ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂತೆಂದು ಹೆದರಬೇಡಿ: ಓವೈಸಿ ಅಭಯ
ಹೈದರಾಬಾದ್, ಜೂನ್ 01: "ಬಿಜೆಪಿ ಅಧಿಕಾರಕ್ಕೆ ಬಂತೆಮದು ಹೆದರಬೇಡಿ. ಭಾರತೀಯ ಸಂವಿಧಾನ ಎಲ್ಲ ಮತೀಯರಿಗೂ ಸಮಾನ ಸ್ವಾತಂತ್ರ್ಯ ನೀಡಿದೆ" ಎಂದು ಎಐಎಂಐಎಂ ಮುಖಂಡ, ಹೈದರಾಬಾದ್ ಸಂಸದ ಅಸಾದುದ್ದಿನ್ ಓವೈಸಿ ಮುಸ್ಲಿಮರಿಗೆ ಅಭಯ ನೀಡಿದ್ದಾರೆ.
"ಮೋದಿ ದೇವಾಲಯಕ್ಕೆ ಹೋಗುವುದಾದರೆ ನಾವು ಮಸೀದಿಗೆ ಹೋಗಬಹುದು. ಮೋದಿ ಗುಹೆಯಲ್ಲಿ ಕೂರುವುದಾದರೆ ನಾವೂ ಮಸೀದಿಯಲ್ಲಿ ಕೂತು ಪ್ರಾರ್ಥಿಸಬಹುದು. ಮುನ್ನೂರಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲುವುದು ದೊಡ್ಡ ಸಾಧನೆಯೇನಲ್ಲ. ಭಾರತದಲ್ಲಿರುವುದು ಜೀವಂತ ಸಂವಿಧಾನ. ಮುನ್ನೂರು ಸೀಟುಗಳಿಂದ ಸಂವಿಧಾನ ನೀಡಿದ ಹಕ್ಕನ್ನು ಕಸಿದುಕೊಳ್ಳುವುದಕ್ಕೆ ಸಾಧ್ಯವಿಲ್ಲ" ಎಂದು ಅವರು ಹೇಳಿದ್ದಾರೆ.
"ಉತ್ತರ ಪ್ರದೇಶದಲ್ಲೂ ಬಿಜೆಪಿ ಗೆದ್ದಿದೆ. ಜನರು ಅಲ್ಲಿ ಏನಾಗಿದೆ ಎಬುದನ್ನು ಅರ್ಥಮಾಡಿಕೊಳ್ಳಬೇಕು. ಮುನ್ನೂರು ಸೀಟು ಗೆದ್ದು ಭಾರತವನ್ನೇ ಆಳಬಹುದು ಎಂದು ಬಿಜೆಪಿ ಭಾವಿಸಿದ್ದರೆ ಅದು ತಪ್ಪು. ನಾನು ನಿಮಗೆ ಭಾಷೆ ಕೊಡುತ್ತೇನೆ, ಅಸಾದುದ್ದಿನ್ ಓವೈಸಿ ಭಾರತಕ್ಕಾಗಿ ಹೋರಾಡುತ್ತಾರೆ! ಎಲ್ಲ ದಲಿತರೂ ಒಂದಾಗಬೇಕೆಂದು ನಾನು ಈ ಮೂಲಕ ಕೋರುತ್ತೇನೆ" ಎಂದು ಅವರು ಹೇಳಿದರು.

ಇನ್ನೂರೈವತ್ತಕ್ಕೂ ಹೆಚ್ಚು ಜನರ ಪ್ರಾಣ ತೆಗೆದ ಶ್ರೀಲಂಕಾದ ನಡೆದ ಬಾಂಬ್ ದಾಳಿಗೆ ಓರ್ವ ಮುಸ್ಲಿಮನೇ ಕಾರಣ ಎಂಬುದು ತಿಳಿಯಿತು. ಆದರೆ ಅವರಿಗೆ ಯಾರು ಇಸ್ಲಾಂ ಬಗ್ಗೆ ಪಾಠ ಮಾಡಿದವರು? ಅವರಿಗೆ ನಿಜವಾದ ಇಸ್ಲಾಂ ಗೊತ್ತಿಲ್ಲ. ಮುಸ್ಲಿಂ ಮತಕ್ಕೆ ಅವರೆಲ್ಲ ಕಂಟಕ" ಎಂದು ಓವೈಸಿ ಹೇಳಿದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications