ಆಘಾತಕಾರಿ ಸಂಗತಿ ಬಹಿರಂಗ: ಗೂಗಲ್ ಸರ್ಚ್ನಲ್ಲಿ ಆಧಾರ್, ಬ್ಯಾಂಕ್ ಖಾತೆ ವಿವರ
ಹೈದರಾಬಾದ್, ಜುಲೈ 12: ನಮ್ಮ ಖಾಸಗಿ ವಿವರಗಳು ಎಷ್ಟು ಸುರಕ್ಷಿತ? ಬ್ಯಾಂಕ್ ಖಾತೆ, ಪ್ಯಾನ್ ಸಂಖ್ಯೆ, ಮೊಬೈಲ್ ಹೀಗೆ ಪ್ರತಿಯೊಂದಕ್ಕೂ ಆಧಾರ್ ಸಂಖ್ಯೆಯನ್ನು ಸಂಪರ್ಕಿಸುವ ಚಟುವಟಿಕೆ ಆರಂಭವಾದಾಗಿನಿಂದಲೂ ಈ ಬಗ್ಗೆ ಪ್ರಶ್ನೆಗಳು ಉದ್ಭವಿಸುತ್ತಲೇ ಇವೆ.
ಆಧಾರ್ ಸಂಖ್ಯೆ ಜೋಡಣೆಯಿಂದ ಯಾರ ಮಾಹಿತಿಯೂ ಸೋರಿಕೆಯಾಗುವುದಿಲ್ಲ ಎಂಬ ಭರವಸೆಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ.
ಆದರೆ, ಅದು ಎಷ್ಟು ಸತ್ಯ? ನಮ್ಮ ವೈಯಕ್ತಿಕ ಮಾಹಿತಿಗಳು ನಿಜಕ್ಕೂ ಸುರಕ್ಷಿತವೇ? ಇಲ್ಲ ಎನ್ನುತ್ತದೆ ಇತ್ತೀಚೆಗೆ ಬಹಿರಂಗವಾದ ಆಘಾತಕಾರಿ ವರದಿ.

ಜನರ ವೈಯಕ್ತಿಕ ಮಾಹಿತಿಗಳನ್ನು ಕೇವಲ ಗೂಗಲ್ ಸರ್ಚ್ ಮೂಲಕವೇ ಪಡೆದುಕೊಳ್ಳಬಹುದು. ಇದಕ್ಕೆ ಅವರ ಮೊಬೈಲ್ ಫೋನ್ ಸಂಖ್ಯೆ ನಮೂದಿಸಿದರೆ ಸಾಕು.
ಆಂಧ್ರಪ್ರದೇಶ ಸರ್ಕಾರಕ್ಕೆ ಸಂಬಂಧಿಸಿದ ವೆಬ್ಸೈಟ್ ಒಂದು ಜನರ ಫೋನ್ ನಂಬರ್, ಆಧಾರ್ ಸಂಖ್ಯೆ, ತಂದೆ ಹೆಸರು, ಪಾಸ್ಬುಕ್ ಮತ್ತು ಬ್ಯಾಂಕ್ ಖಾತೆ ಸಂಖ್ಯೆಗಳು, ಅವರು ವಾಸ ಮಾಡುವ ಜಿಲ್ಲೆ, ಗ್ರಾಮಗಳ ಮಾಹಿತಿಯನ್ನು ಸೋರಿಕೆ ಮಾಡುತ್ತಿದೆ.
ಇಲ್ಲಿನ ಡಾಟಾಬೇಸ್ನಲ್ಲಿ ನೀವು ಜನರ ಮೊಬೈಲ್ ಸಂಖ್ಯೆ ನಮೂದಿಸಿದರೆ ಸಾಕು.
ಆಂಧ್ರಪ್ರದೇಶದಲ್ಲಿ ಆಯುರ್ವೇದಿಕ್ ಔಷಧದ ಗಿಡಗಳನ್ನು ಬೆಳೆಯುವುದನ್ನು ಉತ್ತೇಜಿಸುವ ಕೆಲಸ ಮಾಡುತ್ತಿರುವ ಆಂಧ್ರಪ್ರದೇಶ ಔಷಧೀಯ ಮತ್ತು ಚಿಕಿತ್ಸೆಯ ಗಿಡಗಳ ಮಂಡಳಿಯು ಸಬ್ಸಿಡಿ ಪಡೆದುಕೊಂಡ 23 ಸಾವಿರ ರೈತರ ವೈಯಕ್ತಿಕ ಮಾಹಿತಿಯನ್ನು ಸೋರಿಕೆ ಮಾಡಿದೆ.
ರಾಜ್ಯದ ರೈತರು ಮತ್ತು ಬುಡಕಟ್ಟು ಸಮುದಾಯದವರಿಗೆ ಸಬ್ಸಿಡಿಯನ್ನು ನೀಡಲಾಗಿತ್ತು. ಈಗ ಅವರೆಲ್ಲರ ಖಾಸಗಿ ಮಾಹಿತಿಗಳು ಆಂಧ್ರಪ್ರದೇಶ ಸರ್ಕಾರದ ವೆಬ್ಸೈಟ್ನಲ್ಲಿನ ಮುಕ್ತ ಡಾಟಾಬೇಸ್ನಲ್ಲಿ ಲಭ್ಯವಾಗುತ್ತಿದೆ.
ಈ ಮಾಹಿತಿಗಳ ಮೇಲೆ ಯಾವುದೇ ಪ್ರವೇಶ ನಿರ್ಬಂಧವಿಲ್ಲ. ಅವುಗಳ ಮೇಲೆ ಕ್ಲಿಕ್ ಮಾಡಿ ಯಾರದ್ದೇ ಬೇಕಾದರೂ ಮಾಹಿತಿಗಳನ್ನು ವೀಕ್ಷಿಸಬಹುದು ಅಥವಾ ಎಲ್ಲವನ್ನೂ ಎಕ್ಸೆಲ್ಶೀಟ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು.
ಬೇರೆ ಕಡೆ ಮಾಹಿತಿ ಕದಿಯುವವರು ವೆಬ್ಸೈಟ್ಗೆ ಹೋಗಿ ಒಂದಷ್ಟು ಸಮಯ, ಶ್ರಮ ವಿನಿಯೋಗಿಸಿ ಮಾಹಿತಿಗಳನ್ನು ಕದಿಯಬೇಕಾಗುತ್ತದೆ.
ಆದರೆ, ಈ ಪ್ರಕರಣದಲ್ಲಿ ಹಾಗಿಲ್ಲ. ವ್ಯಕ್ತಿಯ ಫೋನ್ ಸಂಖ್ಯೆ ನಮೂದಿಸಿದರೆ ಸಾಕು. ಅವರ ಎಲ್ಲ ಮಾಹಿತಿಯೂ ಸುಲಭವಾಗಿ ಲಭ್ಯವಾಗುತ್ತವೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications