ಆಂಧ್ರದಲ್ಲಿ ಟ್ಯೂಷನ್ ಟೀಚರಿಂದ 14 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು
ಹೈದರಾಬಾದ್, ಅಕ್ಟೋಬರ್ 03: ಆಂಧ್ರಪ್ರದೇಶದಲ್ಲಿ ಟ್ಯೂಷನ್ ಟೀಚರಿಂದ 14 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ.
ಒಂದೆಡೆ ಶಾಲಾ, ಕಾಲೇಜುಗಳು ಆರಂಭವಾದರೆ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ ಹೀಗಾಗಿ ಇಷ್ಟು ಬೇಗ ಶಾಲೆಗಳನ್ನು ತೆರೆಯುವುದು ಬೇಡ ಎಂಬ ಕೂಗು ದೇಶದೆಲ್ಲೆಡೆ ಕೇಳಿಬರುತ್ತಿದೆ.
ಆದರೆ ಸಾಕಷ್ಟು ರಾಜ್ಯಗಳಲ್ಲಿ ಬ್ಯಾಚ್ ಮಾಡಿ ಮೂರು ದಿನ ಒಂದು ಬ್ಯಾಚ್ ಮತ್ತೆ ಮೂರು ದಿನ ಮತ್ತೊಂದು ಬ್ಯಾಚ್ ಶಾಲೆಗೆ ಬರುವಂತೆ ಸೂಚಿಸಿದೆ. ಅಷ್ಟೇ ಅಲ್ಲದೆ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನಮ್ಮ ಅಭ್ಯಂತರವಿಲ್ಲ ಎನ್ನುವ ಸರ್ಟಿಫಿಕೇಟ್ನ್ನು ಕೂಡ ನೀಡಬೇಕಾಗುತ್ತದೆ.
ಟ್ಯೂಷನ್ನಲ್ಲೇ ಹೀಗಾದಾಗ ಇನ್ನು ಶಾಲೆಗೆ ಮಕ್ಕಳನ್ನು ಕಳುಹಿಸುವ ಬಗ್ಗೆ ಯೋಚಿಸುತ್ತಿರುವ ಪೋಷಕರು ಮತ್ತೊಮ್ಮೆ ಆಲೋಚಿಸಬೇಕಾಗಿದೆ.
ಸಾಕಷ್ಟು ಖಾಸಗಿ ಕಾಲೇಜುಗಳು, ಶಾಲೆಗಳ ಶಿಕ್ಷಕರಿಗೆ ವೇತನವಿಲ್ಲದೆ ಕಷ್ಟ ಅನುಭವಿಸುತ್ತಿದ್ದಾರೆ. ಶಿಕ್ಷಣ ಸಂಸ್ಥೆಗಳು ಒಂದು ಅವರನ್ನು ಕೆಲಸದಿಂದ ತೆಗೆದು ಹಾಕಲಿ ಅಥವಾ ಅವರಿಗೆ ಸಂಬಳವನ್ನು ನೀಡಬೇಕು.ಆಂಧ್ರಪ್ರದೇಶದಲ್ಲಿ 7 ಲಕ್ಷ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಗುಂಟೂರಿನಲ್ಲಿ ನಡೆದ ಘಟನೆ
ಆಂಧ್ರಪ್ರದೇಶದ ಗುಂಟೂರಿನಲ್ಲಿ ಟ್ಯೂಷನ್ಗೆ ತೆರಳಿದ್ದ ಸುಮಾರು 14 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ, ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ.

ಎಲ್ಲಾ ಮಕ್ಕಳು 12 ವರ್ಷದೊಳಗಿನವರು
ಎಲ್ಲಾ ವಿದ್ಯಾರ್ಥಿಗಳು 12 ವರ್ಷ ಒಳಗಿನವರಾಗಿದ್ದಾರೆ. ಈ ವಿದ್ಯಾರ್ಥಿಗಳು ತೆರಳುತ್ತಿದ್ದ ಟ್ಯೂಷನ್ ಟೀಚರ್ ಇಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಹಾಗೆಯೇ ಕೆಲವು ಮಕ್ಕಳ ಪೋಷಕರಿಗೂ ಕೂಡ ಪಾಸಿಟಿವ್ ಬಂದಿದೆ.

ಓರ್ವ ವ್ಯಕ್ತಿ ಕೊರೊನಾದಿಂದ ಸಾವು
ಸೆಪ್ಟೆಂಬರ್ 25 ರಂದು ಓರ್ವ ವ್ಯಕ್ತಿ ಕೊರೊನಾಗೆ ತುತ್ತಾಗಿ ಗುಂಟೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಅಲ್ಲಿಯವರೆಗೆ ಆ ಪ್ರದೇಶದಲ್ಲಿ ಒಂದೂ ಪ್ರಕರಣವಿರಲಿಲ್ಲ, ಗ್ರೀನ್ ಜೋನ್ ಆಗಿತ್ತು. ಒಟ್ಟು 250 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರಲ್ಲಿ 39 ಮಂದಿಗೆ ಸೋಂಕು ತಗುಲಿರುವುದು ತಿಳಿದುಬಂದಿದೆ. 8-12 ವರ್ಷದೊಳಗಿನ 14 ಮಕ್ಕಳಿಗೆ ಸೋಂಕು ತಗುಲಿದೆ ಎಂದು ಡಾ. ಸೇಶುಕುಮಾರ್ ತಿಳಿಸಿದ್ದಾರೆ.
Recommended Video

ಕೊವಿಡ್ 19 ನಿಯಮವನ್ನು ಉಲ್ಲಂಘಿಸಿದ್ದಾರೆ
ಈ ಟೀಚರ್ಗಳು ಕೊರೊನಾ ನಿಯಮ ಉಲ್ಲಂಘಿಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ತೆಗೆದುಕೊಳ್ಳುತ್ತಿದ್ದರು.ನರಸರಾವ್ಪೇಟೆಯಲ್ಲಿ ಇವರು ಇಂಗ್ಲಿಷ್ ಲೆಕ್ಚರರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಪತ್ನಿ ಗರ್ಭಿಣಿಯಾಗಿದ್ದು, ಹೆರಿಗೆಗೂ ಮುನ್ನ ಕೊರೊನಾ ಪಾಸಿಟಿವ್ ಬಂದಿತ್ತು.
ಅವರು ಕೊರೊನಾ ನಿಯಮ ಉಲ್ಲಂಘಿಸಿ ಟ್ಯೂಷನ್ ಮಾಡಬಾರದಿದ್ದು ಹೀಗಾಗಿ ಅವರಿಗೆ ನೋಟಿಸ್ ನೀಡಿರುವುದಾಗಿ ಮಂಡಲ್ ಶಿಕ್ಷಣ ಅಧಿಕಾರಿ ಶ್ರೀನಿವಾಸ್ ರಾವ್ ತಿಳಿಸಿದ್ದಾರೆ.-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications