ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ರಾಮಮಂದಿರ ಕುರಿತ ಶಾ ಹೇಳಿಕೆ: ಮಾಧ್ಯಮ ವರದಿ ಸುಳ್ಳು ಎಂದ ಬಿಜೆಪಿ
ಹೈದರಾಬಾದ್, ಜುಲೈ 14: '2019 ಲೊಕಸಭಾ ಚುನಾವಣೆಗೂ ಮುನ್ನವೇ ರಾಮಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ' ಎಂದು ಅಮಿತ್ ಶಾ ಹೇಳಿಕೆ ನೀಡಿದ್ದಾರೆ ಎಂಬ ಮಾಧ್ಯಮ ವರದಿಯನ್ನು ಬಿಜೆಪಿ ತಳ್ಳಿಹಾಕಿದೆ.
ತೆಲಂಗಾಣದ ಹೈದರಾಬಾದಿನಲ್ಲಿ ಬಿಜೆಪಿ ಮುಖಂಡರೊಂದಿಗೆ ಸಭೆ ನಡೆಸಿದ ಅಮಿತ್ ಶಾ, 2019 ರ ಲೋಕಸಭಾ ಚುನಾವಣೆಗೂ ಮುನ್ನ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂಬ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.
ಚುನಾವಣೆಗೂ ಮುನ್ನವೇ ರಾಮಮಂದಿರ ನಿರ್ಮಾಣ ಆರಂಭ: ಅಮಿತ್ ಶಾ
ಆದರೆ ಅಮಿತ್ ಶಾ ಈ ಬಗ್ಗೆ ಖಚಿತವಾಗಿ ಮಾತನಾಡಿಲ್ಲ. ನಮ್ಮ ಅಜೆಂಡಾದಲ್ಲಿ ಈ ವಿಷಯ ಪ್ರಸ್ತಾಪವಾಗಿಲ್ಲ ಎಂದು ಬಿಜೆಪಿ ಹೇಳಿದೆ.
ಹೈದರಾಬಾದಿನಲ್ಲಿ ಶುಕ್ರವಾರವಿಡಿ ಬಿಜೆಪಿ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ಅಮಿತ್ ಶಾ, ಅವಧಿಗೂ ಮುನ್ನವೇ ಲೋಕಸಭಾ ಚುನಾವಣೆ ನಡೆಸುವ ವದಂತಿಯೂ ಸುಳ್ಳು ಎಂದರು. ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ ಎಂದು ಅವರು ಹೇಳಿದರು.
Comments
English summary
BJP denies media agency report of Amit Shah making assurances on Ram Mandir in a meeting in Hyderabad yesterday, says “no such matter was even on the agenda”
Story first published: Saturday, July 14, 2018, 13:34 [IST]