ವಿನಯ್ ಕುಲಕರ್ಣಿ ಧರ್ಮ ಮುಖವಾಡದ ಮೂಲಕ ದಾರಿ ತಪ್ಪಿಸುತ್ತಿದ್ದಾರೆ
ಹುಬ್ಬಳ್ಳಿ, ಡಿಸೆಂಬರ್ 05 : ಸಚಿವ ವಿನಯ್ ಕುಲಕರ್ಣಿ ಧರ್ಮ ಮುಖವಾಡ ಮೂಲಕ ಪ್ರಕರಣ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಅರವಿಂದ್ ಬೆಲ್ಲದ ಆರೋಪ ಮಾಡಿದರು.
ಹುಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗಿಶ್ ಗೌಡ ಕೊಲೆ ಪ್ರಕರಣದಲ್ಲಿ ಸಚಿವ ವಿನಯ ಕುಲಕರ್ಣಿ ಕೈವಾಡದ ಬಗ್ಗೆ ಅನುಮಾನ ಇದೆ. ಹೀಗಾಗಿ ವಿನಯ್ ಕುಲಕರ್ಣಿ ಧರ್ಮ ಮುಖವಾಡ ಮೂಲಕ ಪ್ರಕರಣ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಅರವಿಂದ್ ಬೆಲ್ಲದ್, ಸೋಮಣ್ಣ ಬೇವಿನ ಮರದ, ಅಮೃತ ದೇಸಾಯಿ ಜಂಟಿ ಸುದ್ದಿಗೋಷ್ಟಿಯಲ್ಲಿ ಗಂಭೀರವಾದ ಆರೋಪ ಮಾಡಿದರು.

ಧರ್ಮ ರಾಜಕಾರ ಮಾಡುವದನ್ನು ಬಿಟ್ಟು ವಿನಯ್ ಕುಲಕರ್ಣಿ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಅವರ ವಿರುದ್ದ ತನಿಖೆಯನ್ನು ನಡೆಸಬೇಕು. ಅದರ ಜೊತೆಗೆ ಸಂಧಾನಕ್ಕೆ ಯತ್ನಿಸಿದ ಡಿವೈಎಸ್ಪಿ ಸುಲ್ಪಿಯನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.
ಪ್ರಕರಣವನ್ನು ದಾರಿ ತಪ್ಪಿಸಲು ಸಂಸದ ಪ್ರಹ್ಲಾದ್ ಜೋಶಿ ವಿರುದ್ಧ ಪ್ರತಿಭಟನೆ ಮಾಡಿಸುತ್ತಿದ್ದಾರೆ. ಈ ಮೂಲಕ ಪ್ರಕರಣ ತಿರುಚುವ ಕುತಂತ್ರ ನಡೆದಿದೆ. ಬೇರೆ ಬೇರೆಯವರನ್ನ ಕರೆತಂದು ಲಿಂಗಾಯತ ಟೋಪಿ ಹಾಕಿ ಜೋಶಿ ವಿರುದ್ದ ಪ್ರತಿಭಟನೆ ಮಾಡಿಸುತ್ತಿದ್ದಾರೆ. ಇಂದು ಪ್ರತಿಭಟನೆಯಲ್ಲಿ ಭಾಗಿಯಾದವರು ಲಿಂಗಾಯತ ರಲ್ಲ ಎಂದರು.
ಇದೇ ವೇಳೆ ಮಾತನಾಡಿದ ಅಮೃತ ದೇಸಾಯಿ, ವಿನಯ್ ಕುಲಕರ್ಣಿ ವಿರುದ್ದ ನಮ್ಮ ಕಾನೂನು ಹೋರಾಟ ಆರಂಭವಾಗಿದೆ. ಈಗಾಗಲೇ ವಿನಯ್ ಕುಲಕರ್ಣಿ ವಿರುದ್ಧ ಗುರುನಾಥ ಗೌಡ ದೂರು ನೀಡಿದ್ದಾರೆ. ಆದ್ರೆ ಪೊಲೀಸರು ಇದುವರೆಗೂ ದೂರು ದಾಖಲಿಸಿಕೊಂಡಿಲ್ಲ. ನಾನು ವಿನಯ್ ಕುಲಕರ್ಣಿ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ತಯಾರಿ ನಡೆಸಿದ್ದೇನೆ ಎಂದರು.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications