ಗೆದ್ದ ಬೆನ್ನಲ್ಲೆ ರಾತ್ರೋ ರಾತ್ರಿ ಪ್ರಹ್ಲಾದ್ ಜೋಶಿ ದೆಹಲಿಗೆ ದೌಡಾಯಿಸಿದ್ದು ಏಕೆ?
ಹುಬ್ಬಳ್ಳಿ, ಜೂನ್ 05: ಧಾರವಾಡ ಲೋಕಸಭಾ ಚುಣಾವಣೆಯಲ್ಲಿ ಐದನೇ ಭಾರಿಗೆ ಪ್ರಹ್ಲಾದ್ ಜೋಶಿಯವರು ಗೆದ್ದು ಬೀಗಿದ್ದಾರೆ. ಕಾಂಗ್ರೆಸ್ನ ವಿನೋದ್ ಅಸೂಟಿ ಅವರಿಗೆ ಸೋಲಾಗಿದೆ. ಹೀಗೆ ಗೆಲುವಿನ ಫಲಿತಾಂಶ ಹೊರ ಬಿದ್ದ ಬೆನ್ನಲ್ಲೆ ಮಂಗಳವಾರ ರಾತ್ರೋ ರಾತ್ರಿ ಪ್ರಹ್ಲಾದ್ ಜೋಶಿಯವರು ದೆಹಲಿಗೆ ದೌಡಾಯಿಸಿದ್ದಾರೆ. ಇಷ್ಟು ಅವಸವರಸರವಾಗಿ ತೆರಳಿದ್ದು ಏಕೆ? ಹೈಕಮಾಂಡ್ ಬುಲಾವ್ ನೀಡಿತ್ತೆ? ಇಲ್ಲಿದೆ ಮಾಹಿತಿ
ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಗೆ ಗೆದ್ದಿದ್ದು, ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿಯೂ ಆಗಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚುನಾವಣೆ ಮತ ಎಣಿಕೆ ಮುಕ್ತಾಯದ ಬಳಿಕ ರಾತ್ರಿಯೇ ಹುಬ್ಬಳ್ಳಿಯಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿರುವುದು ಬಾರೀ ಕುತೂಹಲ ಸೃಷ್ಟಿಸಿದೆ.

ಕ್ಷೇತ್ರದಲ್ಲಿ ಬಿಜೆಪಿ ಗೆದ್ದ ನಂತರ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಮತ ಎಣಿಕೆ ಕೇಂದ್ರದಿಂದ ಪ್ರಮಾಣ ಪತ್ರ ಪಡೆದು ಪ್ರಹ್ಲಾದ್ ಜೋಶಿ, ಬೆಂಬಲಿಗರು, ಮುಖಂಡರು ಹಾಗೂ ಜೋಶಿಕುಟುಂಬದ ಸದಸ್ಯರು, ಧಾರವಾಡ ಜಿಲ್ಲೆಯ ಹಾಲಿ, ಮಾಜಿ ಶಾಸಕರು, ಧಾರವಾಡ ಹಾಗೂ ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಪಕ್ಷದ ಪ್ರಮುಖರು ಇಲ್ಲಿನ ಮುರುಘಾಮಠಕ್ಕೆ ಭೇಟಿ ನೀಡಿ ಆಶಿರ್ವಾದ ಪಡೆದರು. ಬೃಹತ್ ಮೆರವಣಿಗೆ ಮೂಲಕ ಗೆಲುವನ್ನು ಸಂಭ್ರಮಿಸಿದರು.
ಕೇಂದ್ರ ಸಚಿವ ಸಂಪುಟ ಸಭೆ
ಇದಾದ ಬಳಿಕ ಅವರು ನವದೆದೆಹಲಿಗೆ ತೆರಳಿದ್ದಾರೆ. ಅಲ್ಲಿ ಇಂದು ಬಧವಾರ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ. ಇಂದಿನ ಈ ಮಹತ್ವದ ಸಭೆಯಲ್ಲಿ ಪ್ರಹ್ಲಾದ್ ಜೋಶಿಯವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ದೆಹಲಿಗೆ ತೆರಳುವ ಮೊದಲು ಅವರು ಹುಬ್ಬಳ್ಳಿಗೆ ಆಗಮಿಸಿ ಹುಬ್ಬಳ್ಳಿಯ ಬೈರಿದೇವರಕೊಪ್ಪದ ಶ್ರೀ ಶಿವಾನಂದ ಮಠ, ಉಣಕಲ್ ನ ಶ್ರೀ ಸಿದ್ದೇಶ್ವರ ಮಠ ಸಿದ್ದಾರೂಢಮಠ, ಮೂರು ಸಾವಿರ ಮಠ ಸೇರಿದಂತೆ ವಿವಿಧ ಮಠ, ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿ ದೇವರ ದರ್ಶನ ಪಡೆದರು.
ನಂತರ ಗೋಕುಲ ರಸ್ತೆ ಮಾರ್ಗವಾಗಿ ಆರ್ಎಸ್ ಎಸ್ ಕಾರ್ಯಾಲಯ ಕೇಶವ ಕುಂಜ, ಅರವಿಂದ ನಗರದ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ನಂತರ ಕೇಶ್ವಾಪುರದ ಮಯೂರಿ ಎಸ್ಟೇಟ್ ನಲ್ಲಿರುವ ತಮ್ಮ ಮನೆಗೆ ತೆರಳಿ ನಂತರ ಮನೆಯಿಂದ ಹೊರಟು, ವಿಮಾನ ನಿಲ್ದಾಣ ಮೂಲಕ ದೇಹಲಿಗೆ ಹೋದರು ತಿಳದು ಬಂದಿದೆ.
ಸದ್ಯ ಧಾರವಾಡದಲ್ಲಿ ಪ್ರಹ್ಲಾದ್ ಜೋಶಿಯವರು ಎದುರಾಳಿ ಪಕ್ಷದ ಅಭ್ಯರ್ಥಿ ವಿನೋದ್ ಅಸೋಟಿ ಗೆಲ್ಲಿಸಲು ಪಣ ತೊಟ್ಟಿದ್ದ ಸಚಿವ ಸಂತೋಷ್ ಲಾಡ್ ಅವರ ವಿಧಾನಸಭಾ ಕ್ಷೇತ್ರದಲ್ಲಿ ಅತ್ಯಧಿಕ ಮತಗಳನ್ನು ಪಡೆದಿರುವುದು ಮತ್ತೊಂದು ವಿಶೇಷ ಎನ್ನಬಹುದು. ಇದರಿಂದ ಕಾಂಗ್ರೆಸ್ಗೆ ತೀವ್ರ ಹಿನ್ನಡೆ ಆಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications