ಅಬ್ಬಾ..! ಎಸಿಬಿ ದಾಳಿಯಲ್ಲಿ ಸಿಕ್ಕಿದ್ದು ಮನೆ ತುಂಬ ಬೆಳ್ಳಿ, ಬಂಗಾರ!
ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಸೋಮವಾರ ಎಸಿಬಿ ಅಧಿಕಾರಿಗಳು ಆರ್ ಟಿ ಓ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಕೋಟ್ಯಾಂತರ ರು ಅಕ್ರಮ ಆಸ್ತಿ ಪತ್ತೆಯಾಗಿದೆ.
ಹೈದರಾಬಾದ್, ಅಕ್ಟೋಬರ್. 26: ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ರಸ್ತೆ ಸಾರಿಗೆ ಪ್ರಾಧಿಕಾರದ ನೌಕರ ಪೂರ್ಣಚಂದ್ರ ರಾವ್ ಅವರ ಮನೆ ಮೇಲೆ ಮಂಗಳವಾರ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ಮಾಡಿದೆ.
ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಪೂರ್ಣಚಂದ್ರ ರಾವ್ ಅವರ ಹೆಸರಿನಲ್ಲಿರುವ ಕನಿಷ್ಠ 14 ಮನೆಗಳು, ಮನೆ ತುಂಬಾ 60 ಕೆಜಿ ಬೆಳ್ಳಿ ಮತ್ತು 1 ಕೆಜಿ ಬಂಗಾರದ ವಸ್ತುಗಳು ಮತ್ತು 20 ಲಕ್ಷ ರು. ಪತ್ತೆಯಾಗಿವೆ.

1981ರಲ್ಲಿ ಮೋಟರ್ ವಾಹನದ ಇನ್ಸ್ ಪೆಕ್ಟರ್ ಆಗಿ ಸೇವೆಗೆ ಸೇರಿದ್ದ ಪೂರ್ಣಚಂದ್ರ ರಾವ್ ಅವರು, 7 ಅಪಾರ್ಟ್ ಮೆಂಟ್ಗಳು, ವಿನುಕೊಂಡದಲ್ಲಿ ಎರಡು ಮನೆಗಳು, ಹೈದರಾಬಾದ್ ಮತ್ತು ವಿಜಯವಾಡದಲ್ಲಿ ಎರಡು ಪ್ಲಾಟ್ಗಳು ಮತ್ತು ಮಿಲ್ಗಳ ಮಾಲೀಕತ್ವ ಹೊಂದಿದ್ದಾರೆ ಎಂದು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಪೂರ್ಣಚಂದ್ರ ರಾವ್ 3 ಕೋಟಿ ವೌಲ್ಯದ ಆಸ್ತಿ ಇದೆ ಎಂದು ಹೇಳುತ್ತಿದ್ದಾರೆ. ಆದರೆ, ಮಾರುಕಟ್ಟೆ ವೌಲ್ಯದ ಪ್ರಕಾರ ರಾವ್ ಆಸ್ತಿ 25 ಕೋಟಿಗಿಂತ ಹೆಚ್ಚು ಬೆಲೆ ಬಾಳುತ್ತದೆ. ಇನ್ನೂ ಹೆಚ್ಚಿನ ಆಸ್ತಿ ಪತ್ತೆಯಾಗುವ ಸಾಧ್ಯತೆಯಿದೆ ಎಂದು ಭ್ರಷ್ಟಾಚಾರ ನಿಗ್ರಹ ಅಧಿಕಾರಿ ದೇವಾನಂದ್ ಸಂತೊ ಹೇಳಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications