ಸೆಲ್ಫಿ ತೆಗೆದುಕೊಳ್ಳಲು ಹೋಗಿ ಜಲಪಾತದಲ್ಲಿ ಜಾರಿದ ಮಹಿಳೆ!
ಹೈದ್ರಾಬಾದ್, ಸಪ್ಟೆಂಬರ್,14: ಆಂಧ್ರ ಪ್ರದೇಶ ಮೂಲದ ಯುವತಿಯೊಬ್ಬರು ತಮ್ಮ ಭಾವಿ ಪತಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳುವುದಕ್ಕೆ ಹೋಗಿ ಜಲಪಾತದಲ್ಲಿ ಬಿದ್ದು ಪ್ರಾಣ ಬಿಟ್ಟಿರುವ ಘಟನೆ ಅಮೆರಿಕಾದಲ್ಲಿ ವರದಿಯಾಗಿದೆ.
ಅಟ್ಲಾಂಟಾದಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ತೆರಳಿದ್ದ ಪೊಲವರಪು ಕಮಲ ಎಂಬ ಯುವತಿ ತಮ್ಮ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಬಾಲ್ದ್ ರಿವರ್ ಫಾಲ್ ಗೆ ತೆರಳಿದ್ದಾರೆ. ಈ ವೇಳೆ ವಾಟರ್ ಫಾಲ್ ಬಳಿ ಸೆಲ್ಫಿ ಕ್ಲಿಕಿಸಿಕೊಳ್ಳಲು ತೆರಳಿದ ದಂಪತಿ ಕಾಲುಜಾರಿ ಬಿದ್ದಿದ್ದಾರೆ.
ಇನ್ನು, ರಕ್ಷಣಾ ಕಾರ್ಯಾಚರಣೆ ನಡೆಸಿ ಪತಿಯನ್ನು ಸುರಕ್ಷಿತವಾಗಿ ಮೇಲೆ ಕರೆದುಕೊಂಡು ಬರಲಾಗಿದೆ. ಆದರೆ ಪೊಲವರಪು ಕಮಲ ಅವರ ಪ್ರಾಣ ಉಳಿಸುವುದಕ್ಕೆ ಸಾಧ್ಯವಾಗಿಲ್ಲ ಎಂದು ರಕ್ಷಣಾ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಆಂಧ್ರ ಪ್ರದೇಶ ಮೂಲದ ಪೊಲವರಪು ಕಮಲ:
ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಗುದ್ಲಾವಲೇರು ಮೂಲದ ಪೊಲವರಪು ಕಮಲ ಅವರು ತಮ್ಮ ಪದವಿ ವಿದ್ಯಾಭ್ಯಾಸವನ್ನು ಮುಗಿಸಿ ಅಮೆರಿಕಾಗೆ ತೆರಳಿದ್ದರು. ಅಮೆರಿಕಾದ ಸಾಫ್ಟವೇರ್ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರು. "ಇಂಜಿನಿಯರಿಂಗ್ ನಲ್ಲಿ ಪದವಿ ಪಡೆದುಕೊಂಡಿದ್ದ ಮಗಳು ಉನ್ನತ ಶಿಕ್ಷಣಕ್ಕಾಗಿ ಅಮೆರಿಕಾಗೆ ತೆರಳಿದ್ದರು. ವಿದ್ಯಾಭ್ಯಾಸ ಪೂರ್ಣಗೊಳಿಸಿದ ಮಗಳಿಗೆ ಇತ್ತೀಚಿಗೆ ಉದ್ಯೋಗವೂ ಸಿಕ್ಕಿತ್ತು" ಎಂದು ಪೊಲವರಪು ಕಮಲ ಅವರ ತಾಯಿ ಹೇಳಿದ್ದಾರೆ. ಪೊಲವರಪು ಕಮಲ ಅವರ ಮೃತದೇಹವನ್ನು ಸ್ವದೇಶಕ್ಕೆ ತೆಗೆದುಕೊಂಡು ಬರುವುದಕ್ಕೆ ಆಂಧ್ರ ಪ್ರದೇಶದ "ದಿ ತೆಲಗು ಅಸೋಸಿಯೇಷನ್" ಸಹಾಯ ಮಾಡುವುದಕ್ಕೆ ಮುಂದೆ ಬಂದಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications