ನೂಪೂರ್ ಶರ್ಮಾ ಅಮಾನತು ಕ್ರಮ ಒಂದು ನಾಟಕ: ಓವೈಸಿ
ಹೈದರಾಬಾದ್ ಜೂನ್ 7: ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ಸಂಬಂಧ ನೂಪೂರ್ ಶರ್ಮಾ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತು ಮಾಡಿದೆ. ಆದರೆ ಬಿಜೆಪಿಯ ಈ ಕ್ರಮ 'ಒಂದು ನಾಟಕ' ಎಂದು ಎಐಎಂಐಎಂ ಅಧ್ಯಕ್ಷ ಅಸಾವುದ್ದೀನ್ ಓವೈಸಿ ಜರಿದಿದ್ದಾರೆ.
"ಪ್ರವಾದಿ ಮಹಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರರಾದ ನೂಪೂರ್ ಶರ್ಮಾ ವಿರುದ್ಧ 10 ದಿನಗಳ ಹಿಂದೆಯೇ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಗಲ್ಫ್ ರಾಷ್ಟ್ರಗಳು ಭಾರತದ ಮೇಲೆ ಒತ್ತಡ ಹೇರಿದ ನಂತರ ಬಿಜೆಪಿ ಕ್ರಮ ಕೈಗೊಂಡಿದೆ,'' ಎಂದು ಓವೈಸಿ ದೂರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಓವೈಸಿ, "ನಾನು ಭಾರತೀಯ ಪ್ರಜೆಯಾಗಿ, ಒಬ್ಬ ಮಸ್ಲಿಂ ಆಗಿ ನೂಪೂರ್ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ. ಆದರೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಪ್ರಧಾನಿ ಅವರೇಕೆ ಈ ಸಂಬಂಧ ಕ್ರಮ ತೆಗೆದುಕೊಳ್ಳಲಿಲ್ಲ. ಅಸಾವುದ್ದೀನ್ ಓವೈಸಿಯ ಬೇಡಿಕೆ ವಿದೇಶಿ ನಾಯಕರ ಧ್ವನಿಗಿಂತ ಕ್ಷೀಣವೇ,'' ಎಂದು ಪ್ರಶ್ನಿಸಿದರು.

"ನಮ್ಮ ದುಃಖದ ಬಗ್ಗೆ ಯಾರು ಆಲಿಸುತ್ತಾರೆ. ನೀವು ನಮ್ಮ ಪ್ರಧಾನಿ. ನೀವು ನನ್ನ ಬೇಡಿಕೆಯನ್ನು ಆಲಿಸಬೇಕು. ವಿದೇಶಿ ನಾಯಕರನ್ನು ನೀವು ಸಂತೋಷಪಡಿಸಬೇಕಿದೆ,'' ಎಂದರು. "20 ಕೋಟಿ ಮುಸ್ಲಿಮರ ಭಾವನೆಗಳಿಗೆ ಘಾಸಿಗೊಳಿಸಲಾಯಿತು. ಈ ಬಗ್ಗೆ ಕಾಳಜಿ ತೋರುವ ಬದಲು ಹೊರ ದೇಶಗಳ ಬಗ್ಗೆ ಮೋದಿ ಅವರು ಹೆಚ್ಚು ಹೆದರುತ್ತಾರೆ,'' ಎಂದು ದೂರಿದರು.
"ನೂಪರ್ ಶರ್ಮಾ ಅವರ ಅಮಾನತು ಕ್ರಮ ಬಿಜೆಪಿಯ ಒಂದು ನಾಟಕ. ನೂಪರ್ ಶರ್ಮಾ ಅವರನ್ನು ಪಕ್ಷದಿಂದ ಅಮಾನತು ಮಾಡಿದರೆ ಸಾಲದು. ಅವರನ್ನು ಬಂಧಿಸಬೇಕು,'' ಎಂದು ಓವೈಸಿ ಒತ್ತಾಯಿಸಿದರು.

ಮುಸ್ಲಿಂ ಸಮುದಾಯದಿಂದ ತೀವ್ರ ಖಂಡನೆ; ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ರಾಷ್ಟ್ರೀಯ ವಕ್ತಾರರಾದ ನೂಪುರ್ ಶರ್ಮಾ ಹಾಗೂ ದೆಹಲಿ ಬಿಜೆಪಿಯ ಮಾಧ್ಯಮ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ)ವು ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಿದೆ. ಜ್ಞಾನವಾಪಿ ಮಸೀದಿಯ ವಿವಾದಕ್ಕೆ ಸಂಬಂಧಿಸಿದಂತೆ ಕಳೆದ 10 ದಿನಗಳ ಹಿಂದೆ ಸುದ್ದಿ ವಾಹಿನಿಯ ಸಂವಾದ ಒಂದರಲ್ಲಿ ಪ್ರವಾದಿ ಮಹಮದ್ ಅವರ ಬಗ್ಗೆ ನೂಪುರ್ ಶರ್ಮಾ ಅವಹೇಳನಕಾರಿಯಾಗಿ ಮಾತನಾಡಿದ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದಿಂದ ತೀವ್ರ ಖಂಡನೆ ವ್ಯಕ್ತವಾಗಿತ್ತು. ಮುಖ್ಯವಾಗಿ ಅರಬ್ ರಾಷ್ಟ್ರಗಳು ಇವರ ಹೇಳಿಕೆಯನ್ನು ಬಲವಾಗಿ ಖಂಡಿಸಿತು.

ಹೇಳಿಕೆ ಕುರಿತು ನೂಪೂರ್ ಶರ್ಮಾ ಕ್ಷಮೆಯಾಚನೆ; ಈ ಘಟನೆಯ ನಂತರ ಉತ್ತರ ಪ್ರದೇಶದ ಕಾನ್ಪುರದಲ್ಲಿ ಗಲಭೆ ನಡೆದಿತ್ತು. ಇನ್ನೊಂದೆಡೆ ನವೀನ್ ಕುಮಾರ್ ಜಿಂದಾಲ್ ಅವರ ಟ್ವೀಟ್ ಗಳು ವಿವಾದದ ಕಿಡಿ ಎಬ್ಬಿಸಿತ್ತು. ಸದ್ಯ ಅವರು ವಿವಾದಿತ ಟ್ವೀಟ್ ಗಳನ್ನು ಅಳಿಸಿ ಹಾಕಿದ್ದಾರೆ. ಇದನ್ನು ಖಂಡಿಸಿ ಅರಬ್ ರಾಷ್ಟ್ರಗಳಲ್ಲಿ ಮೇಡ್ ಇನ್ ಇಂಡಿಯಾ ಸರಕುಗಳನ್ನು ನಿಷೇಧಿಸುವ ಕುರಿತು ಟ್ಟಿಟ್ಟರ್ ಅಭಿಯಾನ ನಡೆಯುತ್ತಿದೆ.
ಬಿಜೆಪಿಯಿಂದ ಅಮಾನತುಗೊಂಡ ನಂತರ ನೂಪೂರ್ ಶರ್ಮಾ ತಮ್ಮ ಹೇಳಿಕೆ ಕುರಿತು ಕ್ಷಮೆಯಾಚಿಸಿದ್ದಾರೆ. ಅಲ್ಲದೇ ತಮ್ಮ ಹೇಳಿಕೆಗಳನ್ನು ಹಿಂಪಡೆದಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ. ಅವಹೇಳನಕಾರಿ ಹೇಳಿಕೆ ಸಂಬಂಧ ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ನೂಪೂರ್ ಶರ್ಮಾ ವಿರುದ್ಧ ಹಲವು ಎಫ್ಐಆರ್ ಗಳು ದಾಖಲಾಗಿವೆ. ಇನ್ನೊಂದೆಡೆ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಅವರ ಹೇಳಿಕೆಗಳಿಂದ ಬಿಜೆಪಿ ಅಂತರ ಕಾಯ್ದುಕೊಂಡಿದೆ.
Recommended Video
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications