ವಿಶ್ವಮಾನವ ಎಕ್ಸ್ಪ್ರೆಸ್ ರೈಲು ಬೆಳಗಾವಿ ತನಕ ವಿಸ್ತರಣೆ
ಹುಬ್ಬಳ್ಳಿ, ಅಕ್ಟೋಬರ್ 14 : ವಿಶ್ವಮಾನವ ಎಕ್ಸ್ಪ್ರೆಸ್ ರೈಲನ್ನು ಬೆಳಗಾವಿ ತನಕ ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ. ಮೈಸೂರು-ಹುಬ್ಬಳ್ಳಿ ನಡುವೆ ಈ ರೈಲು ಸಂಚಾರ ನಡೆಸುತ್ತಿದೆ.
ರೈಲ್ವೆ ಖಾತೆ ರಾಜ್ಯ ಸಚಿವ ಮತ್ತು ಬೆಳಗಾವಿ ಸಂಸದ ಸುರೇಶ್ ಅಂಗಡಿ ಈ ಕುರಿತು ಮಾಹಿತಿ ನೀಡಿದ್ದಾರೆ. " ಬೆಳಗಾವಿ ಜನರ ಬಹುದಿನದ ಬೇಡಿಕೆ ಇದ್ದು ವಿಶ್ವಮಾನವ ಎಕ್ಸ್ಪ್ರೆಸ್ ರೈಲನ್ನು ಬೆಳಗಾವಿ ತನಕ ವಿಸ್ತರಣೆ ಮಾಡಲಾಗುತ್ತದೆ" ಎಂದರು.
ಶಿವಮೊಗ್ಗ-ಬೆಂಗಳೂರು ಶತಾಬ್ದಿ ರೈಲು ಸಮಯ ಪರಿಷ್ಕರಣೆ
ಹರಿಹರ-ಕೊಟ್ಟೂರು ನಡುವೆ ಸಂಚಾರ ನಡೆಸುವ ರೈಲನ್ನು ಹೊಸಪೇಟೆ ತನಕ ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ. ಅಕ್ಟೋಬರ್ 17ರಂದು ರೈಲು ಸಂಚಾರಕ್ಕೆ ಹಸಿರು ನಿಶಾನೆಯನ್ನು ತೋರಿಸಲಾಗುತ್ತದೆ.
ದೀಪಾವಳಿ; ಮೈಸೂರು-ವಿಜಯಪುರ ನಡುವೆ ವಿಶೇಷ ರೈಲು
ಹುಬ್ಬಳ್ಳಿ-ಲೋಕಮಾನ್ಯ ತಿಲಕ್ ಎಕ್ಸ್ಪ್ರೆಸ್ ರೈಲಿಗೆ ರಾಯಭಾಗದಲ್ಲಿ ನಿಲುಗಡೆ ನೀಡಬೇಕು ಎಂದು ಜನರು ಬೇಡಿಕೆ ಇಟ್ಟಿದ್ದರು. ರೈಲ್ವೆ ಇಲಾಖೆ ಇದಕ್ಕೆ ಒಪ್ಪಿಗೆ ನೀಡಿದ್ದು, ರಾಯಭಾಗದಲ್ಲಿ ರೈಲು ನಿಲ್ಲಿಸಬೇಕು ಎಂದು ಆದೇಶ ಹೊರಡಿಸಿದೆ.
ಕೊಚ್ಚುವೆಲಿ-ಬೆಂಗಳೂರು ರೈಲು ಮೈಸೂರು ತನಕ ವಿಸ್ತರಣೆ
ಯಶವಂತಪುರ-ವಿಜಯಪುರ ನಡುವೆ ಹೊಸ ರೈಲು ಓಡಿಸಲು ಇಲಾಖೆ ತೀರ್ಮಾನಿಸಿದೆ. ರೈಲಿನ ಮಾರ್ಗ, ನಿಲುಗಡೆ, ಸಮಯ ಕೆಲವೇ ದಿನಗಳಲ್ಲಿ ಅಂತಿಮಗೊಳ್ಳಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ದೀಪಾವಳಿ ಪ್ರಯುಕ್ತ ನೈಋತ್ಯ ರೈಲ್ವೆ ಅಕ್ಟೋಬರ್ 25ರಂದು ಮೈಸೂರು-ವಿಜಯಪುರ ನಡುವೆ ವಿಶೇಷ ರೈಲನ್ನು ಓಡಿಸಲಿದೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ ಕಾರವಾರಕ್ಕೆ ಸಹ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ.