ಕಾರಿನ ಸೀಟಿನ ಅಡಿಯಲ್ಲಿ ಸಾಗಿಸುತ್ತಿದ್ದ 5.8 ಕೋಟಿ ರುಪಾಯಿ ಪೊಲೀಸರ ವಶಕ್ಕೆ
ಹೈದರಾಬಾದ್, ಡಿಸೆಂಬರ್ 4: ಇಲ್ಲಿನ ಪೊಲೀಸರು 5.8 ಕೋಟಿ ರುಪಾಯಿಯನ್ನು ತೆಲಂಗಾಣದ ಪೆಂಬರ್ತಿ ಚೆಕ್ ಪೊಸ್ಟ್ ಬಳಿ ವಶಪಡಿಸಿಕೊಳ್ಳಲಾಗಿದೆ. ಈ ಮೂಲಕ ಇನ್ನೇನು ವಿಧಾನಸಭೆ ಚುನಾವಣೆ ನಡೆಯುವ ರಾಜ್ಯದಲ್ಲಿ ವಶಪಡಿಸಿಕೊಳ್ಳಲಾದ ಕಪ್ಪು ಹಣದ ಮೊತ್ತವು 118 ಕೋಟಿ ತಲುಪಿದೆ. ಇನ್ನು 5.8 ಕೋಟಿ ರುಪಾಯಿ ಹೊಂದಿದ್ದ ಆರೋಪದಲ್ಲಿ ಕೆ. ಕುಮಾರ್ ಜೈನ್, ರಾಮ್ ಹಾಗೂ ಪ್ರಶಾಂತ್ ಎಂಬುವರನ್ನು ಬಂಧಿಸಲಾಗಿದೆ.
ಪೊಲೀಸ್ ಕಮಿಷನರ್ ವಿ.ರವೀಂದ್ರ ಮಾಹಿತಿ ನೀಡಿ, ಸ್ವಿಫ್ಟ್ ಡಿಜೈರ್ ಕಾರಿನ ಸೀಟಿನ ಅಡಿಯಲ್ಲಿ ನಗದು ಇಟ್ಟುಕೊಂಡು ತೆರಳುತ್ತಿದ್ದರು. ನಾಮ ನಾಗೇಶ್ವರ್ ರಾವ್, ವದ್ದಿರಾಜು ರವಿಚಂದ್ರ ಹಾಗೂ ಕೊಂಡ ಮುರಳಿ ಚುನಾವಣೆಯಲ್ಲಿ ಅಭ್ಯರ್ಥಿಗಳಾಗಿದ್ದು, ಅವರಿಗೆ ಹಂಚಲು ತೆಗೆದುಕೊಂಡು ಹೋಗುತ್ತಿದ್ದರು. ಕೀರ್ತಿ ಕುಮಾರ್ ಎಂಬಾತ ಆ ಹಣ ಕಳುಹಿಸುತ್ತಿದ್ದ. ಆತನ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಡಿಸೆಂಬರ್ ಏಳನೇ ತಾರೀಕು ತೆಲಂಗಾಣ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಟಿಆರ್ ಎಸ್, ಬಿಜೆಪಿ ಹಾಗೂ ಕಾಂಗ್ರೆಸ್-ಟಿಡಿಪಿ ಮಿತ್ರ ಕೂಟ ಚುನಾವಣೆಯಲ್ಲಿ ಸೆಣಸುತ್ತಿವೆ. ಮತದಾರರಿಗೆ ಹಂಚುವ ಸಲುವಾಗಿ ಹಣ ಸಾಗಣೆ ನಡೆಯುತ್ತಿತ್ತು ಎನ್ನಲಾಗಿದೆ.

ಕಳೆದ ತಿಂಗಳು ಅಂದರೆ ನವೆಂಬರ್ ಏಳನೇ ತಾರೀಕು ಹೈದರಾಬಾದ್ ನ ವಿವಿಧ ಸ್ಥಳಗಳ ಮೇಲೆ ದಾಳಿ ನಡೆಸಿ, 7.51 ಕೋಟಿ ರುಪಾಯಿ ತನಕ ನಗದು ವಶಪಡಿಸಿಕೊಳ್ಳಲಾಗಿತ್ತು. ನಾಲ್ವರು ಹವಾಲಾ ಏಜೆಂಟರನ್ನು ವಶಕ್ಕೆ ಪಡೆಯಲಾಗಿತ್ತು. ಇದರಲ್ಲಿ ಶೆಲ್ ಕಂಪನಿಗಳು ಭಾಗಿಯಾಗಿರುವ ಬಗ್ಗೆ ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ ನೀಡಲಾಗಿತ್ತು.
ಹೈದರಾಬಾದ್ ನಿಂದ ವಾರಂಗಲ್ ಗೆ ಕಾರಿನಲ್ಲಿ ಆರು ಕೋಟಿ ರುಪಾಯಿ ದಾಖಲೆರಹಿತ ಮೊತ್ತವನ್ನು ತೆಗೆದುಕೊಂಡು ಹೋಗುವಾಗ ವಶಕ್ಕೆ ಪಡೆಯಲಾಗಿತ್ತು. ಮತ್ತೊಂದು ಪ್ರಕರಣದಲ್ಲಿ ನೆನ್ನೆಲದಿಂದ ಮಂಚಿರ್ಯಾಲ್ ಗೆ ಆಟೋದಲ್ಲಿ ಸಾಗಿಸುತ್ತಿದ್ದ ಐವತ್ತು ಲಕ್ಷ ರುಪಾಯಿ ವಶಕ್ಕೆ ಪಡೆಯಲಾಗಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications