ಹುಬ್ಬಳ್ಳಿ ಹಿಂಸಾಚಾರ: ಅಮಾಯಕರ ಬಂಧನದ ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ ಗರಂ

ಬೆಂಗಳೂರು ಏಪ್ರಿಲ್ 19: ಹುಬ್ಬಳ್ಳಿ ಹಿಂಸಾಚಾರದಲ್ಲಿ ಅಮಾಯಕರ ಬಂಧನದ ವಿರುದ್ಧ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡುವ ಮೂಲಕ ಕುಮಾರಸ್ವಾಮಿ ಕಿರಿ ಕಾರಿದ್ದಾರೆ.

'ತಿಳಿಗೇಡಿ ಯುವಕನ ಪ್ರಚೋದನಾತ್ಮಕ ಪೋಸ್ಟ್ ನಿಂದ ಹುಬ್ಬಳ್ಳಿಯಲ್ಲಿ ನಡೆದ ಗಲಾಟೆಯಲ್ಲಿ ಕಿಡಿಗೇಡಿಗಳ ಜತೆಗೆ ಕೆಲ ಅಮಾಯಕರನ್ನೂ ಪೊಲೀಸರು ಬಂಧಿಸಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ. ಉದ್ರಿಕ್ತ ಮತಿಗೇಡಿ ಯುವಕರು ಎಸಗಿದ ಕೃತ್ಯಕ್ಕೆ ಸಂಬಂಧವಿಲ್ಲದವರನ್ನೂ ವಶಕ್ಕೆ ಪಡೆಯಲಾಗಿದೆ. ಕೆಲ ಕುಟುಂಬಗಳ ತಂದೆ-ತಾಯಂದಿರು ನನಗೆ ನಿರಂತರವಾಗಿ ಮೊಬೈಲ್ ಕರೆ ಮಾಡಿ ಕಣ್ಣೀರು ಹಾಕುತ್ತಿದ್ದಾರೆ. ಈ ಬಗ್ಗೆ ನಾನು ಈಗಾಗಲೇ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರ ಜತೆ ಮಾತನಾಡಿದ್ದೇನೆ. ಪೊಲೀಸ್ ಠಾಣೆ, ಆಸ್ಪತ್ರೆ, ದೇವಾಲಯದ ಮೇಲೆ ಕಲ್ಲು ಹೊಡೆದವರನ್ನು ಬಿಡಬೇಡಿ, ಅಮಾಯಕರಿಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾಡಿದ್ದೇನೆ' ಎಂದಿದ್ದಾರೆ.

Hubballi Violence: HD Kumaraswamys outrage against Innocent arrests


ಸಿಸಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆ ದೃಶ್ಯಗಳಲ್ಲಿ ಇಲ್ಲದವರನ್ನು ಬಿಟ್ಟು ಕಳಿಸಲಾಗುವುದು ಎಂದು ಪೊಲೀಸ್ ಆಯುಕ್ತರು ನನಗೆ ಭರವಸೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಗಲಾಟೆಗೆ ಸಂಬಂಧವಿಲ್ಲದ ಮುಗ್ಧರಿಗೆ ತೊಂದರೆ ಆಗುವುದು ಬೇಡ. ಅಂಜುಮನ್ ಸಂಸ್ಥೆ ಮುಖಂಡರ ಜತೆ ತೆರಳಿ ಪೊಲೀಸರಿಗೆ ಮನವಿ ಕೊಡಿ ಎಂದು ಈಗಾಗಲೇ ನಮ್ಮ ಪಕ್ಷದ ಮುಖಂಡರಿಗೂ ಸೂಚಿಸಿದ್ದೇನೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ, ಮುಗ್ಧರಿಗೆ ಅನ್ಯಾಯ ಆಗದಿರಲಿ ಎನ್ನುವುದು ನನ್ನ ಮನವಿಯಾಗಿದೆ ಎಂದಿದ್ದಾರೆ.

Hubballi Violence: HD Kumaraswamys outrage against Innocent arrests

ಹುಬ್ಬಳ್ಳಿ ಸದಾ ಶಾಂತಿಯನ್ನು ಬಯಸುವ ನಗರ. ಸಾಹಿತ್ಯ, ಸಾಂಸ್ಕೃತಿಕ ಪರಂಪರೆಯುಳ್ಳ ತಾಣ. ಕೆಲ ವರ್ಷಗಳಿಂದ ಇಲ್ಲಿ ಎಲ್ಲ ಸಮುದಾಯದವರು ಸಹೋದರರಾಗಿ ಬಾಳಿ ಬದುಕುತ್ತಿದ್ದಾರೆ. ಬವಣೆಯಲ್ಲಿ ಬೇಯುತ್ತಿರುವ ಬದುಕನ್ನು ಕಟ್ಟಿಕೊಳ್ಳುವ ಬದಲು ಕೋಮುದಳ್ಳುರಿ ಹರಡುವುದು ಬೇಡ ಎಂದು ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+