ಹೈದರಾಬಾದ್ : ಆಸ್ಪತ್ರೆ ಸಿಬ್ಬಂದಿ ಕಣ್ಣು ತೇವಗೊಳಿಸಿದ ಬಾಲಕ
ಹೈದರಾಬಾದ್, ಫೆಬ್ರವರಿ 13 : ತಾಯಿಯ ಪ್ರೀತಿಯಲ್ಲಿ ದೇವರ ಮಮತೆ ತೋರಿ ಬರುತ್ತದೆ. ಪ್ರಪಂಚದಲ್ಲಿ ಬೆಲೆ ಕಟ್ಟಲಾಗದ ವಸ್ತು ಎಂದರೆ ಅದು ತಾಯಿಯ ಪ್ರೀತಿ ಮಾತ್ರ. ಹೈದರಾಬಾದ್ನಲ್ಲಿ ನಡೆದ ಘಟನೆಯೊಂದು ತಾಯಿಯ ಪ್ರೀತಿ ಬಗ್ಗೆ ಜನರಿಗೆ ಸಂದೇಶ ನೀಡಿದೆ.
ಐದು ವರ್ಷದ ಬಾಲಕನೊಬ್ಬ ತಾಯಿಯ ಶವದ ಜೊತೆ ರಾತ್ರಿ ಕಳೆದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದೆ. ಭಾನುವಾರ ಈ ಘಟನೆ ನಡೆದಿರುವುದು ಹೈದರಾಬಾದ್ನಲ್ಲಿ.
ಒಸ್ಮಾನಿಯಾ ಜನರಲ್ ಆಸ್ಪತ್ರೆಯಲ್ಲಿ ನಡೆದ ಈ ಘಟನೆ ನೋಡಿ, ಸಿಬ್ಬಂದಿಗಳ ಕಣ್ಣುಗಳು ತೇವವಾಗಿವೆ. ತಾಯಿಯ ಶವವನ್ನು ತೆಗೆದುಕೊಂಡು ಹೋಗಲು ಬಿಡದೇ ಮಗು ಬಿಕ್ಕಿ-ಬಿಕ್ಕಿ ಅತ್ತಿದ್ದು ಎಲ್ಲರೂ ಕಣ್ಣೀರು ಹಾಕುವಂತೆ ಮಾಡಿದೆ.

36 ವರ್ಷದ ಸುಲ್ತಾನ ಸಮೀನಾ ಹೈದರಾಬಾದ್ನವರು. ಬಹಳ ಹಿಂದೆಯೇ ಗಂಡ ಅವರಿಂದ ದೂರವಾಗಿದ್ದ. 5 ವರ್ಷದ ಮಗನ ಜೊತೆ ಸುಲ್ತಾನ ಅವರು ವಾಸವಾಗಿದ್ದರು.
ಭಾನುವಾರ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಸ್ಥಳೀಯರು ಆಕೆಯನ್ನು ಒಸ್ಮಾನಿಯಾ ಜನರಲ್ ಆಸ್ಪತ್ರೆಗೆ ಸೇರಿಸಿ ಅಲ್ಲಿಂದ ತೆರಳಿದ್ದಾರೆ. ವೈದ್ಯರು ಎಷ್ಟೇ ಪ್ರಯತ್ನ ನಡೆಸಿದರೂ ಅವರನ್ನು ಉಳಿಸಲು ಸಾಧ್ಯವಾಗಿಲ್ಲ.
5 ವರ್ಷದ ಮಗು ತಾಯಿಯೊಂದಿಗೆ ಹಾಸಿಗೆಯಲ್ಲಿ ಮಲಗಿದೆ. ತಾಯಿ ಸತ್ತು ಹೋಗಿದ್ದಾಳೆ ಎಂಬ ಪರಿವು ಇಲ್ಲದೇ ಹಾಸಿಗೆಯಲ್ಲಿ ನಿದ್ದೆಗೆ ಜಾರಿಗೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲು ಸಿಬ್ಬಂದಿ ಪ್ರಯತ್ನ ನಡೆಸಿದರು ಮಗು ಶವವನ್ನು ತಬ್ಬಿ ಮಲಗಿದ್ದು ನೋಡಿ ಅವರ ಕಣ್ಣಲಿಗಳು ತೇವವಾಗಿವೆ.
ಇಡೀ ದಿನ ಮಗುವಿನ ಜೊತೆ ಇದ್ದ ಆಸ್ಪತ್ರೆಯ ಸಿಬ್ಬಂದಿಗಳು ಪೊಲೀಸರ ಸಹಕಾರ ಪಡೆದು, ಅವರ ಸಂಬಂಧಿಕರನ್ನು ಪತ್ತೆ ಮಾಡಿದರು. ತಾಯಿಯನ್ನು ಕಳೆದುಕೊಂಡು ಅನಾಥವಾಗಿದ್ದ ಮಗುವನ್ನು ಸಂಬಂಧಿಕರಿಗೆ ಹಸ್ತಾಂತರ ಮಾಡಿದರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications