ಒಡಿಶಾ ಗಡಿಯಲ್ಲಿ 18 ನಕ್ಸಲರ ಹತ್ಯೆ, ಹಲವರಿಗೆ ಗಾಯ
ಹೈದರಾಬಾದ್, ಅಕ್ಟೋಬರ್ 24: ಆಂಧ್ರ ಪ್ರದೇಶ ಪೊಲೀಸರ ಪ್ರಮುಖ ಕಾರ್ಯಾಚರಣೆಯೊಂದರಲ್ಲಿ ನಕ್ಸಲರು ಮೃತಪಟ್ಟಿದ್ದಾರೆ. ಆಂಧ್ರ ಹಾಗೂ ಒಡಿಶಾ ಗಡಿಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ 18 ನಕ್ಸಲರು ಸಾವನ್ನಪ್ಪಿದ್ದಾರೆ. 4 ಎಕೆ 47, ಎರಡು ಸೆಲ್ಫ್ ಲೋಡಿಂಗ್ ರೈಫಲ್ಸ್ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಡಿಶಾದ ಮಲ್ಕನ್ ಗಿರಿ ಜಿಲ್ಲೆಯ ಬೆಜ್ಜಂಗಿ ಪ್ರದೇಶದಲ್ಲಿ ಎನ್ ಕೌಂಟರ್ ನಡೆದಿದೆ,
ಈ ಪ್ರದೇಶದಲ್ಲಿ ನಕ್ಸಲರ ಚಟುವಟಿಕೆ ಹೆಚ್ಚಾಗಿತ್ತು. ಸೂಪರಿಂಟೆಂಡೆಂಟ್ ಅಫ್ ಪೊಲೀಸ್ ರಾಹುಲ್ ದೇವ್ ಶರ್ಮಾ ಅವರ ಪ್ರಕಾರ, ಎನ್ ಕೌಂಟರ್ ನಲ್ಲಿ ಕೆಲವು ಮುಖ್ಯ ನಕ್ಸಲ್ ನಾಯಕರನ್ನು ಕೊಲ್ಲಲಾಗಿದೆ. ಸಾವಿನ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.[ಎನ್ ಕೌಂಟರ್ ನಲ್ಲಿ ನಕ್ಸಲ್ ನಾಯಕ ನಯೀಮುದ್ದೀನ್ ಸಾವು]

ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ನಕ್ಸಲರ ಓಡಾಟವಿದೆ ಎಂಬ್ ಮಾಹಿತಿ ಸಿಕ್ಕಿದ್ದರಿಂದ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಪೊಲೀಸರ ತಂಡವು ಕಾರ್ಯಾಚರಣೆಗಾಗಿ ಸಿದ್ಧತೆ ನಡೆಸಿತ್ತು. ಹಲವು ನಕ್ಸಲೀಯರು ಗಾಯಗೊಂಡಿರುವ ವರದಿಯಾಗಿದೆ. ಈ ವೇಳೆ ಇಬ್ಬರು ಭದ್ರತಾ ಸಿಬ್ಬಂದಿಗೂ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.[ಮಡಿಕೇರಿಯಲ್ಲಿ ನಕ್ಸಲ್ ಜಿಂದಾಬಾದ್ ಎಂದ ರೂಪೇಶ್]
ಇದೇ ರೀತಿಯ ಪೊಲೀಸ್ ಕಾರ್ಯಾಚರಣೆ ಸೆಪ್ಟೆಂಬರ್ 2013ರಲ್ಲಿ ನಡೆದಿತ್ತು. ನಿಷೇಧಿತ ಸಿಪಿಐನ (ಮಾವೋಯಿಸ್ಟ್) 13 ಪ್ರಮುಖ ನಾಯಕರನ್ನು ಎನ್ ಕೌಂಟರ್ ನಲ್ಲಿ ಕೊಲ್ಲಲಾಗಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications