ಮುಖ್ಯಮಂತ್ರಿ ಸ್ಥಾನ ಬೇಕಿರಲಿಲ್ಲ, ಅನರ್ಹ ಶಾಸಕರನ್ನು ನಂಬಿಸಿ ತಪ್ಪು ಮಾಡಿದೆ: ಯಡಿಯೂರಪ್ಪ
ಹುಬ್ಬಳ್ಳಿ, ನವೆಂಬರ್ 2: ನನಗೆ ಮುಖ್ಯಮಂತ್ರಿ ಸ್ಥಾನ ಬೇಕಾಗಿರಲಿಲ್ಲ, ಅನರ್ಹ ಶಾಸಕರನ್ನು ನಂಬಿಸಿ ತಪ್ಪು ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೇಸರದ ನುಡಿಗಳನ್ನಾಡಿದ್ದಾರೆ.
ಪಕ್ಷದ ಮುಖಂಡರ ಸಭೆಯಲ್ಲಿ ಮಾತನಾಡಿದ್ದ ಅವರು, ನೀವು ಮಾತನಾಡಿದ ಧಾಟಿ ನೋಡಿದರೆ ಸರ್ಕಾರ ಉಳಿಸುವಂತೆ ಕಾಣಿಸುತ್ತಿಲ್ಲ. ಅನರ್ಹ ಶಾಸಕರನ್ನು ನಂಬಿಸಿ ತಪ್ಪು ಮಾಡಿದೆ ಎಂದು ಅನಿಸುತ್ತಿದೆ ಎಂದು ಹೇಳಿದ್ದಾರೆ.

ನಮ್ಮನ್ನು ಆಡಳಿತಕ್ಕೆ ತಂದಿದ್ದು ಅನರ್ಹ ಶಾಸಕರು
ವಿರೋಧ ಪಕ್ಷದಲ್ಲಿದ್ದ ನಮ್ಮನ್ನು ಆಡಳಿತಕ್ಕೆ ತಂದಿದ್ದು ಅನರ್ಹ ಶಾಸಕರು.ಅವರ ಪರವಾಗಿ ನಾವು ಗಟ್ಟಿಯಾಗಿ ನಿಲ್ಲಬೇಕು ಎಂದು ಪಕ್ಷದ ಮುಖಂಡರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತರಾಟೆ ತೆಗೆದುಕೊಂಡಿದ್ದಾರೆ.

ನಾನೇ ಅಪರಾಧ ಮಾಡಿದ್ದೇನೆ
ನಾನೇ ಅಪರಾಧ ಮಾಡಿದ್ದೇನೆ. ಅವರನ್ನು (17 ಶಾಸಕರು) ನಂಬಿಸಿ, ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತು ಅಪರಾಧ ಮಾಡಿದ್ದೇನೆ. ಉಪಚುನಾವಣೆಯಲ್ಲಿ ಸೋಲೊ, ಗೆಲುವೊ ಬೇರೆ ಪ್ರಶ್ನೆ. ಆದರೆ, ಯಾರೊಬ್ಬರ ಬಾಯಲ್ಲೂ ಅವರೆಲ್ಲ (ಅನರ್ಹ ಶಾಸಕರು) ತ್ಯಾಗ ಮಾಡಿದ್ದರಿಂದಲೇ ಅಧಿಕಾರಕ್ಕೆ ಬಂದಿದ್ದೇವೆ ಎಂಬ ಮಾತು ಬರಲಿಲ್ಲ. ಅವರು ಮೂರ್ಖರು, ಹುಚ್ಚರು. ನಮ್ಮನ್ನು ನಂಬಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದಾರೆ. ಅವರಿಗೆ ಆ ಅಗತ್ಯವಾದರೂ ಏನಿತ್ತು ಎಂದು ಪ್ರಶ್ನಿಸಿದ್ದಾರೆ.

ಸರ್ಕಾರ ಉಳಿಸುವಂತೆ ಕಾಣುತ್ತಿಲ್ಲ
'ನೀವು ಮಾತನಾಡಿದ ಧಾಟಿ ನೋಡಿದರೆ ಸರ್ಕಾರ ಉಳಿಸುವಂತೆ ಇದೆ ಅಂತ ಅನ್ನಿಸುತ್ತಿಲ್ಲ. 17 ಶಾಸಕರ ರಾಜೀನಾಮೆ ತೀರ್ಮಾನ ನಾನು ತೆಗೆದುಕೊಂಡಿದ್ದಲ್ಲ. ರಾಷ್ಟ್ರೀಯ ಅಧ್ಯಕ್ಷರಿಗೆ ಗೊತ್ತಿದ್ದೇ ಎರಡೂವರೆ ತಿಂಗಳು ಶಾಸಕರನ್ನು ಮುಂಬೈಯಲ್ಲಿ ಇಟ್ಟಿದ್ದು ನಿಮಗೆಲ್ಲ ಗೊತ್ತಿದೆಯಲ್ಲವೆ. ನನಗೇನು ಮುಖ್ಯಮಂತ್ರಿಗಿರಿ ಬೇಕಾಗಿಲ್ಲ.

ಉತ್ತಮ ಕೆಲಸ ಮಾಡಬೇಕು ಅನ್ನೋದು ನನ್ನ ಅಪೇಕ್ಷೆ
3-4 ಬಾರಿ ಸಿ.ಎಂ ಆಗಿದ್ದೇನೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದು ಉತ್ತಮ ಕೆಲಸ ಮಾಡಬೇಕು ಎಂಬುದಷ್ಟೇ ನನ್ನ ಅಪೇಕ್ಷೆ ಆಗಿತ್ತು. ದೊಡ್ಡತನ, ಧಾರಾಳತನ ನಿಮಗೆ ಇಲ್ಲವಲ್ಲ. ವಾಸ್ತವಿಕ ಸ್ಥಿತಿಯನ್ನು ತಿಳಿದುಕೊಳ್ಳದೇ ಒಬ್ಬೊಬ್ಬರು ಒಂದೊಂದು ರೀತಿ ಮಾತನಾಡುತ್ತೀರಿ. ಎರಡು ಕ್ಷೇತ್ರಗಳ (ಅಥಣಿ, ಕಾಗವಾಡ) ಬಗ್ಗೆ ನಿಮ್ಮಿಂದ ಇಂತಹ ಅಭಿಪ್ರಾಯ ನಿರೀಕ್ಷಿಸಿರಲಿಲ್ಲ. ರಾಷ್ಟ್ರೀಯ ಅಧ್ಯಕ್ಷರೇ ಅಂತಿಮ ತೀರ್ಮಾನ ತೆಗೆದುಕೊಳ್ಳಲಿ. ಇಲ್ಲಿ ಹೇಳಿದ ಮಾತು ನಾಲ್ಕು ಗೋಡೆಗಳ ಮಧ್ಯೆ ಇರಲಿ ಎಂದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications