ಅಗ್ನಿಪಥ್ ಹಿಂಸಾಚಾರ: ಸಿಎಂ ಯೋಗಿಗೆ ಓವೈಸಿ 'ಬುಲ್ಡೋಜರ್' ಪ್ರಶ್ನೆ
ಹೈದರಾಬಾದ್, ಜೂನ್ 19: ಅಗ್ನಿಪಥ್ ಯೋಜನೆಯ ವಿರುದ್ದ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ಬಗ್ಗೆ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದಾರೆ.
ಪೈಗಂಬರ್ ಬಗ್ಗೆ ಬಿಜೆಪಿ ನಾಯಕಿ ನೂಪರ್ ಶರ್ಮಾ ನೀಡಿದ್ದ ಹೇಳಿಕೆಯ ನಂತರ ಉತ್ತರ ಪ್ರದೇಶದ ಕೆಲವು ನಗರಗಳಲ್ಲಿ ಹಿಂಸಾಚಾರ ನಡೆದಿತ್ತು ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟಾಗಿತ್ತು. ಇದಕ್ಕೆ ಪ್ರತಿಯಾಗಿ ಹಿಂಸಾಚಾರಕ್ಕೆ ಕುಮ್ಮುಕ್ಕು ನೀಡಿದ್ದಾರೆ ಎನ್ನಲಾಗುತ್ತಿರುವ ವ್ಯಕ್ತಿಗಳ ಕಟ್ಟಡಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆಯನ್ನು ಯೋಗಿ ಸರಕಾರ ನಡೆಸಿತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಸಾದುದ್ದೀನ್ ಓವೈಸಿ, "ಅಗ್ನಿಪಥ್ ಸ್ಕೀಂ ವಿರೋಧಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಈ ಪ್ರತಿಭಟನೆಯಲ್ಲಿ ತೊಡಗಿರುವ ಎಷ್ಟು ವ್ಯಕ್ತಿಗಳ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ನಡೆಸಿದ್ದೀರಿ"ಎಂದು ಪ್ರಶ್ನಿಸಿದ್ದಾರೆ.

"ನಾವು ಮುಸ್ಲಿಮರು ಈ ದೇಶದ ಪ್ರಜೆಗಳಲ್ಲವೇ, ನಾವು ನಿಮ್ಮ ಮಕ್ಕಳಲ್ಲವೇ? ಶುಕ್ರವಾರ ನೀವು ನಮ್ಮನ್ನು ಉದ್ದೇಶಿಸಿ ಮಾತನಾಡುತ್ತೀರಿ ಎಂದು ನಾವು ಭಾವಿಸಿದ್ದೆವು. ಆದರೆ, ಆ ಕೆಲಸವನ್ನು ನೀವು ಮಾಡಲಿಲ್ಲ" ಎಂದು ಓವೈಸಿ, ಪ್ರಧಾನಿ ಮೋದಿಯವರನ್ನು ಉದ್ದೇಶಿಸಿ ಹೇಳಿಕೆಯನ್ನು ನೀಡಿದ್ದಾರೆ.
"ಕೇಂದ್ರ ಸರಕಾರದ ತಪ್ಪು ನಿರ್ಧಾರದಿಂದ ಯುವಕರು ಇಂದು ಅಗ್ನಿಪಥ್ ಸ್ಕೀಂ ವಿರೋಧಿಸಿ ರಸ್ತೆಗಿಳಿದಿದ್ದಾರೆ. ಅವರ ಆಸ್ತಿಯ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ನಡೆಸಿರುವ ಬಗ್ಗೆ ಸಾರ್ವಜನಿಕ ಹೇಳಿಕೆಯನ್ನು ನೀಡುತ್ತೀರಾ. ಯಾರ ಮನೆಯೂ ನೆಲಸಮವಾಗಬಾರದು ಎಂದು ನಾವು ಬಯಸುತ್ತೇವೆ"ಎಂದು ಅಸಾದುದ್ದೀನ್ ಓವೈಸಿ, ಉತ್ತರ ಪ್ರದೇಶ ಮತ್ತು ಕೇಂದ್ರ ಸರಕಾರವನ್ನು ಕುಟುಕಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಲಹಾಬಾದ್ ಉಚ್ಚನ್ಯಾಯಾಲಯದ ನ್ಯಾಯಾಧೀಶರಂತೆ ವರ್ತಿಸುತ್ತಿದ್ದಾರೆ. ಯಾರನ್ನಾದರೂ ಗುರುತಿಸಿ, ಅಂತವರ ಮನೆಯನ್ನು ಹೊಡೆದು ಹಾಕಿಸುತ್ತಾರೆ ಎಂದು ಗುಜರಾತಿನ ಕಛ್ ನಲ್ಲಿ ಸಭೆಯನ್ನು ಉದ್ದೇಶಿಸಿ ಅಸಾದುದ್ದೀನ್ ಓವೈಸಿ ಇತ್ತೀಚೆಗೆ ಹೇಳಿಕೆಯನ್ನು ನೀಡಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications