ಹುಬ್ಬಳ್ಳಿಯಲ್ಲಿ ವಿಜಯ ಸಂಕೇಶ್ವರ್ ದಿಢೀರ್ ಪತ್ರಿಕಾ ಗೋಷ್ಠಿ
ಹುಬ್ಬಳ್ಳಿ, ಮಾರ್ಚ್ 13: ಬಿಜೆಪಿಯಿಂದ ರಾಜ್ಯಸಭಾ ಟಿಕೇಟ್ ಆಕಾಂಕ್ಷಿಯಾಗಿದ್ದ ವಿಆರ್ ಎಲ್ ಸಮೂಹ ಸಂಸ್ಥೆಯ ಮುಖ್ಯಸ್ಥ ವಿಜಯ ಸಂಕೇಶ್ವರ್ ಹುಬ್ಬಳ್ಳಿಯಲ್ಲಿಂದು ದಿಢೀರ್ ಪತ್ರಿಕಾ ಗೋಷ್ಠಿ ಕರೆದಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.
59 ರಾಜ್ಯಸಭಾ ಸೀಟುಗಳಿಗೆ ಮಾ.23 ರಂದು ಮತದಾನ ನಡೆಯಲಿದೆ. ಕರ್ನಾಟಕ ಬಿಜೆಪಿಯಿಂದ ವಿಜಯ ಸಂಕೇಶ್ವರ್ ಪ್ರಬಲ ಟಿಕೇಟ್ ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿ ಉದ್ಯಮಿ ರಾಜೀವ್ ಚಂದ್ರಶೇಖರ್ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದ್ದರಿಂದ ಅವರಿಗೆ ಟಿಕೇಟ್ ಕೈತಪ್ಪಿದೆ. ಕನ್ನಡಿಗರಿಗೇ ಟಿಕೇಟ್ ನೀಡಬಹುದಿತ್ತು ಎಂಬ ಮಾತು ಹಲವೆಡೆಯಿಂದ ಕೇಳಿಬರುತ್ತಿದೆ.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಇತ್ತ ವಿಜಯ ಸಂಕೇಶ್ವರ್ ದಿಢೀರ್ ಪತ್ರಿಕಾ ಗೋಷ್ಠಿ ಕರೆಯುವ ಮೂಲಕ, ಬಿಜೆಪಿಗೆ ಗುಡ್ ಬೈ ಹೇಳುತ್ತಾರಾ ಎಂಬ ಅನುಮಾನವೂ ಎದ್ದಿದೆ. ಕೆಲ ವರ್ಷಗಳ ಹಿಂದೆ ಇವರು ಬಿಜೆಪಿ ತೊರೆದು, ಕನ್ನಡ ನಾಡು ಪಕ್ಷ ಕಟ್ಟಿದ್ದರು. ನಂತರ ಕರ್ನಾಟಕ ಜನತಾ ಪಕ್ಷ(ಕೆಜೆಪಿ) ಸೇರಿದ್ದರು. ಕೆಜೆಪಿ ಬಿಜೆಪಿಯೊಂದಿಗೆ ವಿಲೀನವಾದನಂತರ ಮತ್ತೆ ಬಿಜೆಪಿಗೆ ಸೇರಿದ್ದರು. ಇಂದು(ಮಾ.13) ಬೆಳಿಗ್ಗೆ 11:30 ಕ್ಕೆ ಪತ್ರಿಕಾ ಗೋಷ್ಠಿ ನಡೆಯಲಿದ್ದು, ವಿಜಯ ಸಂಕೇಶ್ವರ್ ಅವರ ನಿರ್ಧಾರವೇನು ಎಂಬುದು ತಿಳಿಯಲಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications