ರಸ್ತೆಯಲ್ಲೇ ಹೆರಿಗೆ: ವಿಡಿಯೋವಾದರೂ ಅಧಿಕಾರಿಗಳ ಮನಕಲಕಲಿ!
ವಿಜಯನಗರಂ, ಸೆಪ್ಟೆಂಬರ್ 07: ಕಳಪೆ ರಸ್ತೆಯಲ್ಲಿ ವಾಹನ ಸಂಚಾರ ಸಾಧ್ಯವಾಗದ ಕಾರಣ ಜೋಲಿಯಲ್ಲಿ ಗರ್ಭಿಣಿ ಮಹಿಳೆಯನ್ನು ಹೊತ್ತೊಯ್ದು, ಆಕೆ ರಸ್ತೆಯಲ್ಲೇ ಶಿಶುವಿಗೆ ಜನ್ಮ ನೀಡಿದ ಘಟನೆ ಆಂಧ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ಮಸಾಕಾ ಎಂಬ ಹಳ್ಳಿಯಿಂದ 7 ಕಿ.ಮೀ.ದೂರವಿರುವ ಆಸ್ಪತ್ರೆಗೆ ತೆರಳಲು ರಸ್ತೆಯೇ ಸರಿಯಿಲ್ಲದ ಕಾರಣ ವಾಹನ ಸಂಚಾರ ಸಾಧ್ಯವಿರಲಿಲ್ಲ. ಆದ್ದರಿಂದ ಮಹಿಳೆಯನ್ನು ಜೋಲಿಯ ಮೂಲಕ ಹೊತ್ತೊಯ್ಯಲಾಗಿತ್ತು. ಆದರೆ ಮಾರ್ಗಮಧ್ಯೆಯೇ ಹೆರಿಗೆ ನೋವಿನಿಂದ ಬಳಲಿದ ಮಹಿಳೆ ರಸ್ತೆಯಲ್ಲೇ ಶಿಶುವಿಗೆ ಜನ್ಮನೀಡಿದ್ದರು.
#WATCH: A pregnant woman being carried by her relatives through a forest for 4 km in Vijayanagaram district due to lack of road connectivity. Hospital was 7 km away from the village but she delivered midway & returned. Both the baby & the mother are safe. (4.9.18) #AndhraPradesh pic.twitter.com/fvGZlYwDCl
— ANI (@ANI) September 7, 2018
ಈ ಘಟನೆ ಸೆಪ್ಟೆಂಬರ್ 4 ರಂದು ನಡೆದಿದ್ದು. ತಡವಾಗಿ ಬೆಳಕಿಗೆ ಬಂದಿದೆ. ಮಹಿಳೆಯನ್ನು ಜೋಲಿಯಲ್ಲಿ ಕೊಡೋಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ವಿಡಿಯೋ ನೋಡಿಯಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳಲಿ. ರಸ್ತೆಯನ್ನು ಸರಿಪಡಿಸಲು ಮನಸ್ಸು ಮಾಡಲಿ ಎಂದು ಊರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಹಲವು ಬಾರಿ ಈ ಕುರಿತು ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರೂ, ಊರಿಗೆ ರಸ್ತೆ ಕಲ್ಪಿಸುವ ಕೆಲಸವನ್ನು ಮಾತ್ರ ಮಾಡಿಲ್ಲ.
ಜುಲೈ 29 ರಂದು ಸಹ ಇಂಥದೇ ಘಟನೆ ಇದೇ ಊರಿನಲ್ಲಿ ನಡೆದಿತ್ತು. ಇಷ್ಟಾದರೂ ಸರ್ಕಾರದ ಅಧಿಕಾರಿಗಳು ಮಾತ್ರ ತಲೆಕೆಡಿಸಿಕೊಳ್ಳುತ್ತಿಲ್ಲ ಎಂಬುದು ಬೇಸರದ ಸಂಗತಿ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications