ರಾಜೀವ್ ಚಂದ್ರಶೇಖರ್ ಆಯ್ಕೆ ಸಂತಸ ತಂದಿದೆ: ವಿಜಯ ಸಂಕೇಶ್ವರ್
ಹುಬ್ಬಳ್ಳಿ, ಮಾರ್ಚ್ 13: ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಆರ್ ಎಲ್ ಸಮೂಹ ಸಂಸ್ಥೆಯ ಸಂಸ್ಥಾಪಕ ವಿಜಯ ಸಂಕೇಶ್ವರ್ ಹುಬ್ಬಳ್ಳಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸುತ್ತಿದ್ದಾರೆ.
ವಿಜಯ ಸಂಕೇಶ್ವರ್ ಅವರು ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಕೊನೆಯ ಕ್ಷಣದಲ್ಲಿ ರಾಜ್ಯಸಭಾ ಟಿಕೆಟ್ ಅನ್ನು ರಾಜೀವ್ ಚಂದ್ರಶೇಖರ್ ಅವರಿಗೆ ನೀಡಲಾಗಿತ್ತು. ರಾಜೀವ್ ಅವರಿಗೆ ಟಿಕೆಟ್ ನೀಡಿದ ಬೆನ್ನಲ್ಲೆ ವಿಜಯ ಸಂಕೇಶ್ವರ್ ಅವರು ಸುದ್ದಿಗೋಷ್ಠಿ ಕರೆದಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು.
59 ರಾಜ್ಯಸಭಾ ಸೀಟುಗಳಿಗೆ ಮಾ.23 ರಂದು ಮತದಾನ ನಡೆಯಲಿದೆ. ಕರ್ನಾಟಕ ಬಿಜೆಪಿಯಿಂದ ವಿಜಯ ಸಂಕೇಶ್ವರ್ ಪ್ರಬಲ ಟಿಕೇಟ್ ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿ ಉದ್ಯಮಿ ರಾಜೀವ್ ಚಂದ್ರಶೇಖರ್ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದ್ದರಿಂದ ಅವರಿಗೆ ಟಿಕೇಟ್ ಕೈತಪ್ಪಿದೆ. ಕನ್ನಡಿಗರಿಗೇ ಟಿಕೇಟ್ ನೀಡಬಹುದಿತ್ತು ಎಂಬ ಮಾತು ಹಲವೆಡೆಯಿಂದ ಕೇಳಿಬರುತ್ತಿದೆ.

ವಿಜಯ ಸಂಕೇಶ್ವರ್ ಅವರು ಬಿಜೆಪಿ ತ್ಯಜಿಸುತ್ತಾರೆ ಎಂಬ ಊಹಾಪೋಹಗಳಿಗೆ ಅವರು ತೆರೆ ಎಳೆದಿದ್ದಾರೆ. ಸಂಕೇಶ್ವರ್ ಅವರು ಬಿಜೆಪಿಯೊಂದಿಗೇ ಮುಂದುವರೆಯಲಿದ್ದಾರೆ.
ರಾಜ್ಯಸಭಾ ಚುನಾವಣೆ ಟಿಕೆಟ್ಗೆ ನಾನು ಅರ್ಜಿ ಹಾಕಿಲ್ಲ ಹಾಗಾಗಿ ನನಗೆ ಅಸಮಾಧಾನ ಆಗಿಲ್ಲ, ರಾಜೀವ್ ಚಂದ್ರಶೇಖರ್ ಅವರು ರಾಜ್ಯಸಭೆಗೆ ಆಯ್ಕೆ ಆಗಿರುವುದು ಸಂತೋಷವಾಗಿದೆ.
ಬಿಜೆಪಿ ಜೊತೆಗೇ ಇರುವ ಸುಳಿವು ಕೊಡುತ್ತಿರುವ ವಿಜಯ ಸಂಕೇಶ್ವರ್, ಬಿಜೆಪಿಗೆ ಗುಡ್ಬೈ ಇಲ್ಲ. ಮೋದಿ ಹಾಗೂ ಯಡಿಯೂರಪ್ಪ ಅವರನ್ನು ಹೊಗಳುತ್ತಿರುವ ವಿಜಯ ಸಂಕೇಶ್ವರ.
ಕಾಂಗ್ರೆಸ್ ಹಠಾವೊ ಅಭಿಯಾನದಲ್ಲಿ ಗಂಭೀರವಾಗಿ ತೊಡಗಿಕೊಳ್ಳಲಿದ್ದೇನೆ, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು, ಹಾಗೂ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡುವುದಕ್ಕೆ ನಾನು ಕಾರ್ಯ ಮಾಡುತ್ತೇನೆ.
ರಾಜೀವ್ ಚಂದ್ರಶೇಖರ್ ಅವರ ಕರ್ನಾಟಕಕ್ಕೆ ಸಾಕಷ್ಟು ಕೊಡುಗೆ ಕೊಟ್ಟಿದ್ದಾರೆ. ಅವರ ತಂದೆಯವರು ಆರ್ಎಸ್ಎಸ್ ಮತ್ತು ಜನಸಂಘಕ್ಕಾಗಿ ದುಡಿದಿದ್ದಾರೆ.
ನಾನು ರಾಜ್ಯಸಭಾ ಟಿಕೆಟ್ ಕೇಳಿರಲಿಲ್ಲ, ಆದರೆ ಯಡಿಯೂರಪ್ಪ ಅವರೇ ಪ್ರೊಫೈಲ್ ಕೊಡಲು ಹೇಳಿದ್ದರು.
ನಿಮ್ಮದು ಮತ್ತು ರಾಜೀವ್ ಚಂದ್ರಶೇಖರ್ ಅವರ ಹೆಸರು ಶಾರ್ಟ್ ಲಿಸ್ಟ್ ಆಗಿದೆ ಎಂದು ಜಗದೀಶ್ ಶೆಟ್ಟರ್ ಅವರೂ ಕೂಡಾ ಹೇಳಿದ್ದರು.
More From
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications