ಬಾಬ್ರಿ ಕೇಸ್ ನಂಬಿಕೆ ಮೇಲೆ ನಿರ್ಧರಿಸಲಾಗದು : ಓವೈಸಿ
ಹೈದರಾಬಾದ್, ಡಿಸೆಂಬರ್ 05: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕುರಿತಂತೆ ಎಂಐಎಂ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಅವರು ವಿಶ್ವ ಹಿಂದೂ ಪರಿಷತ್ (ವಿಎಚ್ ಪಿ) ನೀಡಿರುವ ಹೇಳಿಕೆಯನ್ನು ಖಂಡಿಸಿದ್ದಾರೆ.
ಕೇವಲ ನಂಬಿಕೆ ಆಧಾರದ ಮೇಲೆ ಈ ಪ್ರಕರಣ ಇತ್ಯರ್ಥ ಸಾಧ್ಯವಿಲ್ಲ. ಕೋರ್ಟಿನಲ್ಲಿ ಸಾಕ್ಷಿ ಆಧಾರಗಳೇ ಮುಖ್ಯ ಎಂದಿದ್ದಾರೆ. ಈ ಮೂಲಕ ಸಂಘ ಪರಿವಾರಗಳ ಹೇಳಿಕೆಗೆ ಟಾಂಗ್ ನೀಡಿದ್ದಾರೆ.

ಅಕ್ಟೋಬರ್ 18, 2018ರಂದು ಅಯೋಧ್ಯೆಯ ವಿವಾದಿತ ಸ್ಥಳದಲ್ಲೇ ರಾಮಮಂದಿರ ನಿರ್ಮಾಣವಾಗಲಿದೆ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡರು ನೀಡಿರುವ ಹೇಳಿಕೆಯನ್ನು ಓವೈಸಿ ಖಂಡಿಸಿದರು.
ಸುಪ್ರೀಂಕೋರ್ಟಿನಲ್ಲಿ ವಿವಾದದ ವಿಚಾರಣೆ ಇನ್ನೂ ಜಾರಿಯಲ್ಲಿರುವಾಗ ಈ ರೀತಿ ಪ್ರಚೋದನಕಾರಿ ಹೇಳಿಕೆ ನೀಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಬಾಬ್ರಿ ಮಸೀದಿ ಧ್ವಂಸ ಪ್ರಕರಣ ನಡೆದು ಬುಧವಾರಕ್ಕೆ 25 ವರ್ಷವಾಗುತ್ತದೆ. ಮುಖ್ಯ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ಜಸ್ಟೀಸ್ ಅಶೋಕ್ ಭೂಷಣ್ ಹಾಗೂ ಅಬ್ದುಲ್ ನಜೀರ್ ಅವರಿರುವ ತ್ರಿಸದಸ್ಯ ಪೀಠವು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 08, 2018ಕ್ಕೆ ಮುಂದೂಡಿದ್ದಾರೆ. 2010ರಲ್ಲಿ ವಿವಾದದ ಸಂಬಂಧ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿರುವ 13 ಅರ್ಜಿಗಳ ವಿಚಾರಣೆ ನಡೆಯಬೇಕಿದೆ.
ಉತ್ತರಪ್ರದೇಶದ ಶಿಯಾ ಮುಸ್ಲಿಂ ಸಂಘಟನೆಯೊಂದು ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಿಸಲು ನಮ್ಮ ಅಭ್ಯಂತರವೇನು ಇಲ್ಲ ಎಂದು ಕೋರ್ಟಿಗೆ ತಿಳಿಸಿದೆ. ಮುಂದಿನ ವಿಚಾರಣೆಯನ್ನು ಲೋಕಸಭೆ ಚುನಾವಣೆ 2019ಗೂ ಮುನ್ನ ನಡೆಸಬೇಕು ಎಂದು ಸುನ್ನಿ ಮುಸ್ಲಿಮ್ ಪಂಗಡದ ಪರ ವಕೀಲ ಕಪಿಲ್ ಸಿಬಲ್ ಮನವಿ ಮಾಡಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications