ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿತ್ತೂರು ಬಳಿ ಕಾರಿಗೆ ಬೆಂಕಿ: ಬೆಂಗಳೂರಿನ ಐವರು ಸಜೀವ ದಹನ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 14: ಚಿತ್ತೂರು ಬಳಿ ಕಾರು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಐವರು ಸಜೀವ ದಹನವಾಗಿದ್ದಾರೆ.

ತಿರುಪತಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಕಾರು ಪಲ್ಟಿಯಾಗಿ ಹೊತ್ತಿಕೊಂಡಿದೆ. ಚಿತ್ತೂರಿನ ಪಲಮನೇರು ಮಂಡಲಂ ಬಳಿ ಈ ದುರ್ಘಟನೆ ನಡೆದಿದೆ.

ಟೆಕ್ಕಿ ಶುಭಶ್ರೀ ಸಾವಿನ ಕೊನೆಯ ಕ್ಷಣಗಳು ಕ್ಯಾಮರಾದಲ್ಲಿ ಸೆರೆಟೆಕ್ಕಿ ಶುಭಶ್ರೀ ಸಾವಿನ ಕೊನೆಯ ಕ್ಷಣಗಳು ಕ್ಯಾಮರಾದಲ್ಲಿ ಸೆರೆ

ಕಾರಿನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಾಗ ಬೆಂಕಿ ಹೊತ್ತಿಕೊಂಡಿತ್ತು. ಕಾರಿನಿಂದ ಹೊರ ಬರಲಾಗದೆ ಐವರು ಸಜೀವ ದಹನವಾಗಿದ್ದರು. ಒಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿ ತಿಳಿಸಿದೆ.

5 Of A Family Killed In A Car Fire Near Chittoor

ಮೃತರನ್ನು ಬೆಂಗಳೂರಿನ ಜಾಹ್ನವಿ, ರಾಮ್, ಕಲಾ, ಸಾಯಿ ಆಶ್ರೀತ್ ಹಾಗೂ ಪವನ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹೆದ್ದಾರಿಗೆ ಬಂದು ಕಾರಿಗೆ ಡಿಕ್ಕಿ ಹೊಡೆದ ವಿಮಾನ, ಜನ ಕಂಗಾಲು!ಹೆದ್ದಾರಿಗೆ ಬಂದು ಕಾರಿಗೆ ಡಿಕ್ಕಿ ಹೊಡೆದ ವಿಮಾನ, ಜನ ಕಂಗಾಲು!

ಡ್ರೈವರ್ ವಿಷ್ಣು ಕಾರಿನೆ ಮೇಲೆ ನಿಯಂತ್ರಣ ಕಳೆದುಕೊಂಡ ಪರಿಣಾಮ ಕಾರು ಸ್ಕಿಡ್ ಆಗಿ ಪಲ್ಟಿ ಹೊಡೆದಿದೆ, ಕಾರು ಪಲ್ಟಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಒಳಗಿದ್ದವರು ಸುಟ್ಟು ಕರಕಲಾಗಿದ್ದಾರೆ.

English summary
Five members of a family were killed and another injured as a car in which they were travelling caught fire after it overturned in Andhra Pradesh's Chittoor district on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X