ಮಳೆಗೆ ಆಂಧ್ರದ ಗುಂಟೂರು ಜಲಾವೃತ: ಪ್ರವಾಹಕ್ಕೆ 8 ಮಂದಿ ಬಲಿ!
ಹೈದರಾಬಾದ್ ಸೆ. 23 : ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಇದರಿಂದ ಆಂಧ್ರಪದ್ರೇಶದಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ.
ಈ ಮಳೆಗೆ 8 ಜನ ಸಾವನ್ನಪ್ಪಿದ್ದು, ಹಲವರು ಮನೆಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ. ಮೃತರೆಲ್ಲ ಗಂಟೂರು ಜಿಲ್ಲೆಗೆ ಸೇರಿದವರಾಗಿದ್ದು, ಪ್ರವಾಹದಲ್ಲಿ ಸಿಲುಕಿದವರನ್ನ ರಕ್ಷಿಸಲು ಎನ್ ಡಿಆರ್ ಎಫ್ ಸೇನೆಯನ್ನ ಮುಖ್ಯಂತ್ರಿ ಚಂದ್ರಶೇಖರ್ ರಾವ್ ಕರೆಸಿದ್ದಾರೆ. ಪ್ರವಾಹದಿಂದಾಗಿ ತಗ್ಗು ಪ್ರದೇಶಗಳಲ್ಲಿ ವಾಸ ಮಾಡುತ್ತಿದ್ದ 5 ಸಾವಿರಕ್ಕೂ ಹೆಚ್ಚು ಜನರನ್ನ ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ.
ಗುಂಟೂರು, ಹೈದರಬಾದ್ ಸೇರಿದಂತೆ ಆಂಧ್ರಪ್ರದೇಶದ ಬಹುತೇಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಫೋಷಿಸಲಾಗಿದೆ. ಗುಂಟೂರು ಜಿಲ್ಲೆ ಸಂಪೂರ್ಣ ಮಳೆ ನೀರಿನಿಂದ ತುಂಬಿಹೋಗಿದ್ದು, ರಸ್ತೆಗಳಲ್ಲಿ ನೀರು ಆವರಿಸಿಕೊಂಡಿದ್ದು, ಜನ ಜಲಪ್ರಳಯದ ಭೀತಿಯಲ್ಲಿದ್ದಾರೆ.
ನಗರ ರಸ್ತೆಗಳು ಸೇರಿದಂತೆ, ರೈಲ್ವೆ ಹಳಿಗಳು ಕೂಡ ಜಲಾವೃತಗೊಂಡಿದ್ದು ಮುಂದಿನ 30 ಗಂಟೆಗಳ ಕಾಲ ರೈಲ್ವೆ ಸಂಚಾರವನ್ನ ಸ್ಥಗಿತಗೊಳಿಸಲಾಗಿದೆ. ಗುರುವಾರ ಸಂಜೆ 5.30ದಿಂದ ಇಂದು ಮಳೆ ಸುರಿಯಾಗುತ್ತಿದೆ, ಹೈದರಾಬಾದ್, ರಂಗ ರೆಡ್ಡಿ, ಅದಿಲಾಬಾ, ನಿಜಾಮ್ಬಾದ್, ಕರೀಂ ನಗರ, ವರಾಂಗಲ್, ನಲಗೊಂಡ, ಇನ್ನಿತರ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎರಡು ದಿನ ಶಾಲಾ ಕಾಲೇಜುಗಳಿಗೆ ರಜೆ
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಗುಂಟೂರು, ಹೈದರಬಾದ್ ಸೇರಿದಂತೆ ಆಂಧ್ರಪ್ರದೇಶದ ಬಹುತೇಕ ಎಲ್ಲಾ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಫೋಷಿಸಲಾಗಿದೆ. ಇನ್ನು ಐಟಿ ಕಂಪನಿ ನೌಕರರಿಗೆ ಮನೆಯಿಂದ ಕೆಲಸ ನಿರ್ವಹಿಸಲು ಐಟಿ ಕಂಪನಿಗಳು ತಿಳಿಸಿವೆ.

ಸಿಕ್ರಿಂದ್ರಬಾದ್-ಗುಂಟೂರು ನಡುವೆ ರೈಲ್ವೆ ಸಂಚಾರ ಸ್ಥಗಿತ
ನಗರದ ರಸ್ತೆಗಳು ಸೇರಿದಂತೆ, ರೈಲ್ವೆ ಹಳಿಗಳು ಕೂಡ ಜಲಾವೃತಗೊಂಡಿದ್ದು ಮುಂದಿನ 30 ಗಂಟೆಗಳ ಕಾಲ ರೈಲ್ವೆ ಸಂಚಾರವನ್ನ ಸ್ಥಗಿತಗೊಳಿಸಲಾಗಿದೆ.

ಎನ್ ಡಿಆರ್ ಎಫ್ ಸೇನೆ ಬುಲಾವ್
ಆಂದ್ರಪ್ರದೇಶದಲ್ಲಿ ಜಲಪ್ರಳಯ ಎದುರಾಗಿದ್ದರಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲು ಆಂದ್ರಪ್ರದೇಶದ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರು ಎನ್ ಡಿಆರ್ ಎಫ್ ಸೇನೆಯ ಕರೆಸಿಕೊಂಡಿದ್ದು. ಈಗಾಗಲೇ 5 ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ. ಹಾಗೂ ರಾಜ್ಯದ್ಯಾಂತ ಹೈಅಲರ್ಟ್ ಘೋಷಿಸಲಾಗಿದೆ.

ಮೃತ ಕುಟುಂಬಗಳಿಗೆ ತಲಾ 4 ಲಕ್ಷ ಪರಿಹಾರ
ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ, ಈ ಮಳೆಗೆ 8 ಜನ ಸಾವನ್ನಪ್ಪಿದ್ದು. ಆ ಮೃತ ಕುಟುಂಬಗಳಿಗೆ ತಲಾ 4 ಲಕ್ಷ ರುಗಳನ್ನು ಸರ್ಕಾರ ಘೋಷಿಸಿದೆ.

ತಗ್ಗುಪ್ರದೇಶಗಳಿಗೆ ನೀರು
ಈ ಮಳೆಯಿಂದಾಗಿ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದ್ದು, ಕೆಲವರು ಮನೆಗಳಿಗೆ ನೀರು ನುಗ್ಗಿದ್ದು ಆಸ್ತಿಗಳಿಗೆ ಅಪಾರ ಹಾನಿ ಉಂಟಾಗಿದೆ.

ಹೈಅಲರ್ಟ್ ಘೋಷಣೆ
ಹೈದರಾಬಾದ್ ಸೇರಿದಂತೆ ಹಲವು ಜಿಲ್ಲೆಗಳಲ್ಲೂ ಇನ್ನು ಎರಡು ದಿನಗಳ ವರೆಗೆ ಭಾರೀ ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಇದರಿಂದ ರಾಜ್ಯದ್ಯಾಂತ ಹೈಅಲರ್ಟ್ ಘೋಷಿಸಲಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications