ಹುಬ್ಬಳ್ಳಿ: ಸರ್ಕಾರಿ ಶಾಲೆಗಳ ಅಂದ ಹೆಚ್ಚಿಸಿದ ಮಹಿಳಾ ತಂಡ, ಭಾರೀ ಮೆಚ್ಚುಗೆ
ಹುಬ್ಬಳ್ಳಿ, ಜೂನ್, 21: ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳು ಅಂದರೆ ಬಹುತೇಕ ಮಂದಿ ತಿರಸ್ಕಾರ ಮನೋಭಾವದಿಂದ ಕಾಣುತ್ತಾರೆ. ಆದರೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮಹಿಳೆಯರ ತಂಡವೊಂದು ಸರ್ಕಾರಿ ಶಾಲೆಗಳಿಗೆ ಮರು ಜೀವ ತುಂಬುವ ಕೆಲಸವನ್ನು ಶ್ರದ್ಧೆಯಿಂದ ಮಾಡುತ್ತಿದೆ.
ಈ ತಂಡವು ಪಾಠ ಕಲಿಕೆ ಕೊಠಡಿಗಳಿಗೆ ಬಣ್ಣ ಹಚ್ಚುವ ಮೂಲಕ ವಿದ್ಯಾರ್ಥಿಗಳ ಜೀವನವನ್ನು ಕೂಡ ಕಲರ್ ಫುಲ್ ಆಗಿ ಮಾಡುತ್ತಿದೆ. ಅಲ್ಲದೆ "ತುಕ್ಕು ಹಿಡಿಯುವುದಕ್ಕಿಂತ ಸವೆದು ಹೋಗುವುದೇ ಲೇಸು" ಎಂಬ ಧ್ಯೇಯ ವಾಕ್ಯದ ಮೂಲಕ ಎಲ್ಲರ ಗಮನ ಸೆಳೆಯುತ್ತಿದೆ.

ಸರ್ಕಾರಿ ಶಾಲೆಗಳಿಗೆ ಮರುಜೀವ ಕೊಡುತ್ತಿರುವ ಸಮಾಜಮುಖಿ ಚಟುವಟಿಕೆಗಳನ್ನು ನಡೆಸುತ್ತಿರುವ ಹೆಣ್ಣುಮಕ್ಕಳ ತಂಡವೇ ಸೋದರಿ ನಿವೇದಿತಾ ಪ್ರತಿಷ್ಠಾನ ಆಗಿದೆ. ಇವರು ಹುಬ್ಬಳ್ಳಿಯ ಕುಸುಗಲ್ ಗ್ರಾಮದಲ್ಲಿ 1964ರಲ್ಲಿ ನಿರ್ಮಾಣವಾದ ನೂರೊಂದಪ್ಪ ಬಾಲಕರ ಸರ್ಕಾರಿ ಪ್ರೌಢ ಶಾಲಾ ಕಟ್ಟಡಕ್ಕೆ ಈ ಮಹಿಳೆಯರ ತಂಡವು ಬಣ್ಣ ಹಚ್ಚುವ ಸೇವಾ ಕಾರ್ಯವನ್ನು ಮಾಡುತ್ತಿದೆ. ಎರಡು ದಿನಗಳ ಕಾಲ 15 ಜನರು ಬಣ್ಣ ಬಳೆದು ಈ ಸರ್ಕಾರಿ ಶಾಲೆಯ ಅಂದವನ್ನು ಹೆಚ್ಚಿಸಿದ್ದಾರೆ.
ಇನ್ನು ಸೋದರಿ ನಿವೇದಿತಾ ಪ್ರತಿಷ್ಠಾನವು ಹೆಣ್ಣು ಮಕ್ಕಳ ಸಂಘಟನೆಯಾಗಿದ್ದು, ಕೆಲಸದ ಮಧ್ಯೆಯೂ ವಾರಾಂತ್ಯದಲ್ಲಿ ಸೇವಾ ಕಾರ್ಯವನ್ನು ಮಾಡಿಕೊಂಡು ಬರುತ್ತಿದ್ದಾರೆ. ಸರ್ಕಾರಿ ಶಾಲೆಗಳ ಉಳಿವಿಗಾಗಿ ಈ "ಪ್ರತಿಷ್ಠಾನ"ವು ರಾಜ್ಯಾದ್ಯಂತ ಸೇವಾ ಕಾರ್ಯವನ್ನು ಮಾಡುತ್ತಾ ಬಂದಿದೆ. ಈ ಸೋದರಿ ನಿವೇದಿತಾ ಪ್ರತಿಷ್ಠಾನದಲ್ಲಿ ಶೋಭಾ ಕಂಪ್ಲಿ, ಶ್ರದ್ಧಾ, ಭವ್ಯ, ಪ್ರಿಯಾ, ವಂದನಾ, ವೀಣಾ, ರಶ್ಮಿ, ಪವಿತ್ರಾ, ಮಧು, ಯತಿಶ, ವಿಜ್ಞೇಶ್, ಮಂಜುನಾಥ್, ಪ್ರಶಾಂತ, ಜಯಶ್ರೀ, ಅಶ್ವಿನಿ ಕುಲಕರ್ಣಿ, ಶ್ರೀನಿಧಿ ದೇಶಪಾಂಡೆ ಇದ್ದಾರೆ.
ಈ ಒಂದು ತಂಡ ವಿಶೇಷವಾಗಿ ಹಳ್ಳಿಯಲ್ಲಿರುವಂತಹ ಬಹುತೇಕ ಸರ್ಕಾರಿ ಶಾಲೆಗಳಿಗೆ ಬಣ್ಣ ಹಚ್ಚಿ ಕಂಗೊಳಿಸುವಂತೆ ಮಾಡಿದ್ದಾರೆ. ಈ ಮೂಲಕ ಮಕ್ಕಳಿಗೆ ಆಕರ್ಷಣೆಯಾಗುವಂತೆ ಇಡೀ ಶಾಲೆಯ ಅಂದವನ್ನು ಹೆಚ್ಚಿಸುತ್ತಿದ್ದಾರೆ. ಅಲ್ಲದೆ ಇವರ ಸಮಾಜಮುಖಿ ಕಾರ್ಯಕ್ಕೆ ಹುಬ್ಬಳ್ಳಿ-ಧಾರವಾಡ ಜನರು ಅಭಿನಂದನೆಗಳ ಮಹಾಪೂರವನ್ನೇ ಹರಿಸಿದ್ದಾರೆ.
-
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications