Waqf Row: ಜಮೀರ್ ಒಬ್ಬ ಮತಾಂಧ: ಜನರ ಕನ್ಫ್ಯೂಸ್ ಮಾಡೋ ಡಿಎನ್ಎ ಕಾಂಗ್ರೆಸ್ನಲ್ಲಿದೆ: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ, ನವೆಂಬರ್ 09: ವಕ್ಫ್ ಬೋರ್ಡ್ ಮೂಲಕ ರಾಜ್ಯದ ರೈತರು, ಬಡವರು, ಮಠಗಳ ಆಸ್ತಿಯನ್ನು ಅಕ್ರಮವಾಗಿ ತಮ್ಮದಾಸಿಕೊಳ್ಳಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆರೋಪ ಕೇಳಿ ಬಂದಿದೆ. ಆದರೆ ಕಾಂಗ್ರೆಸ್ನವರು ಬಿಜೆಪಿಯವರು ವಕ್ಫ ಆಸ್ತಿ ಸಂರಕ್ಷಣೆ ಮಾಡತ್ತಿದ್ದಾರೆ ಎಂದು ಹೇಳಿದ್ದಾರೆ. ಇವೆಲ್ಲ ಬುದ್ಧಿಹೀನ ಮಾತುಗಳು ಎಂದು ಕೇಂದ್ರ ಸಚಿ ವ ಪ್ರಹ್ಲಾದ್ ಜೋಶಿಯವರು ತಿಳಿಸಿದ್ದಾರೆ.
ಶನಿವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರು ಬುದ್ಧಿ ಇದ್ದು ಮಾಡ್ತೀದಾರೋ, ಬುದ್ಧಿ ಇಲ್ಲದೆ ಮಾತಾಡುತ್ತಿದ್ದಾರೆಯೋ ಗೊತ್ತಿಲ್ಲ.. ಅವರು ದುರುಳ ಬುದ್ಧಿಯಿಂದ ವಕ್ಫ್ ವಿಚಾರದಲ್ಲಿ ಹೀಗೆಲ್ಲ ಮಾಡುತ್ತಿದ್ದಾರೆ ಮತ್ತು ಮಾತನಾಡುತ್ತಿದ್ದಾರೆ ಎಂದು ಪ್ರಹ್ಲಾದ್ ಜೋಶಿ ಲೇವಡಿ ಮಾಡಿದರು.

ಕಾಂಗ್ರೆಸ್ ನವರು ಬಿಜೆಪಿ ವಕ್ಫ ಆಸ್ತಿ ಸಂರಕ್ಷಣೆ ಮಾಡುತ್ತಿದ್ದಾರೆ ಎಂದೊಮ್ಮೆ ಹೇಳುತ್ತಾರೆ. ಅನ್ವರ ಮಾನಪಾಡಿ ವರದಿ ಪ್ರಕಾರ ಕಾಂಗ್ರೆಸ್ ನವರೇ ವಕ್ಫ ಆಸ್ತಿ ಕಬಳಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಜನರನ್ನು ಕನ್ಫ್ಯೂಸ್ ಮಾಡುವ ಡಿಎನ್ನ ಕಾಂಗ್ರೆಸ್ನವರಲ್ಲಿದೆ ಎಂದು ಟೀಕಿಸಿದರು.
'ವಕ್ಫ' ನಮೂದು ಆಗಿರುವುದು ನಿಜವೇ?
ದ್ವಿಮುಖ ನೀತಿಯಿಂದಲೇ ಕಾಂಗ್ರೆಸ್ ಸರ್ವನಾಶ ಆಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಮಾತಾಡುತ್ತಲೇ ಅಂಬೇಡ್ಕರ ಅವರಿಗೆ ಘೋರ ಅಪಮಾನ ಮಾಡಿದ್ದಾರೆ. ಜಮೀನಿನ ಪಹಣಿಯಲ್ಲಿ ವಕ್ಫ ಎಂದು ಬಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ರೈತ ಸಾಲ ಮಾಡಿ ಸತ್ತಿರಬಹುದು ಎನ್ನುತ್ತಾರೆ. ಹಾಗಾದರೆ ವಕ್ಫ ಎಂದು ನಮೂದು ಆಗಿರುವುದು ನಿಜವೇ?
ಸಚಿವ ಜಮೀರ್ ಅಹ್ಮದ್ ಖಾನ್ ಒಬ್ಬ ಮತಾಂಧ ಮಂತ್ರಿ. ವಕ್ಫ್ ಬಗ್ಗೆ ಮಾತನಾಡಿದ್ದಕ್ಕೆ ಸಂಸದ ತೇಜಸ್ವೀ ಸೂರ್ಯ ಮೇಲೆ FIR ದಾಖಲು ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನಾನು ಈ ಬಗ್ಗೆ ಪ್ರಶ್ನಿಸುತ್ತೇನೆ. ಮಾತನಾಡುತ್ತೇನೆ. ನನ್ನ ಮೇಲೆಯೂ ಕೇಸ್ ಹಾಕಿ ಎಂದು ಅವರು ಸವಾಲೆಸೆದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ವಕ್ಫ ಗೆಜೆಟ್ ರದ್ದು ಮಾಡಿದ್ದಾರೆ. ನೀವು ನೋಟಿಸ್ ವಾಪಸ್ ಪಡೆಯಲು ಆದೇಶ ಮಾಡುವಂತೆ ಸೂಚಿಸಿದ್ದಾರೆ. ಇದುವರೆಗೆ ನೋಟಿಸ್ ವಾಪಸ್ ಪಡೆಯಲು ಅಧಿಕೃತ ಆದೇಶ ಆಗಿಲ್ಲ ಎಂದು ಅವರು ಕಿಡಿ ಕಾರಿದರು.
ಕಾಂಗ್ರೆಸ್ ಎಷ್ಟೇ ಟೋಕನ್ ಕೊಟ್ರೂ ಗೆಲ್ಲೋದು NDA
ಕರ್ನಾಟಕ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ "ಟೋಕನ್" ಮೊರೆ ಹೋಗಿದೆ ಎಂದು ಕೇಂದ್ರ ಸಚಿವರು ಆರೋಪಿಸಿದ್ದಾರೆ. ಶತಾಯ ಗತಾಯ ಉಪ ಚುನಾವಣೆ ಗೆಲ್ಲಬೇಕೆಂಬ ಭರದಲ್ಲಿ ಕಾಂಗ್ರೆಸ್ ಪಕ್ಷ ಟೋಕನ್ ಮೂಲಕ ಹಣ ಹಂಚಿಕೆ ಶುರು ಮಾಡಿದೆ ಎಂದು ಕುಟುಕಿದರು.
ಟೋಕನ್ ಹಂಚಿದ ಕಾಂಗ್ರೆಸ್ ಅದನ್ನು ತೋರಿಸಿದವರಿಗೆ ಹಣ ಕೊಟ್ಟು ಕಳಿಸುವ ವ್ಯವಸ್ಥೆ ಮಾಡಿದೆ ಎಂಬುದು ಮಾದ್ಯಮಗಳಲ್ಲಿ ವರದಿಯಾಗಿದೆ. ಕಾಂಗ್ರೆಸ್ ಲೂಟಿ ಮಾಡಿದ್ದನ್ನು ಹೀಗೆ ಹಂಚುತ್ತಿದೆ. ಕಾಂಗ್ರೆಸ್ ಅದೆಷ್ಟೇ ಟೋಕನ್ ಕೊಟ್ರೂ ಗೆಲ್ಲೋದು ಬಿಜೆಪಿ ನೇತೃತ್ವದ ಎನ್ಡಿಎ. ರಾಜ್ಯದಲ್ಲಿ ನಡೆಯುತ್ತಿರುವ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅದೆಷ್ಟೇ ಟೋಕನ್, ಹಣ ಹಂಚಿದರೂ ಗೆಲುವು ಬಿಜೆಪಿಗೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications