ಹೈದರಾಬಾದ್ : ಮೃತಳ ಕುಟುಂಬವನ್ನು ಸಂತೈಸೋಕೆ ಬಂದಿದ್ದ ಕೊಲೆಗಾರ!
ಹೈದರಾಬಾದ್, ಸೆಪ್ಟೆಂಬರ್ 13: ಯುವತಿಯೊಬ್ಬಳನ್ನು ಸಾಯಿಸಿ, ನಂತರ ಆಕೆಯ ಕುಟುಂಬಸ್ಥರನ್ನು ಸ್ವತಃ ಸಂತೈಸಲು ಬಂದಿದ್ದ ಕೊಲೆಗಾರನನ್ನು ಬಂಧಿಸುವಲ್ಲಿ ಹೈದರಾಬಾದ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಹೈದರಾಬಾದಿನ ವ್ಯಾಪಾರಿಯೊಬ್ಬರ 17 ವರ್ಷದ ಮಗಳು ಸೆ. 9 ರಂದು ಶನಿವಾರದಿಂದ ನಾಪಯತ್ತೆಯಾಗಿದ್ದಳು. ಸ್ನೇಹಿತರನ್ನು ಭೇಟಿಯಾಗಲು ಹೋಗುತ್ತೆನೆಂದು ತೆರಳಿದವಳು ರಾತ್ರಿಯಾದರೂ ಬಾರದಿದ್ದಾಗ ಆತಂಕಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.

ಹುಡುಗಿಯ ಪತ್ತೆಗೆ ಬಲೆ ಬೀಸಿದ್ದ ಪೊಲೀಸರಿಗೆ ಮಂಗಳವಾರದಂದು ಆಕೆಯ ಕೊಳೆತ ಶವ ಸಿಕ್ಕಿತ್ತು. ಯುವತಿಯ ಸಾವಿನ ನಂತರ ಆಕೆಯ ಪೋಷಕರನ್ನು ಸಂತೈಸಲು ಬಂದಿದ್ದ ಸಾಯಿ ಕಿರಣ್ ಎಂಬ ಯುವತಿಯ ಸ್ನೇಹಿತನೇ ಈ ಕೊಲೆ ಮಾಡಿರುವುದು ತನಿಖೆಯ ನಂತರ ಪೊಲೀಸರಿಗೆ ತಿಳಿದುಬಂದಿದೆ. ಯುವತಿ ಶನಿವಾರ ಸಾಯಿ ಕಿರಣ್ ಜೊತೆಯಲ್ಲೇ ಆಟೋ ಹತ್ತಿದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿಯೂ ಸೆರೆಯಾಗಿದ್ದವು.
ಸಾಯಿ ಕಿರಣ್ ನನ್ನು ಪೊಲೀಸರು ವಿಚಾರಣೆಗೊಳಪಡಿಸಿದಾಗ, ಯುವತಿಯೊಂದಿಗೆ ತಾನು ಹಲವು ವರ್ಷಗಳಿಂದ ಸಂಬಂಧ ಹೊಂದಿದ್ದೆ. ನಾನು ಆಕೆಯನ್ನೇ ಮದುವೆಯಾಗಬೇಕು ಎಂಬುದು ಯುವತಿಯ ಆಸೆಯಾಗಿತ್ತು. ಆದರೆ ನನಗೆ ಆಕೆಯನ್ನು ಮದುವೆಯಾಗುವುದಕ್ಕೆ ಇಷ್ಟವಿರಲಿಲ್ಲ. ಪದೇ ಪದೇ ಆಕೆ ಒತ್ತಡ ಹೇರುತ್ತಿದ್ದರಿಂದ ಕಿರಿಕಿರಿಯಾಗಿ ಆಕೆಯನ್ನು ಸಾಯಿಸಿದ್ದಅಗಿ ಒಪ್ಪಿಕೊಂಡಿದ್ದಾನೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications