ಆಂಧ್ರದಲ್ಲಿ ಕಾಪು ಸಮುದಾಯಕ್ಕೆ ಶೇ. 5 ಮೀಸಲಾತಿ
ಅಮರಾವತಿ, ಡಿಸೆಂಬರ್ 2: ಕಾಪು ಸಮುದಾಯದ ಹೋರಾಟಕ್ಕೆ ಅಂತಿಮವಾಗಿ ಜಯ ದಕ್ಕಿದೆ. ಕಾಪು ಮೀಸಲಾತಿ ಮಸೂದೆ ಆಂಧ್ರ ಪ್ರದೇಶ ವಿಧಾನಸಭೆಯಲ್ಲಿ ಅವಿರೋಧವಾಗಿ ಅಂಗೀಕಾರ ಪಡೆದಿದೆ.
ಇದರಿಂದ ಶಿಕ್ಷಣ ಮತ್ತು ಉದ್ಯೋಗದಲ್ಲಿ ಕಾಪು ಸಮುದಾಯಕ್ಕೆ ಶೇಕಡಾ 5ರಷ್ಟು ಮೀಸಲಾತಿ ಸಿಗಲಿದೆ. ಈ ಮಸೂದೆ ಪ್ರಕಾರ ಕಾಪು, ಬಲಿಜ, ವಂತರಿ, ತೆಲಗ ಸಮುದಾಯಗಳನ್ನು ಹಿಂದುಳಿದ ವರ್ಗ ಎಫ್ ವಿಭಾಗಕ್ಕೆ ಸೇರಿಸಲಾಗಿದೆ. ಕಾಪು ಸಮುದಾಯಕ್ಕೆ ಹೆಚ್ಚುವರಿ ಮೀಸಲಾತಿ ನೀಡುವುದರ ಮೂಲಕ ಒಟ್ಟಾರೆ ಮೀಸಲಾತಿ ಪ್ರಮಾಣವನ್ನು ಆಂಧ್ರ ಸರಕಾರ ಶೇಕಡಾ 50ಕ್ಕೆ ಹೆಚ್ಚಿಸಿದೆ.
ಮಸೂದೆಗೆ ಆಂಧ್ರ ವಿಧಾನಸಭೆಯಲ್ಲಿ ಅಂಗೀಕಾರ ಸಿಕ್ಕಿದ್ದರೂ ಇದಕ್ಕೆ ಕೇಂದ್ರ ಸರ್ಕಾರದ ಅನುಮೋದನೆ ಅಗತ್ಯವಾಗಿದೆ. ಹೀಗಾಗಿ ಸದ್ಯದಲ್ಲೇ ಮಸೂದೆಯನ್ನು ಕೇಂದ್ರ ಸರ್ಕಾರಕ್ಕೆ ರವಾನಿಸಲಾಗುತ್ತದೆ.

ಮಸೂದೆ ಮಂಡಿಸಿ ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, "ತಮ್ಮನ್ನು ಭೇಟಿಯಾಗಿದ್ದ ಕಾಪು ಸಮುದಾಯದ ಮುಖಂಡರು ನಮಗೆ ರಾಜಕೀಯ ಮೀಸಲಾತಿ ಬೇಡ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಸಾಕು ಎಂದು ಹೇಳಿದ್ದರು. ಹೀಗಾಗಿ ಅವರ ಬೇಡಿಕೆಯನ್ನು ಈಡೇರಿಸಲಾಗಿದೆ," ಎಂದರು.
ಮೀಸಲಾತಿ ಸಿಕ್ಕಿದ ಖುಷಿಯಲ್ಲಿ ಕಾಪು ಸಮುದಾಯದ ಮುಖಂಡರು ಚಂದ್ರಬಾಬು ನಾಯ್ಡು ಅವರಿಗೆ ಸಿಹಿ ತಿನ್ನಿಸಿ ಸಂತಸ ಹಂಚಿಕೊಂಡರು.
ಈ ಹಿಂದೆ ಕಾಪು ಜನಾಂಗಕ್ಕೆ ಮೀಸಲಾತಿ ಕೋರಿ ಭಾರೀ ಪ್ರತಿಭಟನೆ ನಡೆಸಲಾಗಿತ್ತು. ಜನವರಿಯಲ್ಲಿ "ಕಾಪು ಘರ್ಜನೆ" ಹೆಸರಲ್ಲಿ ಕಾಪು ನಾಯಕ ಮುದ್ರಗಡ ಪದ್ಮನಾಭಂ ನೇತೃತ್ವದಲ್ಲಿ ಭಾರೀ ಪ್ರತಿಭಟನೆ ನಡೆದಿತ್ತು. ಇದು ಹಿಂಸೆಗೂ ತಿರುಗಿ ದೇಶದಾದ್ಯಂತ ಸುದ್ದಿಯಾಗಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications