Dharwad-Belagavi New Railway line: ಕಾಮಗಾರಿ ಮುಗಿಯುವುದು ಯಾವಾಗ? ರೈಲು ನಿಲುಗಡೆಗೆ ಕ್ರಮ
ಹುಬ್ಬಳ್ಳಿ, ಜೂನ್ 19: ಜನರಿಗೆ ಅಗ್ಗದ ಸೇವೆ ನೀಡುತ್ತಿರುವ ಭಾರತೀಯ ರೈಲ್ವೆಯ ಕರ್ನಾಟಕದ ನೈಋತ್ಯ ವಲಯದಲ್ಲಿನ ಹೊಸ ರೈಲು ಮಾರ್ಗದ ಕಾಮಗಾರಿ ನಿಧಾನವಾಗಿ ಸಾಗುತ್ತಿದೆ. ಇದನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಲಾಗಿದೆ.
ಹುಬ್ಬಳ್ಳಿ ನಗರದ ಗದಗ ರಸ್ತೆಯ ರೈಲ್ ಸೌಧದಲ್ಲಿ ರಾಜ್ಯಸಭಾ ಸದಸ್ಯ ವೀರಣ್ಣ ಕಡಾಡಿ ನೇತೃತ್ವದಲ್ಲಿ ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಅರವಿಂದ್ ಶ್ರೀವಾಸ್ತವ್ ಅವರು ಅಧಿಕಾರಿಗಳ ಜೊತೆಗೆ ಬುಧವಾರ ಸಭೆ ನಡೆಯಿತು.

ಹುಬ್ಬಳ್ಳಿಯಿಂದ ಧಾರವಾಡ, ಕಿತ್ತೂರು ಮಾರ್ಗವಾಗಿ ಬೆಳಗಾವಿವರೆಗಿನ ನೂತನ ರೈಲು ಮಾರ್ಗದ ನಿರ್ಮಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ. ಈ ಕೆಲಸವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಬೆಳಗಾವಿ ಮೀರಜ್ ನಡುವೆ ಈ ಹಿಂದೆ ಸಂಚರಿಸುತ್ತಿದ್ದ ಪ್ಯಾಸೆಂಜರ್ ರೈಲುಗಳನ್ನು ಪುನಃ ಆರಂಭಿಸಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿದರು.
ನಿಲ್ದಾಣಗಳಲ್ಲಿ ರೈಲು ನಿಲುಗಡೆಗೆ ಕ್ರಮ
ಈ ವೇಳೆ ಪಂಢರಾಪುರ ಹಾಗೂ ರಾಜಸ್ಥಾನದ ಕಡೆಗೆ ತೆರಳುವ ರೈಲುಗಳನ್ನು ಖಾನಾಪುರ, ಘಟಪ್ರಭಾ, ರಾಯಬಾಗ ನಿಲ್ದಾಣಗಳಲ್ಲಿ ನಿಲುಗಡೆಗೆ ಕ್ರಮ ಕೈಕೊಳ್ಳುವಂತೆ ಅಧಿಕಾರಿಗಳಿಗೆ ಮನವಿ ಮಾಡಲಾಯಿತು. ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.
ಇನ್ನೂ ಸಭೆಯಲ್ಲಿ ಬೆಳಗಾವಿ ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.

ಬೆಳಗಾವಿ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾದ ವಂದೇ ಭಾರತ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಿಸಲು ಇರುವ ತೊಡಕುಗಳು ಹಾಗೂ ನಿವಾರಣೆಗಳ ಕುರಿತು ಚರ್ಚಿಸಲಾಯಿತು. ಆದಷ್ಟು ಬೇಗ ಅಲ್ಲಿಯವರೆಗೆ ರೈಲು ಓಡಿಸಲು ಇಲಾಖೆ ಮುಂದಾಗಬೇಕು ಎಂದು ರಾಜ್ಯಸಭಾ ಸದಸ್ಯರಾದ ವೀರಣ್ಣ ಕಡಾಡಿ ಒತ್ತಾಯಿಸಿದರು.
ಬೆಳಗಾವಿ ಜಿಲ್ಲೆ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಗಡಿಗೆ ಹೊಂದಿಕೊಂಡಿದ್ದು, ಈ ಭಾಗಗಳ ಪ್ರಯಾಣಿಕರ ಅನುಕೂಲಕ್ಕಾಗಿ ಮುಂಬೈ, ದೆಹಲಿ, ತಿರುಪತಿ, ಮಂಗಳೂರು, ಹೈದರಾಬಾದ್, ಬೀದರ್ ಹಾಗೂ ಸೊಲ್ಲಾಪುರ ನಗರಗಳನ್ನು ಸಂಪರ್ಕಿಸುವ ನೂತನ ರೈಲುಗಳನ್ನು ಪ್ರಾರಂಭಿಸುವ ಕುರಿತು ಚರ್ಚಿಸಲಾಯಿತು.
ಈ ಹಿಂದೆಯು ಕೆಲವು ಸಂಘ ಸಂಸ್ಥೆಗಳು, ಸ್ಥಳೀಯ ನಿವಾಸಿಗಳು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಕನಮಡಿ, ಸುನೀಲ್ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications