ಹುಬ್ಬಳ್ಳಿಯಲ್ಲಿ ಪೇಜಾವರ ಶ್ರೀಗಳಿಗೆ ನಾಣ್ಯದ ತುಲಾಭಾರ
ಹುಬ್ಬಳ್ಳಿ, ಅಕ್ಟೋಬರ್ 12: ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರಿಗೆ ಇಂದು (ಅಕ್ಟೋಬರ್ 12) ಗುರುವಾರ ಹುಬ್ಬಳ್ಳಿಯಲ್ಲಿ ನಾಣ್ಯದ ತುಲಾಭಾರ ಮಾಡಲಾಯಿತು.
ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳ ಷಷ್ಟ್ಯಬ್ದ ಅಂಗವಾಗಿ ಅಖಿಲ ಭಾರತ ಮಾಧ್ವ ಮಹಾಮಂಡಲದ ವತಿಯಿಂದ ಹುಬ್ಬಳ್ಳಿಯ ಶ್ರೀಕೃಷ್ಣ ಕಲ್ಯಾಣ ಮಂಟಪದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ಧಾರ್ಮಿಕ ಕಾರ್ಯದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಗೆ ನಾಣ್ಯದ ತುಲಾಭಾರ ನೆರವೇರಿಸಲಾಯಿತು.

ನಾಣ್ಯದ ತುಲಾಭಾರದ ಸೇವೆ ಪಡೆದ ಬಳಿಕ ಮಾತನಾಡಿದ ಪೇಜಾವರ ಶ್ರೀಗಳು, "ನಾನು ಸಮಾಜ ಸೇವೆ ಮಾಡಿದ್ದೇನೆ ಎಂದು ನನ್ನನ್ನು ಗೌರವಿಸಿದ್ದೀರಿ. ಅದೆಲ್ಲ ನಾನು ಮಾಡಿದ್ದಲ್ಲ. ಭಗವಂತನ ಪ್ರೇರಣೆಯಿಂದ ಎಲ್ಲವೂ ನಡೆಯುತ್ತಿದೆ" ಎಂದು ಹೇಳಿದರು.
"ಭಕ್ತರು ಮಾಡಿದ ತುಲಾಭಾರ ಸೇವೆಯನ್ನು ಶ್ರೀಕೃಷ್ಣನಿಗೆ ಸಮರ್ಪಣೆ ಮಾಡುತ್ತಿದ್ದೇನೆ ಎಂದ ಪೇಜಾವರ ಶ್ರೀಗಳು, ಎಲ್ಲವೂ ನಾನು ನನ್ನಿಂದ ಅನ್ನಬಾರದು ಇದು ಸರಿಯಾಗಿ ಕ್ರಮವಲ್ಲ ಪ್ರಾಣದೇವರು ಭಗವಂತ ಅಂತರಾಳದಲ್ಲಿನ ಭಗವಂತನಿಗೆ ತಾವು ಕೊಟ್ಟ ಗೌರವ ಇದು ಎಲ್ಲವೋ ನಾನೇ ಮಾಡಿದ್ದು ಅಲ್ಲ ಅದು ಭಗವಂತನ ಇಚ್ಛೇ ಅಷ್ಟೇ" ಎಂದರು. ಅಲ್ಲದೇ "ಇನ್ನು ತಾವು ಕೊಟ್ಟ ಗೌರವವನ್ನು ಅತ್ಯಂತ ಪ್ರಾಮಾಣಿಕತಯಿಂದ ಸ್ವೀಕಾರ ಮಾಡಿರುವೆ" ಎಂದರು.
ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳ ಷಷ್ಟ್ಯಬ್ದ ಅಂಗವಾಗಿ ಹುಬ್ಬಳ್ಳಿ ಶ್ರೀಕೃಷ್ಣ ಕಲ್ಯಾಣಮಂಟಪದಲ್ಲಿ ಬೆಳಗ್ಗೆ ಚಕ್ರಾಬ್ಜ ಮಂಡಲ ಮಹಾಪೂಜೆ ನೆರವೇರಿಸಲಾಯಿತು. ಬಳಿಕ ನರಸಿಂಹಾಚಾರ್ಯ ಕೊರ್ಲಹಳ್ಳಿ, ಡಾ.ಎಚ್.ಸತ್ಯನಾರಾಯಣಾಚಾರ್ಯ, ವಾದಿರಾಜಾಚಾರ್ಯ ತಡಕೋಡ, ಪ್ರದ್ಯುಮ್ನಾಚಾರ್ಯ ಜೋಶಿ, ಹರಿ ಆಚಾರ್ಯ ವಾಳ್ವೇಕರ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಇನ್ನು ತುಲಾಭಾರ ಸೇವೆಯ ನಂತರ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಅನುಗ್ರಹ ಸಂದೇಶ ನೀಡಿದರು. ಬಳಿಕ ಭಕ್ತರಿಗೆ ಫಲಮಂತ್ರಾಕ್ಷತೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಬ್ರಾಹ್ಮಣ ಸಮಾಜದ ಮುಖಂಡರು ಹಾಗೂ ಅನೇಕರು ಭಾಗವಹಿಸಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications