ಆಂಧ್ರ: ಡೈನಮೈಟ್ ಸ್ಟೋಟ 9 ಕಲ್ಲು ಕ್ವಾರಿ ಕಾರ್ಮಿಕರ ದುರ್ಮರಣ
ಕರ್ನೂಲು, ಆಗಸ್ಟ್ 03: ಆಂಧ್ರಪ್ರದೇಶದ ಕರ್ನೂಲಿನಲ್ಲಿ ಇಂದು ರಾತ್ರಿ ಸಂಭವಿಸಿರುವ ಡೈನಮೈಟ್ ಸ್ಪೋಟ ದುರಂತದಲ್ಲಿ ಕನಿಷ್ಟ 9 ಮಂದಿ ಕಾರ್ಮಿಕರು ಮರಣಿಸಿದ್ದಾರೆ.
ಕರ್ನೂಲು ಜಿಲ್ಲೆಯ ಆಲೂರು ಮಂಡಲದ ಹಿತ್ತಲ ಬೆಲಗಲ ಗ್ರಾಮದಲ್ಲಿ ಕಲ್ಲು ಬಂಡೆ ಒಡೆಯಲು ಇಟ್ಟಿದ್ದ ಡೈನಮೈಟ್ ಸ್ಪೋಟಗೊಂಡು ಕನಿಷ್ಟ 9 ಮಂದಿ ಕಲ್ಲು ಕ್ವಾರಿ ಕಾರ್ಮಿಕರು ಮೃತರಾಗಿದ್ದರು. ಹಲವರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಭೀತಿ ಇದೆ.

ಘಟನಾ ಸ್ಥಳದಲ್ಲಿ ಇದ್ದವರ ಪ್ರಕಾರ ಅಲ್ಲಿ 15 ಮಂದಿ ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಪೊಲೀಸರು ಈವರೆಗೆ 5 ಶವಗಳನ್ನು ಪತ್ತೆ ಮಾಡಿದ್ದು, ಇನ್ನೂ ನಾಲ್ಕು ಶವಗಳು ಗುರುತೇ ಸಿಗದಂತಾಗಿವೆ. 6 ಮಂದಿ ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಪೊಲೀಸರ ಪ್ರಕಾರ ಬಹುತೇಕ ಕಾರ್ಮಿಕರು, ಬಿಹಾರ ಮತ್ತು ಪಂಜಾಬ್ ರಾಜ್ಯದವರಾಗಿದ್ದಾರೆ. ನಿಧನ ಹೊಂದಿದವರ ಕುಟುಂಬಗಳನ್ನು ಪತ್ತೆ ಹಚ್ಚುವ ಕಾರ್ಯ ಮಾಡುತ್ತಿರುವುದಾಗಿಯೂ ಅವರು ತಿಳಿಸಿದ್ದಾರೆ.
ಆಂಧ್ರದ ಟಿಡಿಪಿ ಪಕ್ಷ ಸೇರಿದಂತೆ ಹಲವು ಮುಖಂಡರು ಈ ಬಗ್ಗೆ ಟ್ವೀಟ್ ಮಾಡಿದ್ದು, ಸತ್ತವರ ಆತ್ಮಕ್ಕೆ ಶಾಂತಿ ಕೋರುವುದಾಗಿ ತಿಳಿಸಿದ್ದಾರೆ. ಪೊಲೀಸರು ಘಟನೆ ಕುರಿತು ಹೆಚ್ಚಿನ ತನಿಕೆ ನಡೆಸುತ್ತಿದ್ದಾರೆ.
-
ಗಂಟೆಗಟ್ಟಲೆ ಕ್ಯೂ ನಿಂತರೂ ಸಿಗದ ಗ್ಯಾಸ್: ಮೊಬೈಲ್ ಟವರ್ ಏರಿ ಆಟೋ ಚಾಲಕನ ಆಕ್ರೋಶ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ












Click it and Unblock the Notifications