ಸಂಸದರಿಗೆ ಪಾದರಕ್ಷೆ ತೋರಿಸಿ ಎಸೆಯುತ್ತೇವೆ : ಅಗ್ನಿ ಶ್ರೀಧರ್
ಹುಬ್ಬಳ್ಳಿ, ಆಗಸ್ಟ್,31: ಕಳಸಾ ಬಂಡೂರಿ ವಿಷಯದಲ್ಲಿ ತಾರತಮ್ಯ ಮಾಡುತ್ತಿರುವ ಸಂಸದರಿಗೆ ಪಾದರಕ್ಷೆ ತೋರಿಸಿ, ಅವರ ಮೇಲೆ ಒಗೆಯುತ್ತೇವೆ ಎಂದು ಕರುನಾಡು ಸೇನೆಯ ಅಧ್ಯಕ್ಷ ಅಗ್ನಿ ಶ್ರೀಧರ್ ಹೇಳಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೋರ್ಟ್ ಗಳಲ್ಲಿ ಎಲ್ಲ ರೀತಿಯ ಕಷ್ಟಗಳನ್ನು ಪರಿಹರಿಸಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ನ್ಯಾಯಾಲಯದಲ್ಲಿ ಕಳಸಾ- ಬಂಡೂರಿ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಳ್ಳಲು ಆಗುವುದಿಲ್ಲ. ಆದಷ್ಟು ಬೇಗ ಪ್ರಧಾನಿ ನರೇಂದ್ರ ಮೋದಿ ಮತ್ತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗುತ್ತೇವೆ ಎಂದರು.[ಸೆ.10ರಂದು ರಾಜ್ಯದಲ್ಲಿ ರೈಲು ಸಂಚಾರ ಬಂದ್]

ಬಿಜೆಪಿ ಹತ್ತಿರ ಕಳಸಾ- ಬಂಡೂರಿಯ ಸಮಸ್ಯೆಗೆ ಪರಿಹಾರವಿದ್ದು, ಅವರ ಮೇಲೆ ಒತ್ತಡ ಹೇರಲು ಸೋನಿಯಾ ಗಾಂಧಿಯವರಿಗೆ ಮನವರಿಕೆ ಮಾಡಿಕೊಡಲಾಗುವುದು. ನರೇಂದ್ರ ಮೋದಿ ಕೇವಲ ದೇಶಕ್ಕಷ್ಟೇ ಎಲ್ಲ ರಾಜ್ಯಗಳಿಗೂ ಪ್ರಧಾನಿ ಮಂತ್ರಿ. ಅವರೇ ಮುಂದು ನಿಂತು ಕಳಸಾ-ಬಂಡೂರಿ ಸಮಸ್ಯೆಯನ್ನು ಇತ್ಯರ್ಥ ಪಡಿಸಬೇಕು ಎಂದರು.
ಗೋವಾ ಮುಖ್ಯಮಂತ್ರಿ ಲಕ್ಷ್ಮೀಕಾಂತ ಪರ್ಸೇಕರ ಅವರೊಂದಿಗೆ ನಾವು ಮಾತನಾಡಿದ್ದೇವೆ. ಅವರು ರಾಜ್ಯದ ಮುಖಂಡರ ಜತೆ ಮಾತನಾಡಲು ಸಿದ್ಧನಾಗಿದ್ದೇನೆ ಎಂದು ಹೇಳಿದ್ದಾರೆ. ಆದರೆ ರಾಜ್ಯದ ಸಂಸದರು ಪರ್ಸೇಕರ ಅವರನ್ನು ಭೇಟಿಯಾಗಲು ಹೋದಾಗ ನಮ್ಮೊಂದಿಗೆ ಮಾತನಾಡದಂತೆ ಪರ್ಸೇಕರ ಅವರಿಗೆ ಒತ್ತಡ ಹಾಕಿದ್ದರು ಎಂದು ಹೇಳಿದರು.[ನ್ಯಾಯಾಧಿಕರಣದ ಮಧ್ಯಂತರ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಮನವಿ]
ಅಲ್ಲಿನ ನೀರಾವರಿ ಸಚಿವರೊಂದಿಗೂ ಮಾತುಕತೆ ಮಾಡಿದ್ದೇವೆ, ಅವರೂ ನ್ಯಾಯಾಧಿಕರಣದ ತೀರ್ಪು ಯಾವ ರೀತಿಯಲ್ಲಿ ಬಂದರೂ 6 ತಿಂಗಳಲ್ಲಿ ಚುನಾವಣೆಯಿದ್ದು, ಆ ನಂತರ ಸಮಸ್ಯೆ ಬಗೆಹರಿಸೋಣ ಎಂದು ಭರವಸೆ ನೀಡಿದ್ದಾರೆ ಎಂದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications