ಹೈದರಾಬಾದ್; ಮೃಗಾಲಯದಲ್ಲಿ ಬಿಳಿ ಹುಲಿ ಸಾವು
ಹೈದರಾಬಾದ್, ಜೂನ್ 25 : ತೆಲಂಗಾಣದ ಹೈದರಾಬಾದ್ ನಗರದ ನೆಹರೂ ಮೃಗಾಲಯದಲ್ಲಿ ಬಿಳಿ ಹುಲಿ ಸಾವನ್ನಪ್ಪಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಬಿಳಿ ಹುಲಿಗೆ ಮೇ 29ರಿಂದ ಚಿಕಿತ್ಸೆ ನೀಡಲಾಗುತ್ತಿತ್ತು.
ಕಿರಣ್ ಎಂಬ 8 ವರ್ಷದ ಗಂಡು ಬಿಳಿ ಹುಲಿಯು ಸಾವನ್ನಪ್ಪಿದೆ. ನೆಹರೂ ಮೃಗಾಲಯದಲ್ಲಿಯೇ ಇದು ಜನಿಸಿತ್ತು. ಭದ್ರಿ ಮತ್ತು ಸಮೀರಾಗೆ ಜನಿಸಿದ ಬಿಳಿ ಹುಲಿ ಇದಾಗಿತ್ತು.
ಬಿಳಿ ಹುಲಿ ಕಿರಣ್ ಕುತ್ತಿಗೆಯ ಕೆಳ ಭಾಗದಲ್ಲಿ ಗೆಡ್ಡೆಯೊಂದು ಆಗಿತ್ತು. ಮೃಗಾಲಯದ ಐಸಿಯು ವಾರ್ಡ್ನಲ್ಲಿ ಮೇ 29ರಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ತಜ್ಞ ವೈದ್ಯರ ತಂಡ ಹುಲಿಗೆ ಚಿಕಿತ್ಸೆ ನೀಡುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮೃತಪಟ್ಟಿದೆ.

ಇದೇ ಮೃಗಾಲಯದಲ್ಲಿ ಭದ್ರಿ (12) ಮತ್ತು ರುದ್ರ (14) ಎಂಬ ಎರಡು ಬಿಳಿ ಹುಲಿಗಳು ಹೀಗೆ ಕುತ್ತಿಗೆಯ ಭಾಗದಲ್ಲಿ ಗೆಡ್ಡೆಗಳು ಉಂಟಾಗಿ ಮೃತಪಟ್ಟಿದ್ದವು. ಕಿರಣ್ 8 ವರ್ಷವಾಗಿರುವಾಗಲೇ ಸಾವನ್ನಪ್ಪಿದೆ.
ನೆಹರು ಮೃಗಾಲಯದ ಅಧಿಕಾರಿಗಳು ಜೀವಕೋಶೀಯ ಮತ್ತು ಆಣ್ವಿಕ ಜೀವಶಾಸ್ತ್ರ ಕೇಂದ್ರ (ಸಿಸಿಎಂಬಿ)ಕ್ಕೆ ಈ ಕುರಿತು ಮಾಹಿತಿ ನೀಡಿದ್ದಾರೆ. ಮೂರು ಗಂಡು ಹುಲಿಗಳು ಒಂದೇ ತರನಾದ ಕಾಯಿಲೆಯಿಂದ ಮೃತಪಟ್ಟಿರುವುದಕ್ಕೆ ಕಾರಣ ಏನು? ಎಂದು ವರದಿ ನೀಡುವಂತೆ ಮನವಿ ಮಾಡಿದೆ.
ಪಶು ವೈದ್ಯಕೀಯ ಕಾಲೇಜಿನ ಸಿಬ್ಬಂದಿಗಳು ಮೃತ ಹುಲಿಯ ಮರಣೋತ್ತರ ಪರೀಕ್ಷೆಯನ್ನು ನಡೆಸಿದ್ದು, ವರದಿ ಇನ್ನೂ ಬರಬೇಕಿದೆ. ಹುಲಿಯ ಉಸಿರಾಟ ನಾಳದಲ್ಲಿಯೂ ಚಿಕ್ಕ ಚಿಕ್ಕ ಗೆಡ್ಡೆಗಳಾಗಿತ್ತು ಎಂಬ ಮಾಹಿತಿ ಸಿಕ್ಕಿದ್ದು, ವರದಿಗಾಗಿ ಕಾಯಲಾಗುತ್ತಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications