ರಾಜ್ಯ ಒಲಿಂಪಿಕ್ಸ್ ಕಬಡ್ಡಿ: ಕೆಎಸ್ ಪಿ, ವಿಜಯ ಬ್ಯಾಂಕ್ ಚಾಂಪಿಯನ್
ಹುಬ್ಬಳ್ಳಿ-ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ಒಲಿಂಪಿಕ್ಸ್ ಕಬ್ಬಡ್ಡಿಯಲ್ಲಿ ಫೈನಲ್ ಪಂದ್ಯದಲ್ಲಿ ಮಹಿಳೆಯರ ಕೆಎಸ್ ಪಿ ಹಾಗೂ ಪುರುಷರ ವಿಜಯ ಬ್ಯಾಂಕ್ ತಂಡಗಳು ಪ್ರಶಸ್ತಿ ಗೆದ್ದಿವೆ.
ಹುಬ್ಬಳ್ಳಿ, ಫೆಬ್ರವರಿ, 8 : ರಾಜ್ಯ ಒಲಿಂಪಿಕ್ಸ್ ನ ಕಬಡ್ಡಿ ಫೈನಲ್ ಪಂದ್ಯದಲ್ಲಿ ಮಹಿಳೆಯರ ವಿಭಾದಲ್ಲಿ ಕೆಎಸ್ ಪಿ ಹಾಗೂ ಪುರುಷರ ವಿಭಾದಲ್ಲಿ ವಿಜಯ ಬ್ಯಾಂಕ್ ತಂಡಗಳು ಚಾಂಪಿಯನ್ ಆಗಿ ಹೊರಹೊಮ್ಮಿವೆ.
ನಗರದ ನೆಹರು ಮೈದಾನದಲ್ಲಿ ಹೊನಲು ಬೆಳಕಿನಲ್ಲಿ ನಡೆದ ಪುರುಷರ ಕಬಡ್ಡಿ ಫೈನಲ್ ಪಂದ್ಯದಲ್ಲಿ ವಿಜಯ ಬ್ಯಾಂಕ್ ತಂಡ ಬಿಎಂಟಿಸಿಯನ್ನು 22-11 ಅಂತರದಲ್ಲಿ ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.
ಇದಕ್ಕೂ ಮೊದಲು ನಡೆದ ಬಿಎಂಟಿಸಿ ಮತ್ತು ಕೆಎಸ್ ಪಿ ನಡುವಿನ ಸೆಮಿಫೈನಲ್ ಪಂದ್ಯದಲ್ಲಿ ಬಿಎಂಟಿಸಿ ತಂಡವು 34-27 ಪಾಯಿಂಟ್ಗಳಿಂದ ಕೆಎಸ್ ಪಿ ಎದುರು ಜಯಿಸಿ ಪೈನಲ್ ಪ್ರವೇಶಿಸಿತ್ತು.

ಮತ್ತೊಂದೆಡೆ ಎಸ್ಬಿಎಂ ಹಾಗೂ ವಿಜಯ ಬ್ಯಾಂಕ್ ನಡುವೆ ನಡೆದ ಸೆಮೀಸ್ ನಲ್ಲಿ ವಿಜಯ ಬ್ಯಾಂಕ್ 36-24 ಪಾಯಿಂಟ್ಗಳಿಂದ ಗೆದ್ದು ಫೈನಲ್ ಲಗ್ಗೆ ಇಟ್ಟಿತು.
ನಂತರ ಪ್ರಶಸ್ತಿಗೆಗಾಗಿ ನಡೆದ ಕಾದಾಟದಲ್ಲಿ ಅಂತಿಮವಾಗಿ ವಿಜಯ ಬ್ಯಾಂಕ್ ಬಿಎಂಟಿಸಿ ಎದುರು 11 ಅಂಕಗಳೊಂದಿಗೆ ಗೆಲುವಿನ ನಗೆ ಬೀರಿತು. ಇನ್ನು ಬಿಎಂಟಿಸಿ ತಂಡ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು.
ಮಹಿಳೆಯರ ತಂಡ : ಕೆಎಸ್ ಪಿ ತಂಡ ಮಹಿಳೆಯರ ವಿಭಾಗದಲ್ಲಿ ಚಾಂಪಿಯನ್ ಆಯಿತು. ಈ ತಂಡ ಫೈನಲ್ನಲ್ಲಿ ಬೆಂಗಳೂರಿನ ಜೆಕೆಸಿ ವಿರುದ್ಧ 29-10 ಪಾಯಿಂಟ್ಗಳಿಂದ ಜಯ ಪಡೆಯಿತು.

ಇದಕ್ಕೂ ಮೊದಲು ನಡೆದ ಸೆಮಿ ಫೈನಲ್ನಲ್ಲಿ ಕೆಎಸ್ ಪಿ ತಂಡವು 36-14 ಅಂತರದಲ್ಲಿ ಬೆಂಗಳೂರಿನ ಕೇಶವ ತಂಡವನ್ನ ಸೋಲಿಸಿತು. ಜೆಕೆಸಿಯು 28-18ರಲ್ಲಿ ಬೆಳಗಾವಿ ವಿರುದ್ಧ ಜಯಿಸು ಪ್ರಶಸ್ತಿ ಸುತ್ತು ತಲುಪಿತ್ತು.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ












Click it and Unblock the Notifications