಎಂದು ಪ್ರಲ್ಹಾದ್ ಜೋಶಿ ಕರೆ ನೀಡಿದ್ದಾರೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications