ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಏನೇನಿರಲಿದೆ?
ಹುಬ್ಬಳ್ಳಿ, ಡಿಸೆಂಬರ್ 09 : ಕಾಂಗ್ರೆಸ್ ಪಕ್ಷವು ವಿಧಾನಸಭೆ ಚುನಾವಣೆಗೆ ಪರಿಣಾಮಕಾರಿ ಪ್ರಣಾಳಿಕೆ ತರಲು ತಯಾರಿ ನಡೆಸಿದ್ದು, ಇದಕ್ಕಾಗಿ ಕೆಲವು ಮಂದಿ ಮುಖಂಡರು ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ.
ಈ ವಿಷಯವನ್ನು ಪ್ರಣಾಳಿಕಾ ಸಮಿತಿ ಅಧ್ಯಕ್ಷರಾಗಿರುವ ಎಂ.ವೀರಪ್ಪ ಮೋಯ್ಲಿ ಅವರು ಸ್ಪಷ್ಟಪಡಿಸಿದ್ದು. ಹುಬ್ಬಳ್ಳಿಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
2018 ರ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪ್ರಣಾಳಿಕೆ ತಯಾರಿ ನಡೆದಿದ್ದು, ಈ ಸಂಬಂಧ ರಾಜ್ಯ ಪ್ರವಾಸ ಕೈಗೊಂಡಿದ್ದು ಜನರ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ ಎಂದಿದ್ದಾರೆ.

ಈ ಭಾರಿಯ ಪ್ರಣಾಳಿಕೆಯು ರಾಜ್ಯದ ಎಲ್ಲ ಭಾಗಗಳ ಜನಗಳನ್ನೂ ಗಮನದಲ್ಲಿಟ್ಟುಕೊಂಡು ಮಾಡಲಾಗುತ್ತಿದ್ದು, ಜೀವನ ಮೌಲ್ಯ ಸುಧಾರಣೆ, ಬಡತನ ನಿವಾರಣೆ, ಗ್ರಾಮೋದ್ಧಾರಗಳು ಪ್ರಣಾಳಿಕೆಯ ಪ್ರಮುಖ ವಿಷಯಗಳಾಗಿರುತ್ತವೆ ಎಂದು ಅವರು ಹೇಳಿದ್ದಾರೆ.
ಮೊದಲಿಗೆ ಪ್ರಣಾಳಿಕೆಯ ಕಡರು ಸಿದ್ದಪಡಿಸಿ ಜನವರಿ 15ಕ್ಕೆ ಕೆಪಿಸಿಸಿ ಅಧ್ಯಕ್ಷರಿಗೆ ಹಾಗೂ ಮುಖ್ಯಮಂತ್ರಿಗೆ ಸಲ್ಲಿಸಿ ಒಪ್ಪಿಗೆ ಪಡೆಯಲಾಗುತ್ತದೆ, ಆ ನಂತರ ಪ್ರಣಾಳಿಕೆ ಘೋಷಣೆ ಆಗಲಿದೆ ಎಂದು ಅವರು ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ಜನಪರ ಕಾರ್ಯಗಳೇ ಕಾಂಗ್ರೆಸ್ ಗೆ ಚುನಾವಣೆಯಲ್ಲಿ ಬಲವಾಗಲಿದೆ ಹಾಗಾಗಿ ಅವರ ಅಭಿವೃದ್ಧಿ ಕಾರ್ಯಗಳನ್ನು ಪ್ರತಿಫಲಿಸುವಂತಹಾ ಹಾಗೂ ಅದಕ್ಕೆ ಪೂರಕವಾದ ಅಂಶಗಳುಳ್ಳ ಪ್ರಣಾಳಿಕೆಯನ್ನು ಈ ಬಾರಿ ರಾಜ್ಯದ ಜನತೆ ನೋಡಲಿದ್ದಾರೆ ಎಂದು ಅವರು ಹೇಳಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications