ವಿಜಯವಾಡ: ಬಸ್ ಕಾಲುವೆಗೆ ಉರುಳಿ 8 ಸಾವು, 30 ಜನರಿಗೆ ಗಾಯ

ಮಂಗಳವಾರ ಬೆಳಗ್ಗೆ ದಿವಾಕರನ್ ಟ್ರಾವೆಲ್ಸ್ ಬಸ್ ವೊಂದು ಕೃಷ್ಣ ಜಿಲ್ಲೆಯ ಮುಲಪಡು ಬಳಿ ಕಾಲುವೆಗೆ ಉರುಳಿ ಬಿದ್ದ ಪರಿಣಾಮ 8 ಜನರು ಸಾವನ್ನಪ್ಪಿದ್ದು 30ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

ವಿಜಯವಾಡ, ಫೆಬ್ರವರಿ. 28 : ಹೈದರಾಬಾದ್‍ ಗೆ ತೆರಳುತ್ತಿದ್ದ ಖಾಸಗಿ ವೋಲ್ವೋ ಬಸ್‍ ವೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿರುವ ಘಟನೆ ಮಂಗಳವಾರ ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಮುಲಪಡು ಬಳಿ ನಡೆದಿದೆ.

ಭುವನೇಶ್ವರದಿಂದ ಹೈದರಾಬಾದ್‍ ಗೆ ತೆರಳುತ್ತಿದ್ದ ದಿವಾಕರ್ ವೋಲ್ವೋ ಬಸ್ ಕೃಷ್ಣ ಜಿಲ್ಲೆಯ ಮುಲಪಡು ಬಳಿ ಕಾಲುವೆ ಸೇತುವೆಯ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಳಿಕ ಸೇತುವೆ ಮೇಲಿಂದ ಕಾಲುವೆಗೆ ಉರುಳಿ ಬಿದ್ದಿದೆ.

ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು ಸುಮಾರು 30 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನಂದಿಗಾಮ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅದರಲ್ಲಿ 10 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

8 Dead, 30 Injured After Bus Plunges Into Canal In Andhra Pradesh

ಗ್ಯಾಸ್ ಕಟ್ಟರ್ ಗಳನ್ನು ಬಳಸಿ ಬಸ್‍ ನಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಚಾಲಕ ನಿದ್ದೆಯ ಮಂಪರಿನಲ್ಲಿದ್ದು, ಆತನ ಅಜಾಗರೂಕತೆಯಿಂದಲೇ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+