ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂತೆಂದು ಹೆದರಬೇಡಿ: ಓವೈಸಿ ಅಭಯ
ಹೈದರಾಬಾದ್, ಜೂನ್ 01: "ಬಿಜೆಪಿ ಅಧಿಕಾರಕ್ಕೆ ಬಂತೆಮದು ಹೆದರಬೇಡಿ. ಭಾರತೀಯ ಸಂವಿಧಾನ ಎಲ್ಲ ಮತೀಯರಿಗೂ ಸಮಾನ ಸ್ವಾತಂತ್ರ್ಯ ನೀಡಿದೆ" ಎಂದು ಎಐಎಂಐಎಂ ಮುಖಂಡ, ಹೈದರಾಬಾದ್ ಸಂಸದ ಅಸಾದುದ್ದಿನ್ ಓವೈಸಿ ಮುಸ್ಲಿಮರಿಗೆ ಅಭಯ ನೀಡಿದ್ದಾರೆ.
"ಮೋದಿ ದೇವಾಲಯಕ್ಕೆ ಹೋಗುವುದಾದರೆ ನಾವು ಮಸೀದಿಗೆ ಹೋಗಬಹುದು. ಮೋದಿ ಗುಹೆಯಲ್ಲಿ ಕೂರುವುದಾದರೆ ನಾವೂ ಮಸೀದಿಯಲ್ಲಿ ಕೂತು ಪ್ರಾರ್ಥಿಸಬಹುದು. ಮುನ್ನೂರಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲುವುದು ದೊಡ್ಡ ಸಾಧನೆಯೇನಲ್ಲ. ಭಾರತದಲ್ಲಿರುವುದು ಜೀವಂತ ಸಂವಿಧಾನ. ಮುನ್ನೂರು ಸೀಟುಗಳಿಂದ ಸಂವಿಧಾನ ನೀಡಿದ ಹಕ್ಕನ್ನು ಕಸಿದುಕೊಳ್ಳುವುದಕ್ಕೆ ಸಾಧ್ಯವಿಲ್ಲ" ಎಂದು ಅವರು ಹೇಳಿದ್ದಾರೆ.
"ಉತ್ತರ ಪ್ರದೇಶದಲ್ಲೂ ಬಿಜೆಪಿ ಗೆದ್ದಿದೆ. ಜನರು ಅಲ್ಲಿ ಏನಾಗಿದೆ ಎಬುದನ್ನು ಅರ್ಥಮಾಡಿಕೊಳ್ಳಬೇಕು. ಮುನ್ನೂರು ಸೀಟು ಗೆದ್ದು ಭಾರತವನ್ನೇ ಆಳಬಹುದು ಎಂದು ಬಿಜೆಪಿ ಭಾವಿಸಿದ್ದರೆ ಅದು ತಪ್ಪು. ನಾನು ನಿಮಗೆ ಭಾಷೆ ಕೊಡುತ್ತೇನೆ, ಅಸಾದುದ್ದಿನ್ ಓವೈಸಿ ಭಾರತಕ್ಕಾಗಿ ಹೋರಾಡುತ್ತಾರೆ! ಎಲ್ಲ ದಲಿತರೂ ಒಂದಾಗಬೇಕೆಂದು ನಾನು ಈ ಮೂಲಕ ಕೋರುತ್ತೇನೆ" ಎಂದು ಅವರು ಹೇಳಿದರು.

ಇನ್ನೂರೈವತ್ತಕ್ಕೂ ಹೆಚ್ಚು ಜನರ ಪ್ರಾಣ ತೆಗೆದ ಶ್ರೀಲಂಕಾದ ನಡೆದ ಬಾಂಬ್ ದಾಳಿಗೆ ಓರ್ವ ಮುಸ್ಲಿಮನೇ ಕಾರಣ ಎಂಬುದು ತಿಳಿಯಿತು. ಆದರೆ ಅವರಿಗೆ ಯಾರು ಇಸ್ಲಾಂ ಬಗ್ಗೆ ಪಾಠ ಮಾಡಿದವರು? ಅವರಿಗೆ ನಿಜವಾದ ಇಸ್ಲಾಂ ಗೊತ್ತಿಲ್ಲ. ಮುಸ್ಲಿಂ ಮತಕ್ಕೆ ಅವರೆಲ್ಲ ಕಂಟಕ" ಎಂದು ಓವೈಸಿ ಹೇಳಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications