Breaking: ಮಧ್ಯವರ್ತಿ ಆರೋಪ: ಬಿಜೆಪಿ ವಿರುದ್ಧ ಕೇಸ್ ದಾಖಲಿಸಿದ ಕೆಸಿಆರ್ ಪುತ್ರಿ
ಹೈದರಾಬಾದ್, ಆಗಸ್ಟ್ 22: ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರ ಮತ್ತು ಲಿಕ್ಕರ್ ಮಾಫಿಯಾದ ನಡುವೆ ಮಧ್ಯವರ್ತಿ ಎಂದು ಆರೋಪಿಸಿದ ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ ಸೋಮವಾರ ಹೇಳಿದ್ದಾರೆ.
ಎಂಎಲ್ಸಿ ಕೆ ಕವಿತಾ ಅವರನ್ನು ಮಧ್ಯವರ್ತಿ ಎಂದು ಆರೋಪಿಸಿದ್ದ ಬಿಜೆಪಿ ನಾಯಕರಾದ ಸಂಸದ ಪರ್ವೇಶ್ ವರ್ಮಾ ಮತ್ತು ಮಾಜಿ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ತಿಳಿಸಿದ್ದಾರೆ.
"ನನ್ನ ಮೇಲೆ ಮಾಡಿರುವ ಆರೋಪಗಳು ಸಂಪೂರ್ಣ ನಿರಾಧಾರ. ದೆಹಲಿ ಅಬಕಾರಿ ಹಗರಣದಲ್ಲಿ ಹೇಳಿರುವ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಅವರ ಕೈಯಲ್ಲಿ ಎಲ್ಲಾ ಏಜೆನ್ಸಿಗಳಿವೆ, ಅವರು ಏನು ತನಿಖೆ ಬೇಕಾದರೂ ಮಾಡಬಹುದು. ನಾವು ಸಂಪೂರ್ಣವಾಗಿ ಸಹಕರಿಸುತ್ತೇವೆ" ಕೆ ಕವಿತಾ ಹೇಳಿದ್ದಾರೆ.

ಕೇಂದ್ರ ಸರಕಾರದ ನೀತಿಗಳನ್ನು ಟೀಕಿಸುವಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಧ್ವನಿಯಾಗಿರುವುದರಿಂದ ಬಿಜೆಪಿ ನನ್ನ ಮೇಲೆ ಈ ಆರೋಪಗಳನ್ನು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
"ಈ ರೀತಿಯ ಆರೋಪಗಳಿಗೆ ನಾವು ಭಯಪಡುವುದಿಲ್ಲ" ಎಂದಿರುವ ಅವರು, ಹೋರಾಟಗಾರರನ್ನು ಒಳಗೊಂಡಿರುವ ಕುಟುಂಬದಿಂದ ಬಂದ ತಾವು ಹೋರಾಡುವುದಾಗಿ ಹೇಳಿದ್ದಾರೆ.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಸಂಸದ ಪರ್ವೇಶ್ ವರ್ಮಾ ಮತ್ತು ಮಾಜಿ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ, ಲಿಕ್ಕರ್ ಮಾಫಿಯಾ ಮತ್ತು ಎಎಪಿ ಸರ್ಕಾರದ ನಡುವೆ ಕವಿತಾ ಮಧ್ಯವರ್ತಿಯಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯ ಪಂಚತಾರಾ ಹೋಟೆಲ್ನಲ್ಲಿ ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿಯ ರಚನೆಯ ಸಭೆಗಳಲ್ಲಿ ಕೆಸಿಆರ್ ಅವರ ಕುಟುಂಬ ಸದಸ್ಯರು ಭಾಗವಹಿಸಿದ್ದರು ಎಂದು ಅವರು ಆರೋಪಿಸಿದ್ದರು.
"ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರ ಕುಟುಂಬ ಸದಸ್ಯರು ಹೋಟೆಲ್ನಲ್ಲಿ ದೆಹಲಿಯ ಅಬಕಾರಿ ನೀತಿಯನ್ನು ರೂಪಿಸುವ ಸಭೆಗಳಲ್ಲಿ ಭಾಗವಹಿಸಿದ್ದರು. ಕೆಸಿಆರ್ ಅವರ ಕುಟುಂಬ ಸದಸ್ಯರು ಪಂಜಾಬ್ನಲ್ಲಿ ಅದೇ ನೀತಿಯನ್ನು ಜಾರಿಗೆ ತಂದರು. ಅವರು ಮನೀಶ್ ಸಿಸೋಡಿಯಾ ಮತ್ತು ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ದೆಹಲಿಗೆ ಅಬಕಾರಿ ಯೋಜನೆಯನ್ನು ಸಿದ್ಧಪಡಿಸಿದರು" ಎಂದು ಪರ್ವೇಶ್ ವರ್ಮಾ ಹೇಳಿದ್ದರು.
ದೆಹಲಿ ಸರ್ಕಾರದ ಅಬಕಾರಿ ನೀತಿ 2021-22ರ ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ಐಆರ್ನಲ್ಲಿ ಸಿಬಿಐ ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ ಅವರನ್ನು ಆರೋಪಿ ಎಂದು ಹೆಸರಿಸಿದೆ. ಕಳೆದ ಶುಕ್ರವಾರ ಸಿಸೋಡಿಯಾ ಅವರ ಮನೆ ಮತ್ತು ಇತರ 30 ಸ್ಥಳಗಳ ಮೇಲೆ ಸಿಬಿಐ ದಾಳಿ ನಡೆಸಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications