ಹೈದರಾಬಾದ್ : ಆಸ್ಪತ್ರೆ ಸಿಬ್ಬಂದಿ ಕಣ್ಣು ತೇವಗೊಳಿಸಿದ ಬಾಲಕ
ಹೈದರಾಬಾದ್, ಫೆಬ್ರವರಿ 13 : ತಾಯಿಯ ಪ್ರೀತಿಯಲ್ಲಿ ದೇವರ ಮಮತೆ ತೋರಿ ಬರುತ್ತದೆ. ಪ್ರಪಂಚದಲ್ಲಿ ಬೆಲೆ ಕಟ್ಟಲಾಗದ ವಸ್ತು ಎಂದರೆ ಅದು ತಾಯಿಯ ಪ್ರೀತಿ ಮಾತ್ರ. ಹೈದರಾಬಾದ್ನಲ್ಲಿ ನಡೆದ ಘಟನೆಯೊಂದು ತಾಯಿಯ ಪ್ರೀತಿ ಬಗ್ಗೆ ಜನರಿಗೆ ಸಂದೇಶ ನೀಡಿದೆ.
ಐದು ವರ್ಷದ ಬಾಲಕನೊಬ್ಬ ತಾಯಿಯ ಶವದ ಜೊತೆ ರಾತ್ರಿ ಕಳೆದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದೆ. ಭಾನುವಾರ ಈ ಘಟನೆ ನಡೆದಿರುವುದು ಹೈದರಾಬಾದ್ನಲ್ಲಿ.
ಒಸ್ಮಾನಿಯಾ ಜನರಲ್ ಆಸ್ಪತ್ರೆಯಲ್ಲಿ ನಡೆದ ಈ ಘಟನೆ ನೋಡಿ, ಸಿಬ್ಬಂದಿಗಳ ಕಣ್ಣುಗಳು ತೇವವಾಗಿವೆ. ತಾಯಿಯ ಶವವನ್ನು ತೆಗೆದುಕೊಂಡು ಹೋಗಲು ಬಿಡದೇ ಮಗು ಬಿಕ್ಕಿ-ಬಿಕ್ಕಿ ಅತ್ತಿದ್ದು ಎಲ್ಲರೂ ಕಣ್ಣೀರು ಹಾಕುವಂತೆ ಮಾಡಿದೆ.

36 ವರ್ಷದ ಸುಲ್ತಾನ ಸಮೀನಾ ಹೈದರಾಬಾದ್ನವರು. ಬಹಳ ಹಿಂದೆಯೇ ಗಂಡ ಅವರಿಂದ ದೂರವಾಗಿದ್ದ. 5 ವರ್ಷದ ಮಗನ ಜೊತೆ ಸುಲ್ತಾನ ಅವರು ವಾಸವಾಗಿದ್ದರು.
ಭಾನುವಾರ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಸ್ಥಳೀಯರು ಆಕೆಯನ್ನು ಒಸ್ಮಾನಿಯಾ ಜನರಲ್ ಆಸ್ಪತ್ರೆಗೆ ಸೇರಿಸಿ ಅಲ್ಲಿಂದ ತೆರಳಿದ್ದಾರೆ. ವೈದ್ಯರು ಎಷ್ಟೇ ಪ್ರಯತ್ನ ನಡೆಸಿದರೂ ಅವರನ್ನು ಉಳಿಸಲು ಸಾಧ್ಯವಾಗಿಲ್ಲ.
5 ವರ್ಷದ ಮಗು ತಾಯಿಯೊಂದಿಗೆ ಹಾಸಿಗೆಯಲ್ಲಿ ಮಲಗಿದೆ. ತಾಯಿ ಸತ್ತು ಹೋಗಿದ್ದಾಳೆ ಎಂಬ ಪರಿವು ಇಲ್ಲದೇ ಹಾಸಿಗೆಯಲ್ಲಿ ನಿದ್ದೆಗೆ ಜಾರಿಗೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲು ಸಿಬ್ಬಂದಿ ಪ್ರಯತ್ನ ನಡೆಸಿದರು ಮಗು ಶವವನ್ನು ತಬ್ಬಿ ಮಲಗಿದ್ದು ನೋಡಿ ಅವರ ಕಣ್ಣಲಿಗಳು ತೇವವಾಗಿವೆ.
ಇಡೀ ದಿನ ಮಗುವಿನ ಜೊತೆ ಇದ್ದ ಆಸ್ಪತ್ರೆಯ ಸಿಬ್ಬಂದಿಗಳು ಪೊಲೀಸರ ಸಹಕಾರ ಪಡೆದು, ಅವರ ಸಂಬಂಧಿಕರನ್ನು ಪತ್ತೆ ಮಾಡಿದರು. ತಾಯಿಯನ್ನು ಕಳೆದುಕೊಂಡು ಅನಾಥವಾಗಿದ್ದ ಮಗುವನ್ನು ಸಂಬಂಧಿಕರಿಗೆ ಹಸ್ತಾಂತರ ಮಾಡಿದರು.
-
ಗಂಟೆಗಟ್ಟಲೆ ಕ್ಯೂ ನಿಂತರೂ ಸಿಗದ ಗ್ಯಾಸ್: ಮೊಬೈಲ್ ಟವರ್ ಏರಿ ಆಟೋ ಚಾಲಕನ ಆಕ್ರೋಶ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications