ಹುಬ್ಬಳ್ಳಿ: ಮಾತೆ ಮಹಾದೇವಿ ವಿರುದ್ಧ ಮುಂದುವರೆದ ಪ್ರತಿಭಟನೆ
ಹುಬ್ಬಳ್ಳಿ, ಆಗಸ್ಸ್ 01 : ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಒತ್ತಾಯ ಮಾಡುತ್ತಿರುವ ಮಾತೆ ಮಹಾದೇವಿ ಹಾಗೂ ಅವರ ಬೆಂಬಲಿಗರು ಪಂಚಪೀಠಗಳ ಪರಂಪರೆಯನ್ನು ಅವಹೇಳನ ಮಾಡುತ್ತಿದ್ದಾರೆಂದು ಆರೋಪಿಸಿ ವಿವಿಧ ಮಠಾಧೀಶರು, ವೀರಶೈವ ಮುಖಂಡರು ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಯಲ್ಲಾಪುರ ಓಣಿಯ ಶ್ರೀಶೈಲ ಮಠದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ, ಶಿಂಪಿಗಲ್ಲಿ, ಜವಳಿಸಾಲ, ದುರ್ಗದಬೈಲ್, ಬ್ರಾಡವೇ, ಮ್ಯಾದಾರ ಓಣಿ, ದಾಜೀಬಾನಪೇಟೆ, ಕೆಸಿ ಸರ್ಕಲ್, ಮಿನಿ ವಿಧಾನಸೌಧ ತಲುಪಿತು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ನೂರಾರು ಪ್ರತಿಭಟನಾಕಾರರು ಮಾತೆ ಮಹಾದೇವಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮಾತೆ ಮಹಾದೇವಿ ಅವರು ವೀರಶೈವ ಹಾಗೂ ಅವರ ಆಚರಣೆ ಕುರಿತು ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಬಸವಣ್ಣನ ವಚನಗಳನ್ನು ಕೃತಿಚೌರ್ಯ ಮಾಡಿ ಸಮುದಾಯದಿಂದ ತಿರಸ್ಕೃತಗೊಂಡಿದ್ದ ಇವರು ಸನಾತನ ವೀರಶೈವ ಧರ್ಮವನ್ನು ಒಡೆಯುವ ಕೆಲಸಕ್ಕೆ ಕೈ ಹಾಕಿದ್ದಾರೆ.
ಮುಖ್ಯವಾಗಿ ಮಾತೆ ಮಹಾದೇವಿಗೆ ಸ್ವಾಮಿಯಾಗುವ ಅರ್ಹತೆಯೇ ಇಲ್ಲ. ಇದನ್ನೇ ಹೇಳಿದ ಪಂಚಪೀಠಾಧೀಶ್ವರರ ವಿರುದ್ಧ ಮಾತೆ ಮಹಾದೇವಿ ಹಾಗೂ ಅವರ ಬೆಂಬಲಿಗರು ಅವಹೇಳನಕಾರಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಪ್ರತಿಭಟನೆಕಾರರು ಕಿಡಿ ಕಾರಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications