ವಿಶ್ವಕ್ಕೆ ಏಕತೆ ಸಂದೇಶ ರಾಮಾನುಜಾಚಾರ್ಯರ ಪ್ರತಿಮೆ: ಅಮಿತ್ ಶಾ

ಹೈದರಾಬಾದ್, ಫೆಬ್ರವರಿ 8: ಹೈದರಾಬಾದಿನ ರಂಗಾರೆಡ್ಡಿ ಜಿಲ್ಲೆಯಲ್ಲಿರುವ ಮುಚ್ಚಿಂತಲ್ ಬಳಿ ನಿರ್ಮಿಸಿರುವ ರಾಮಾನುಜಾಚಾರ್ಯ ಪ್ರತಿಮೆ ಸ್ಥಳಕ್ಕೆ ಇಂದು ಕೇಂದ್ರ ಸಚಿವ ಅಮಿತ್ ಶಾ ಭೇಟಿ ನೀಡಿದರು.

ಪ್ರತಿಮೆ ನಿರ್ಮಾಣಕ್ಕೆ ಶ್ರಮಿಸಿದ ಚಿನ್ನಜೀಯರ್ ಶ್ರೀ ಅವರಿಗೆ ಧನ್ಯವಾದ ತಿಳಿಸಿದ ಅವರು ಸಭಿಕರನ್ನುದ್ದೇಶಿಸಿ ಮಾತನಾಡಿದರು. ಇಲ್ಲಿಗೆ ಭೇಟಿ ನೀಡಿದಕ್ಕೆ ಸಂತೋಷವಾಗುತ್ತಿದೆ. ಈ ಸ್ಥಳಕ್ಕೆ ಭೆಟಿ ನೀಡಿದ್ದಕ್ಕೆ ನಾನು ಸಂತಸ ವ್ಯಕ್ತಪಡಿಸುತ್ತೇನೆ. ಮುಚ್ಚಿಂತಲ್ ಭೇಟಿ ನೀಡಿದ್ದು ಹೊಸ ಅನುಭವ ನೀಡುತ್ತಿದೆ ಎಂದರು.

'ಸಮಾನಾತೆಗಾಗಿ ಶ್ರೀ ರಾಮಾನುಜಾಚಾರ್ಯ ಶ್ರಮಿಸಿದ್ದರು. ಸನಾತನ ಧರ್ಮ ಎಲ್ಲದಕ್ಕೂ ಮೂಲ ಎಂದು ನಿರೂಪಿಸಿದ್ದರು. ಅವರ ಬೋಧನೆಗಳು ಎಲ್ಲರಿಗೂ ಆದರ್ಶವಾಗಿವೆ. ಸನಾತನ ಧರ್ಮ ಅನೇಕ ಸವಾಲುಗಳನ್ನು ಎದುರಿಸಿತ್ತು. ಅವರು ಪ್ರತಿಯೊಂದು ಜೀವವನ್ನು ಸಮಾನತೆಯಿಂದ ನೋಡಿದ್ದರು. ಹೀಗಾಗಿ ರಾಮಾನುಜಾಚಾರ್ಯರನ್ನು ಹಲವಾರು ವರ್ಷಗಳಿಂದ ನೆನೆಯಲಾಗುತ್ತದೆ. ಇಂತಹ ಸ್ಥಳಕ್ಕೆ ಭೇಟಿ ನೀಡಿದ್ದು ನನ್ನ ಅದೃಷ್ಟ' ಎಂದು ಅಮಿತ್ ಶಾ ಹೇಳಿದರು.

Amit Shah’s Speech at the Statue of Ramanujacharya, Hyderabad

'ಸ್ವಾಮಿಜಿ ಮಾಡಿದ ಕಾರ್ಯಕ್ಕೆ ಇಡಿ ದೇಶವೇ ಋಣಿಯಾಗಿದೆ. ಈ ಪ್ರತಿಮೆ ವಿಶ್ವಕ್ಕೆ ಏಕತೆ ಸಂದೇಶ ಸಾರುತ್ತದೆ. ರಾಮಾನುಜಾಚಾರ್ಯ ಜೀವನ ಎಲ್ಲರಿಗೂ ಪ್ರೇರಣೆ ನೀಡುತ್ತದೆ. ಪ್ರತಿಮೆ ನಿರ್ಮಾಣದ ಬಳಿಕೆ ಇದು ಹೆಸರಾಂತ ಕ್ಷೇತ್ರವಾಗಿದೆ. ಪ್ರತಿಮೆ ಸ್ಥಳಕ್ಕೆ ಎಲ್ಲಾ ವರ್ಗದವರೂ ಭೇಟಿ ನೀಡಲಿದ್ದಾರೆ' ಎಂದು ಹೇಳಿದರು.

ಫೆಬ್ರವರಿ 6ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೈದರಾಬಾದ್​ನ ಮುಂಚಿತ್ತಾಲ್​​ನಲ್ಲಿ ಶ್ರೀರಾಮಾನುಜಾಚಾರ್ಯರ 216 ಅಡಿ ಎತ್ತರದ ಪಂಚಲೋಹದ ಪ್ರತಿಮೆಯನ್ನು ಅನಾವರಣಗೊಳಿಸಿದರು. ಮುಂಚಿತ್ತಾಲ್​ನ ಶ್ರೀ ರಾಮಾನುಜಾಚಾರ್ಯ ಆಶ್ರಮದ ಸಮೀಪವೇ ಈ ಮೂರ್ತಿ ಇದ್ದು, ವಿಶ್ವದ ಎರಡನೇ ಅತ್ಯಂತ ಎತ್ತರದ ಪ್ರತಿಮೆಯೆನಿಸಿದೆ. ಹಾಗೇ, ಇದನ್ನು ಸಮಾನತೆಯ ಮೂರ್ತಿ ಎಂದೂ ಕರೆಯಗುತ್ತಿದೆ.

11ನೇ ಶತಮಾನದ ಸಂತ ಶ್ರೀ ರಾಮಾನುಜಾಚಾರ್ಯರ ಜನ್ಮ ಸಹಸ್ರಾಬ್ದಿ ಕಾರ್ಯಕ್ರಮ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೂ 6ರಂದು ನಡೆದಿವೆ. ಅದರಲ್ಲೆಲ್ಲ ಪಾಲ್ಗೊಂಡ ಪ್ರಧಾನಿ ಮೋದಿ, ವಿಶ್ವಕ್ಸೇನಾ ಇಷ್ಟಿ ಯಾಗದ ಪೂರ್ಣಾಹುತಿಯಲ್ಲೂ ಭಾಗವಹಿಸಿದ್ದಾರೆ. (ಮುಂದಿನ ಎಲ್ಲ ಇಷ್ಟಾರ್ಥಗಳೂ ಸಿದ್ಧಿಸಲಿ ಎಂಬ ಕಾರಣಕ್ಕೆ ಮಾಡುವ ಯಾಗ ಇದು). ಇದೇ ವೇಳೆ ರಾಮಾನುಜಾಚಾರ್ಯ ಆಶ್ರಮದ ತ್ರಿದಂಡಿ ಚಿನ್ನ ಜೀಯರ್​ ಸ್ವಾಮೀಜಿಯವರು ಪ್ರಧಾನಿ ನರೇಂದ್ರ ಮೋದಿಯವರ ಕೈಯಿಗೆ (ಮಣಿಕಟ್ಟು) ಚಿನ್ನದ ಕಂಕಣವನ್ನು ಕಟ್ಟಿದ್ದಾರೆ.

Amit Shah’s Speech at the Statue of Ramanujacharya, Hyderabad

ಎರಡು ಬಂಗಾರದ ಕಂಕಣಗಳನ್ನು ಕಟ್ಟಲಾಗಿದ್ದು, ಅದನ್ನು ಪ್ರಧಾನಿಗೆ ಕಟ್ಟುವುದಕ್ಕೂ ಮೊದಲು ಮಂತ್ರಗಳಿಂದ ಪವಿತ್ರಗೊಳಿಸಲಾಗಿದೆ. ಸಂಕಲ್ಪದೊಂದಿಗೆ ಇಷ್ಟಿ ಯಾಗದಲ್ಲಿ ಪಾಲ್ಗೊಳ್ಳುವ ಯಾರಿಗಾದರೂ ಸರಿ ಪವಿತ್ರ ಕಂಕಣ ಕಟ್ಟಲಾಗುವುದು. ಹಾಗೇ, ಪ್ರಧಾನಿ ನರೇಂದ್ರ ಮೋದಿ ನಿನ್ನೆ ಶ್ರೀರಾಮಾನುಜಾಚಾರ್ಯರ ಸಮಾನತೆ ಮೂರ್ತಿ ಉದ್ಘಾಟನೆಗೂ ಪೂರ್ವ ವಿಶ್ವಕ್ಸೇನಾ ಇಷ್ಟಿ ಯಾಗದಲ್ಲಿ ಪಾಲ್ಗೊಂಡಿದ್ದರಿಂದ ಅವರ ಕೈಗೂ ಕಂಕಣಗಳನ್ನು ಕಟ್ಟಲಾಗಿದೆ ಎಂದು ಆಶ್ರಮ ತಿಳಿಸಿದೆ.

ರಾಮಾನುಜಾಚಾರ್ಯರು ಸಮಾನತೆಯ ಪ್ರತಿಪಾದಕರಾಗಿದ್ದರು. ನಂಬಿಕೆ, ಜಾತಿ, ಪಂಥ ಸೇರಿ ಬದುಕಿನ ಎಲ್ಲದರಲ್ಲೂ ಸಮಾನತೆ ಇರಬೇಕು ಎಂದು ಹೇಳಿದ್ದರು. ಡಾ. ಅಂಬೇಡ್ಕರ್​ ಕೂಡ ರಾಮಾನುಜಾಚಾರ್ಯರ ತತ್ವವನ್ನು ಎತ್ತಿಹಿಡಿದಿದ್ದರು. ಹೀಗಾಗಿ ಅವರ ಪ್ರತಿಮೆಗೆ ಸಮಾನತೆ ಮೂರ್ತಿ ಎಂದು ಕರೆಯಲಾಗಿದೆ. ರಾಮಾನುಜಾಚಾರ್ಯರ ಪಂಚಲೋಹದ ಪ್ರತಿಮೆ (ಸಮಾನತೆ ಪ್ರತಿಮೆ) ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಂದು ಅನಾವರಣಗೊಂಡ ಶ್ರೀರಾಮಾನುಜಾಚಾರ್ಯರ ಸಮಾನತೆ ಮೂರ್ತಿ ಈ ದೇಶದ ಯುವಜನರನ್ನು ಪ್ರೋತ್ಸಾಹಿಸಲಿದೆ.

ಇದು ರಾಮಾನುಜಾಚಾರ್ಯರ ಜ್ಞಾನ, ನಿರ್ಲಿಪ್ತತೆ ಮತ್ತು ಆದರ್ಶಗಳ ಪ್ರತೀಕವಾದ ಮೂರ್ತಿ ಎಂದು ಹೇಳಿದರು. ಮಹಾನ್​ ನಾಯಕ, ಸಮಾನತೆಯನ್ನು ಪ್ರತಿಪಾದಿಸಿದ್ದ ಡಾ. ಅಂಬೇಡ್ಕರ್​ ಅವರು ಶ್ರೀರಾಮಾನುಜಾಚಾರ್ಯರ ಬಹುದೊಡ್ಡ ಅನುಯಾಯಿಯಾಗಿದ್ದರು. ಸರ್ವರಿಗೂ ಸಮಬಾಳು, ಸಮಾಜ ಎಂಬ ಅವರ ತತ್ವಾದರ್ಶಗಳನ್ನು ಪಾಲಿಸಿದರು. ರಾಮಾನುಜಾಚಾರ್ಯರು ಸಂಸ್ಕೃತ ಗ್ರಂಥ ಸಂಯೋಜನೆ ಮಾಡಿದರು ಮತ್ತು ಭಕ್ತಿ ಮಾರ್ಗದಲ್ಲಿ ತಮಿಳು ಭಾಷೆಗೂ ಅಷ್ಟೇ ಪ್ರಾಮುಖ್ಯತೆ ನೀಡಿದರು ಎಂದು ಮೋದಿಯವರು ಹೇಳಿದರು. ಅಂದಹಾಗೇ, ಈ ಸಹಸ್ರಾಬ್ದಿ ಕಾರ್ಯಕ್ರಮ 12 ದಿನ ನಡೆಯಲಿದೆ.

Recommended Video

      ಪಾಕಿಸ್ತಾನ ಶಿಕ್ಷಣ ಹೋರಾಟಗಾರ್ತಿ Malala Yousafzai Hijab ಬಗ್ಗೆ ಪ್ರತಿಕ್ರಿಯೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+