ಮಹಾದಾಯಿ ಯೋಜನೆ ಜಾರಿ ನಿರ್ಲಕ್ಷ್ಯದ ಬಗ್ಗೆ ಲಿಖಿತ ಉತ್ತರ ಬೇಕು: ಸಂತೋಷ್ ಲಾಡ್
ಹುಬ್ಬಳ್ಳಿ, ಸೆಪ್ಟಂಬರ್ 10: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಉತ್ತರ ಕರ್ನಾಟಕದ ಜೀವನಾಡಿ ಮಹದಾಯಿ ನದಿ ನೀರು ಯೋಜನೆಗೆ ಕ್ಲಿಯರೆನ್ಸ್ ಕೊಡುತ್ತೇವೆ. ಯೋಜನೆ ಜಾರಿಗೆ ತರುತ್ತೇವೆ ಎಂದೆಲ್ಲ ಹೇಳಿದ್ದರು. ಈವರೆಗೆ ಈ ಯೋಜನೆಗೆ ಅನುಮೋದನೆ ಏಕೆ ನೀಡಿಲ್ಲ. ಈ ಬಗ್ಗೆ ಬಿಜೆಪಿ ಲಿಖಿತವಾಗಿ ಉತ್ತರಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರ ಜೊತೆಗೆ ಮಂಗಳವಾರ ಮಾತನಾಡಿದ ಅವರು, ಮಹದಾಯಿಗೆ ಏಕೆ ಇದುವರೆಗೆ ಕ್ಲಿಯರೆನ್ಸ್ ಕೊಡಲಾಗುತ್ತಿಲ್ಲ ಎಂಬುದರ ಬಗ್ಗೆ ಕೇಂದ್ರವು ರಾಜ್ಯ ಸರ್ಕಾರಕ್ಕೆ ಲಿಖಿತವಾಗಿ ಉತ್ತರ ನೀಡಲಿ. ಪರಿಸರ ಕ್ಲಿಯರೆನ್ಸ್ ನೀಡಲು ಎಷ್ಟು ಮರಗಳನ್ನು ಕಡಿಯಬೇಕಾಗುತ್ತದೆ ಎಂದು ಸರಿಯಾಗಿ ತಿಳಿಸಬೇಕು ಎಂದು ಕಿಡಿ ಕಾರಿದರು.

ಕೇಂದ್ರ ಮಂತ್ರಿಗಳು ರಾಜ್ಯಕ್ಕೆ ಬಂದು ಸರ್ಕಾರಕ್ಕೆ ಬಯ್ಯುವುದು ಒಂದೇ ಕೆಲಸ ಮಾಡುತ್ತಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಬಂದಾಗಿನಿಂದ ಎಷ್ಟು ಉಗ್ರರ ದಾಳಿಯಾಗಿದೆ. ಅದರ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಮಾತನಾಡುತ್ತಾರಾ? ಈ ಹಿಂದೆ ಕರ್ನಾಟಕ, ಗೋವಾ, ಕೇಂದ್ರ, ಜತೆಗೆ ಮಹಾರಾಷ್ಟ್ರದಲ್ಲಿ ಬಿಜೆಪಿಯವರದೇ ಸರ್ಕಾರಗಳಿದ್ದರೂ, ಮಹಾದಾಯಿ ಯೋಜನೆ ಮಾತ್ರ ಸಾಕಾರಗೊಳ್ಳುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಮಹದಾಯಿ ಬಗ್ಗೆ ಪ್ರಹ್ಲಾದ್ ಜೋಶಿ ಮಾತನಾಡಲಿ
ನೆರೆಯ ರಾಜ್ಯಗಳಿಗೆ ಪವರ್ ಲೈನ್ ಹೋಗಲು ಕ್ಲಿಯರೆನ್ಸ್ ನೀಡಿದ್ದಾರೆ. ಆದರೆ ಕರ್ನಾಟಕ ರಾಜ್ಯದ ಮಹಾದಾಯಿಗೆ ಕ್ಲಿಯರೆನ್ಸ್ ನೀಡಲು ಮಾತ್ರ ಬಿಜೆಪಿಗೆ ಏಕೆ ಆಗುತ್ತಿಲ್ಲ? ಈ ವಿಚಾರಗಳ ಬಗ್ಗೆ ಪ್ರಹ್ಲಾದ್ ಜೋಶಿಯವರು ಮೊದಲು ಮಾತನಾಡಬೇಕು ಎಂದು ಲಾಡ್ ಆಗ್ರಹಿಸಿದರು.

ಈಗ ಮಹದಾಯಿ ವಿಚಾರವಾಗಿ ಸರ್ವಪಕ್ಷ ನಿಯೋಗ ಹೋಗುತ್ತಿದೆ. ಈ ಹಿಂದೆ ಇವರು ಐದು ವರ್ಷ ಅಧಿಕಾರದಲ್ಲಿದ್ದಾಗ ಏನು ಮಾಡಿದ್ದಾರೆ? ರಾತ್ರೋರಾತ್ರೀ ಬಾಕಿಯಿರುವ ಕೆಲಸವನ್ನು ಮೋದಿಯವರು ಕ್ಲಿಯರ್ ಮಾಡುತ್ತಾರೆ ಎಂದು ಕೇಳಿದ್ದೇವೆ. ಅದೇ ರೀತಿ ಉತ್ತರ ಕರ್ನಾಟಕದ ಬಹುಭಾಗಕ್ಕೆ ನೀರಾವರಿ, ಕುಡಿಯಲು ನೀರು ಒದಗಿಸುವ ಮಹಾದಾಯಿಗೊಂದು ಅನುಮೋದನೆ ನೀಡಲಿ ಎಂದು ಹೇಳಿದರು.
ಈಗ ಅಕ್ಕಿ ವಿತರಣೆಗೆ ಒಪ್ಪಿದ್ದೇಕೆ?
ಪಡಿತರ ಅಕ್ಕಿ ಖರೀದಿಗೆ ರಾಜ್ಯ ಸರ್ಕಾರದ ಬಳಿ ಹಣದ ಇಲ್ಲ ಎಂದು ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು,ಆಹಾರ ಭದ್ರತೆ ಕಾಯ್ದೆ ತಂದವರು ಕಾಂಗ್ರೆಸ್ ನಾಯಕರು. ಪ್ರಧಾನಿ ಮೋದಿಯವರ ಅಕ್ಕಿ ವಿತರಣೆ ಬಗ್ಗೆ ಮಾತನಾಡುತ್ತಾರೆ. ಈ ಹಿಂದೆ ಅನ್ನಭಾಗ್ಯಕ್ಕೆ ಅಕ್ಕಿ ಕೇಳಿದಾಗ ರಾಜ್ಯ ಕೊಡದ ಕೇಂದ್ರ ಸರ್ಕಾರ ಈ ಹಿಂದೆ ಯಾಕೆ ನಮಗೆ ಕೊಡಲಿಲ್ಲ ಎಂದು ಖಾರವಾಗಿ ಪ್ರಶ್ನಿಸಿದರು.
ಈ ಕುರಿತು ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿತ್ತು. ಅಕ್ಕಿ ಪೂರೈಸುವಂತೆ ಕೇಳಿ ಕೊಂಡಿತ್ತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಈ ಹಿಂದೆ ಯಾಕೆ ಅಕ್ಕಿ ಕೊಡಲಿಲ್ಲ, ಈಗ ಕೊಡುತ್ತೇವೆ ಎನ್ನುತ್ತಿರುವುದು ಏಕೆ?. ಕಾರಣವೇನು ಎಂದು ಅವರು ಲಿಖಿತವಾಗಿ ಉತ್ತರಿಸಲಿ ಎಂದು ತಿಳಿಸಿದರು.
-
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ: ಶಿವಕುಮಾರ್ ಮೆಣಸಿನಕಾಯಿ ಬರಹ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications