ಕರ್ನಾಟಕದಲ್ಲಿ ಮಾಡಿದ ನಾಟಕ ತೆಲಂಗಾಣದಲ್ಲಿ ನಡೆಯೊಲ್ಲ: ಬಿಜೆಪಿಗೆ ಕೆಟಿಆರ್ ಎಚ್ಚರಿಕೆ
ಹೈದರಾಬಾದ್, ಆಗಸ್ಟ್ 20: ಕರ್ನಾಟಕದಲ್ಲಿ ಮಾಡಿದಂತೆ ತೆಲಂಗಾಣದಲ್ಲಿಯೂ ಬಿಜೆಪಿ ನಾಟಕಗಳನ್ನು ಮಾಡಲು ಸಾಧ್ಯವಿಲ್ಲ. ಏಕೆಂದರೆ ರಾಜ್ಯದ ಜನರು ಒಡೆದು ಆಳುವ ರಾಜಕೀಯವನ್ನು ಬೆಂಬಲಿಸುವುದಿಲ್ಲ ಎಂದು ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್ಎಸ್) ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ಸೋಮವಾರ ಹೇಳಿದ್ದಾರೆ.
ಕೆಟಿಆರ್ ಎಂದೇ ಹೆಸರಾಗಿರುವ ರಾಮರಾವ್, ತೆಲಂಗಾಣದಲ್ಲಿ ಅಧಿಕಾರಕ್ಕೆ ಬರುತ್ತೇವೆಂದು ಬಿಜೆಪಿ ನಾಯಕರು ಕನಸು ಕಾಣುತ್ತಿದ್ದಾರೆ ಎಂದು ಟೀಕಿಸಿದರು.
'ಎಲ್ಲ ಧರ್ಮಗಳ ಜನರು ಸಹಬಾಳ್ವೆಯಿಂದ ಶಾಂತಿಯುತವಾಗಿ ಇರುವುದನ್ನು ಬಿಜೆಪಿ ನಾಯಕರು ಬಯಸುವುದಿಲ್ಲ. ಅವರು ಸಮುದಾಯಗಳನ್ನು ಒಡೆದು ಅವರನ್ನು ಆಳುವುದಕ್ಕೆ ಬಯಸುತ್ತಿದ್ದಾರೆ. ಇಂತಹ ತಂತ್ರಗಳು ತೆಲಂಗಾಣದಲ್ಲಿ ನಡೆಯುವುದಿಲ್ಲ' ಎಂದು ಎಚ್ಚರಿಕೆ ನೀಡಿದರು.

ತೆಲಂಗಾಣದ ಇತಿಹಾಸ ಮರುಸೃಷ್ಟಿ
ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಮಗನಾಗಿರುವ ಕೆಟಿಆರ್, ಹೈದರಾಬಾದ್ನಲ್ಲಿ ಆಗಸ್ಟ್ 18ರಂದು ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಅವರು ಟಿಆರ್ಎಸ್ ವಿರುದ್ಧ ಮಾಡಿದ ಆರೋಪಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು. ಭಾನುವಾರ ಮಾತನಾಡಿದ್ದ ನಡ್ಡಾ, 'ಬಿಜೆಪಿಯು ತೆಲಂಗಾಣದ ಇತಿಹಾಸವನ್ನು ಮರು ರಚಿಸುತ್ತದೆ' ಎಂದು ಹೇಳಿದ್ದರು. 2024ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಿಡಿತ ಸಾಧಿಸಲಿದೆ ಎಂಬ ಭರವಸೆ ವ್ಯಕ್ತಪಡಿಸಿದ್ದರು.

ನಡ್ಡಾ: 'ಅಬದ್ದಾಲ ಅಡ್ಡಾ'
ನಡ್ಡಾ ಅವನ್ನು 'ಅಬದ್ದಾಲ ಅಡ್ಡಾ' (ಸುಳ್ಳುಗಳ ಕಂತೆ) ಎಂದು ಲೇವಡಿ ಮಾಡಿದ ಕೆಟಿಆರ್, ರಾಜ್ಯದ ಪಕ್ಷದ ಮುಖಂಡರು ಸಿದ್ಧಪಡಿಸಿದ ಭಾಷಣವನ್ನಷ್ಟೇ ಜೆಪಿ ನಡ್ಡಾ ಓದಿದ್ದಾರೆ ಎಂದು ಟೀಕಿಸಿದರು.
'ಕಾಳೇಶ್ವರಂ ಯೋಜನೆಯ ಹಗರಣದ ಬಗ್ಗೆ ನಡ್ಡಾ ಮಾತನಾಡಿರುವುದು ಹಾಸ್ಯಾಸ್ಪದ. ಅವರು ದೆಹಲಿಗೆ ವಾಪಸ್ ಹೋಗಿ, ದಾಖಲೆಯ ಮೂರೇ ವರ್ಷದಲ್ಲಿ ಪೂರ್ಣಗೊಂಡ ಯೋಜನೆಯ ಕುರಿತು ಕೇಂದ್ರದ ಅನುದಾನಿತ ಸಂಸ್ಥೆಗಳು ಏಕೆ ಪ್ರಶಂಸೆ ವ್ಯಕ್ತಪಡಿಸುತ್ತಿವೆ ಎಂಬುದನ್ನು ತಿಳಿದುಕೊಳ್ಳಲಿ. ನೀತಿ ಆಯೋಗದ ಅಧಿಕಾರಿಗಳು ಈ ಯೋಜನೆಯನ್ನು ಏಕೆ ಹೊಗಳಿದ್ದಾರೆ ಎಂಬುದನ್ನು ಅರಿಯಲಿ. ಟಿಆರ್ಎಸ್ ಸರ್ಕಾರದ ಬಗ್ಗೆ ಈ ರೀತಿ ಹೀನ ಆರೋಪಗಳನ್ನು ಮಾಡುವುದಕ್ಕೆ ಅವರಿಗೆ ನಾಚಿಕೆಯಾಗುವುದಿಲ್ಲವೇ?' ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಕಥೆ ಏನಾಯಿತು?
ಕಾಳೇಶ್ವರಂ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂಬುದನ್ನು ಸಾಬೀತುಪಡಿಸುವವರೆಗೂ ಗಡ್ಡ ತೆಗೆಯುವುದಿಲ್ಲ ಎಂಬ ಕಾಂಗ್ರೆಸ್ ಮುಖಂಡರೊಬ್ಬರ ಶಪಥದ ಕುರಿತು ಪ್ರತಿಕ್ರಿಯೆ ನೀಡಿದ ರಾಮರಾವ್, 'ಈಗ ಅವರ ಕಥೆ ಏನಾಯಿತು? ಅವರ ಪಕ್ಷವು ಚುನಾವಣೆಯಲ್ಲಿ ಸೋತು ಸುಣ್ಣವಾಯಿತು ಮತ್ತು ಅವರು ಗಡ್ಡ ತೆಗೆಯುವುದನ್ನು ಮುಂದುವರಿಸಿದ್ದಾರೆ' ಎಂದು ವ್ಯಂಗ್ಯವಾಡಿದರು.

ನೂರು ಸೀಟು ಹೇಗೆ ಬರುತ್ತಿತ್ತು?
'ಕೆಸಿಆರ್ ಸರ್ಕಾರದ ದುರಾಡಳಿತದ ಬಗ್ಗೆ ಜನರು ಅಸಮಾಧಾನ ಹೊಂದಿದ್ದಾರೆ ಎಂದು ನಡ್ಡಾ ಆರೋಪಿಸಿದ್ದಾರೆ. ಹಾಗೆ ಆಗಿದ್ದರೆ ಟಿಆರ್ಎಸ್ ವಿಧಾನಸಭೆ ಚುನಾವಣೆಯಲ್ಲಿ 119 ಸೀಟುಗಳ ಪೈಕಿ ಸುಮಾರು 100 ಸೀಟುಗಳಲ್ಲಿ ಗೆಲ್ಲಲು ಹೇಗೆ ಸಾಧ್ಯವಾಗುತ್ತಿತ್ತು?' ಎಂದು ಪ್ರಶ್ನಿಸಿದರು.
ಟಿಆರ್ಎಸ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಬಿಜೆಪಿ ನಾಯಕರು ಮೊದಲು ಅದನ್ನು ಸಾಬೀತುಪಡಿಸಲಿ. ಇಲ್ಲದೆ ಹೋದರೆ ಜನರು ಅವರಿಗೆ ಕಠಿಣ ಪಾಠ ಕಲಿಸಲಿದ್ದಾರೆ' ಎಂದು ಎಚ್ಚರಿಕೆ ನೀಡಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications