ಬಿಎಸ್ವೈ ಸಿಎಂ ಮಾಡುವೆ : ಕೆ.ಎಸ್.ಈಶ್ವರಪ್ಪ ಯೂ ಟರ್ನ್
ಹುಬ್ಬಳ್ಳಿ, ಆಗಸ್ಟ್ 20 : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ರಚನೆ ವಿಚಾರದಲ್ಲಿ ಭಾರೀ ಸುದ್ದಿಯಲ್ಲಿರುವ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಅವರು ಯೂ ಟರ್ನ್ ತೆಗೆದುಕೊಂಡಿದ್ದಾರೆ. 'ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಮತ್ತೆ ಸಿಎಂ ಮಾಡಿಯೇ ತೀರುತ್ತೇನೆ' ಎಂದು ಹೇಳಿದರು.
ಶನಿವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, 'ಯಡಿಯೂರಪ್ಪನವರು ಈ ಹಿಂದೆ ಪಕ್ಷ ಬಿಟ್ಟು ಹೋಗಿದ್ದರು, ತಮ್ಮಿಂದ ತಪ್ಪಾಗಿರುವುದನ್ನು ಅರಿತುಕೊಂಡು ಮತ್ತೆ ಪಕ್ಷಕ್ಕೆ ಮರಳಿದ್ದಾರೆ. ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡಲು ಪಕ್ಷವನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುತ್ತೇವೆ' ಎಂದರು.[ಈಶ್ವರಪ್ಪ ಕಿವಿ ಹಿಂಡಲು ಹೈಕಮಾಂಡಿಗೆ ದೂರು?]

'ರಾಜ್ಯಮಟ್ಟದಲ್ಲಿ ಪದಾಧಿಕಾರಿಗಳನ್ನು ನೇಮಕ ಮಾಡುವಾಗ ಯಾರ ಜೊತೆಯೂ ಯಡಿಯೂರಪ್ಪನವರು ಚರ್ಚಿಸಿಲ್ಲ ಎಂಬುದು ನಮಗೆ ಸ್ವಲ್ಪ ನೋವಾಗಿತ್ತು. ಆದರೆ, ಈಗ ನಾವು ಅಣ್ಣ-ತಮ್ಮಂದಿರ ಹಾಗೆ ಇದ್ದೇವೆ. ರಾಯಣ್ಣ ಬ್ರಿಗೇಡ್ ಹೆಸರಿನಲ್ಲಿ ಜಾತಿ ಸಂಘಟನೆ ಮಾಡುವ ಇರಾದೆ ತಮ್ಮದಲ್ಲ. ನಾನು ಪಕ್ಕಾ ಆರೆಸ್ಸೆಸ್ ಕಾರ್ಯಕರ್ತನಾಗಿದ್ದು ಜೀವನದಲ್ಲಿ ಎಂದೂ ಜಾತಿ ರಾಜಕಾರಣ, ಪಕ್ಷವಿರೋಧಿ ಚಟುವಟಿಕೆ ನಡೆಸಿಲ್ಲ' ಎಂದು ಸ್ಪಷ್ಟನೆ ನೀಡಿದರು.[ಸೆ.26ರಂದು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆ]
'ಯಡಿಯೂರಪ್ಪ ಅವರಿಂದಲೇ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಉದ್ಘಾಟನೆ ಮಾಡಿಸುತ್ತೇನೆ. ಅಹಿಂದ ನಾಯಕರ ಸಭೆಯನ್ನು ನಾನಾಗಿಯೇ ನಡೆಸಿಲ್ಲ. ಸಿದ್ದರಾಮಯ್ಯನವರಿಂದ ಅನ್ಯಾಯಕ್ಕೊಳಗಾದವರು ತಮ್ಮ ಸಭೆಗೆ ನನ್ನನ್ನು ಕರೆದಿದ್ದರು. ಹೀಗಾಗಿ ಹೋಗಿದ್ದೆ. ಕಾಂಗ್ರೆಸ್ಸಿನ ಹಿಂದುಳಿದ ವರ್ಗದ ಧುರೀಣರು ಬಿಜೆಪಿ ಸೇರ್ಪಡೆಗೆ ಒಲವು ತೋರಿದ್ದಾರೆ' ಎಂದು ಹೇಳಿದರು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications