"ಉಗ್ರರನ್ನು ಬಿಟ್ಟು ಭಾರತದಲ್ಲಿ ಈ ಕೃತ್ಯ ಮಾಡುವ ಕೆಲಸ"
ಭಾರತವು ಆರ್ಥಿಕವಾಗಿ ಅಭಿವೃದ್ಧಿ ಆಗುತ್ತಿರುವ ಹಿನ್ನೆಲೆಯಲ್ಲೇ ಉಗ್ರರನ್ನು ಬಿಟ್ಟು ಶಾಂತಿ ಕದಡುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಹೇಳಿದ್ದಾರೆ. ವಿಶ್ವದಲ್ಲಿ ಭಾರತ ಅಗ್ರಗಣ್ಯ ಸ್ಥಾನಕ್ಕೆ ಏರಲು ಪ್ರಯತ್ನಿಸುತ್ತಿದೆ. ಆದರೆ, ಮೂರನೇ ಸ್ಥಾನದಲ್ಲಿಯೇ ಉಳಿಯುವ ಕುತಂತ್ರ ಕೆಲಸ, ಸಮಾಜವನ್ನು ಹೊಡೆಯುವ ಪ್ರಯತ್ನ ಹಾಗೂ ಉಗ್ರರನ್ನು ಬಿಟ್ಟು ಶಾಂತಿ ಕದಡುವ ಕೆಲಸ ನಡೆಯುತ್ತಿದೆ ಎಂದು ಅವರು ದೂರಿದ್ದಾರೆ.
ಇಂದು ಅಖಿಲ ಭಾರತೀಯರ ವಿದ್ಯಾರ್ಥಿ ಪರಿಷತ್- ಕರ್ನಾಟಕ ಉತ್ತರ ಪ್ರಾಂತದವರು ಆಯೋಜಿಸಿದ್ದ "ಸಂವಿಧಾನ 75- ಬದಲಾಯಿಸಿದ್ದು ಯಾರು? ಬಲಪಡಿಸಿದ್ದು ಯಾರು?" ಅತ್ಯಮೂಲ್ಯ ಕೃತಿಯನ್ನು ಹುಬ್ಬಳ್ಳಿಯ ಬಿವಿಬಿ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಬಿಡುಗಡೆ ಮಾಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ವಿವಿಧ ವಿಚಾರಗಳ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಭಯೋತ್ಪಾದನೆ ಹಾಗೂ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕರ ಬಗ್ಗೆ ಮಾತನಾಡಿದ್ದಾರೆ.

ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಎರೆಡೆರೆಡು ಬಾರಿ ಸೋಲಿಸಿದರ ಬಗ್ಗೆ ಕಾಂಗ್ರೆಸ್ ಪಕ್ಷ ಇದೀಗ ಹೊಸ ಟ್ರೆಂಡ್ ಆರಂಭಿಸಿದೆ. ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಮಗ ಪ್ರಿಯಾಂಕ ಖರ್ಗೆ ಇತಿಹಾಸವನ್ನು ಒಂದು ಬಾರಿ ಮೆಲಕು ಹಾಕಬೇಕಾದ ಅವಶ್ಯಕತೆಯಿದೆ. ಸಂವಿಧಾನದಲ್ಲಿ ಮೀಸಲಾತಿಯನ್ನು ಬಿಜೆಪಿ ತೆಗೆದುಹಾಕುವ ಪ್ರಯತ್ನ ಮಾಡುತ್ತಿದೆ ಎಂದು ಕಾಂಗ್ರೆಸ್ ಪಕ್ಷ ಸುಳ್ಳು ಸುದ್ದಿ ಹಬ್ಬಿಸಿತು. ಆದರೆ ಇದೀಗ ಸುಮ್ಮನಾಗಿದೆ, ಕೇಂದ್ರ ಸರ್ಕಾರ ಮೀಸಲಾತಿಯ ವಿಚಾರವಾಗಿ ಗಂಭೀರವಾಗಿದೆ. ಮೀಸಲಾತಿಗೆ ಧಕ್ಕೆ ತರುವ ಕೆಲಸ ಮಾಡಿಲ್ಲ. ಪಂಡಿತ್ ನೆಹರು ಅವರು ಮೀಸಲಾತಿ ವಿರೋಧಿಸಿ ಎಲ್ಲಾ ರಾಜ್ಯಗಳಿಗೂ ಪತ್ರ ಬರೆದಿದ್ದರು. ಇದನ್ನು ಕಾಂಗ್ರೆಸ್ ಅಲ್ಲಗೆಳೆಯುತ್ತಾ ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ರಾಜೀವ್ ಗಾಂಧಿಯವರು ಲೋಕಸಭೆಯಲ್ಲಿ ಮಾಡಿದ ಅತಿ ದೊಡ್ಡ ಭಾಷಣ ಅಂದರೆ ಅದು ಮೀಸಲಾತಿ ವಿರುದ್ಧ. ಕಾಂಗ್ರೆಸ್ ಪಕ್ಷ ಏನ್ ಹೇಳುತ್ತೆ ಇದಕ್ಕೆ ? ಬಾಬಾ ಸಾಹೇಬರಿಗೆ ಅಂತಿಮ ಸಂಸ್ಕಾರದ ವಿಚಾರ ತೋರಿದ ಕಾಂಗ್ರೆಸ್ ಸರ್ಕಾರದ ನಡೆ ಕರಾಳ ಸತ್ಯವಾಗಿದೆ ಎಂದಿದ್ದಾರೆ.
ಇದೇ ಸಂದರ್ಭದಲ್ಲಿ ಹನ್ನೊಂದು ಪ್ರಮುಖ ಲೇಖಕರಿಂದ ರಚಿಸಲ್ಪಟ್ಟ ಈ ಕೃತಿ ನಮ್ಮ ಶ್ರೇಷ್ಠ ಸಂವಿಧಾನವನ್ನು ಬಲಪಡಿಸಿದ ಮಹತ್ಕಾರ್ಯವನ್ನು ಜನರೆದುರು ತೆರೆದಿಡುವ ಪ್ರಯತ್ನ ಮಾಡಿದೆ. ಕಳೆದ 75 ವರ್ಷಗಳಲ್ಲಿ ಸಂವಿಧಾನದಲ್ಲಿ ಬದಲಾವಣೆ ಮಾಡಿದ ಮತ್ತು ಅದನ್ನು ಬಲಪಡಿಸಲು ಶ್ರಮಿಸಿದವರ ಕುರಿತು ವಿಸ್ತೃತವಾದ ವಿವರ ಈ ಪುಸ್ತಕದಲ್ಲಿದ್ದು, ಈ ಪುಸ್ತಕವನ್ನು ಪ್ರಕಟಿಸಿದ ನಮ್ಮ ಉತ್ತರ ಕರ್ನಾಟಕದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದೂ ಅವರು ಹೇಳಿದ್ದಾರೆ.
ಚಿತ್ರದುರ್ಗದ ಶ್ರೀ ಡಾ.ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿಗಳು ಈ ಕಾರ್ಯಕ್ರಮದ ಸಾನ್ನಿಧ್ಯವನ್ನು ವಹಿಸಿದ್ದರು. ಸಾಮಾಜಿಕ ಕಾರ್ಯಕರ್ತ ಬೆಂಗಳೂರಿನ ವಾದಿರಾಜ್ ಅವರು ಕೃತಿಯ ಪರಿಚಯ ಮಾಡಿಕೊಟ್ಟರು. ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಡಾ.ಸಿ.ಬಸವರಾಜ, ABVP ರಾಷ್ಟ್ರೀಯ ಕಾರ್ಯದರ್ಶಿ ಶ್ರವಣ್ ಬಿ.ರಾಜ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ABVP ರಾಜ್ಯಾಧ್ಯಕ್ಷ ಡಾ.ಆನಂದ ಹೊಸೂರ, ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications