ಕುಟುಂಬ ಕಲಹದಲ್ಲಿ ಇಬ್ಬರು ಮಕ್ಕಳನ್ನೇ ಉಸಿರುಗಟ್ಟಿಸಿ ಕೊಂದ ತಾಯಿ
ಹುಬ್ಬಳ್ಳಿ, ಡಿಸೆಂಬರ್ 13: ಮಕ್ಕಳು ಕೆಟ್ಟವರಿರಬಹುದು ಆದರೆ ತಾಯಿ ಎಂದಿಗೂ ಕೆಟ್ಟವಳಿರಲು ಸಾಧ್ಯವಿಲ್ಲ ಎಂಬ ಮಾತು ಈ ವಿಚಾರದಲ್ಲಿ ಸುಳ್ಳಾಗಿದೆ. ಪತಿಯೊಂದಿಗೆ ಜಗಳವಾಡಿ ಬೇಸತ್ತು ಕೋಪದಲ್ಲಿ ತನ್ನಿಬ್ಬರು ಮಕ್ಕಳನ್ನೇ ಉಸಿಗಟ್ಟಿಸಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ರಕ್ತದ ಮಡುವಿನಲ್ಲಿದ್ದರೂ ಹೆಂಡತಿಗೆ ಕರೆ ಮಾಡಿ ನನ್ನನ್ನು ಬದುಕಿಸು ಎಂದಿದ್ದ ಸೈಯದ್
ಪ್ರಿಯಕರನಿಗಾಗಿ ಮಹಿಳೆಯೊಬ್ಬಳು ತನ್ನೆರೆಡು ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ, ರೋಹಿತ್(6) ರೋಹಿಣಿ(4) ಕೊಲೆಯಾದ ಮಕ್ಕಳು. ಚೈತ್ರಾ ಪರಶುರಾಮ ಹುಲಕೋಟಿ ಎಂಬುವವಳೇ ಮಕ್ಕಳನ್ನು ಕೊಂದ ತಾಯಿ. ಪತಿ ಪರಶುರಾಮ ಕೆಲಸಕ್ಕೆ ಹೋದ ಸಮಯದಲ್ಲಿ ವೇಲ್ನಿಂದ ಮಕ್ಕಳಿಬ್ಬರ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಲೆ.
ಶಿವನಸಮುದ್ರದಲ್ಲಿ ನವದಂಪತಿ ಶವ ಪತ್ತೆ: ಮರ್ಯಾದಾ ಹತ್ಯೆ ಶಂಕೆ
ಪತಿಯೊಂದಿಗೆ ಜಗಳವಾಡಿ ನೊಂದು ಇಬ್ಬರು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ನಿರ್ಧರಿಸಿದ್ದೆ ಎಂದು ಚೈತ್ರಾ ಹೇಳಿಕೆ ನೀಡಿದ್ದಾಳೆ. ನಿನ್ನಿಬ್ಬರು ಮಕ್ಕಳನ್ನು ಕೊಂದು ನನ್ನ ಜೊತೆ ಬಂದರೆ ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ವಾಗ್ದಾನ ನೀಡಿದ್ದರಿಂದ ಈ ಕೃತ್ಯ ಎಸಗಿರುವುದಾಗಿ ಆಕೆ ಪೊಲೀಸ್ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾಳೆ.