ಪಂಜು ಹಿಡಿದು ಕೊರೊನಾ ಓಡಿಸಲು ಬಂದ ಬಿಜೆಪಿ ಶಾಸಕ
ಹೈದರಾಬಾದ್, ಏಪ್ರಿಲ್ 06: ಕೊರೊನಾ ವೈರಸ್ ಓಡಿಸಲು ಹೈದರಾಬಾದ್ನ ಶಾಸಕರೊಬ್ಬರು ಪಂಜು ಹಿಡಿದುಕೊಂಡು ಬಂದಿದ್ದರು. ಎಂಎಲ್ಎ ಟೈಗರ್ ರಾಜ ಸಿಂಗ್ ತಮ್ಮ ವಿಚಿತ್ರ ಪ್ರತಿಭಟನೆ ಮೂಲಕ ಇದೀಗ ಸುದ್ದಿ ಮಾಡಿಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 5 ರಂದು ರಾತ್ರಿ 9 ಗಂಟೆಗೆ ಮನೆಯ ಲೈಟ್ಗಳನ್ನು ಆಫ್ ಮಾಡಿ, ದೀಪ, ಮುಂಬತ್ತಿ, ಟಾರ್ಚ್ ಹಾಗೂ ಮೊಬೈಲ್ ಫ್ಲಾಶ್ ಲೈಟ್ ಮೂಲಕ ಬೆಳಕನ್ನು ಚೆಲ್ಲುವಂತೆ ದೇಶದ ಜನರಿಗೆ ಕರೆ ನೀಡಿದ್ದರು. ಇದಕ್ಕೆ ದೊಡ್ಡ ಮಟ್ಟದ ಬೆಂಬಲ ಸಿಕ್ಕಿದೆ. ಆದರೆ, ಅಲ್ಲಲ್ಲಿ ಕೆಲವು ಎಡವಟ್ಟುಗಳು ಆಗಿವೆ.
ತೆಲಂಗಾಣದ ಗೋಷಮಹಲ್ನಲ್ಲಿ ಅಲ್ಲಿನ ಬಿಜೆಪಿ ಶಾಸಕರೇ ದೀಪ ಹಚ್ಚುವ ಬದಲು ಪಂಜು ಹಿಡಿದು ಅವಾಂತರ ಮಾಡಿಕೊಂಡಿದ್ದಾರೆ. ತಮ್ಮ ಕಾರ್ಯಕರ್ತರ ಜೊತೆಗೆ ಪಂಚು ಹಿಡಿದು ರಸ್ತೆಯಲ್ಲಿ ಮೆರವಣಿಗೆ ಮಾಡಿದ್ದಾರೆ. ''ಗೋ ಬ್ಯಾಕ್ ಗೋ ಬ್ಯಾಕ್ ಚೀನಾ ವೈರಸ್ ಗೋ ಬ್ಯಾಕ್..'' ಎಂದು ಹೇಳಿ ಕೊರೊನಾ ವಿರುದ್ಧವೇ ಪ್ರತಿಭಟನೆ ಮಾಡಿದ್ದಾರೆ.

ಎಂಎಲ್ಎ ಟೈಗರ್ ರಾಜ ಸಿಂಗ್ರ ಈ ಕೆಲಸ ನಗೆಗೀಡು ಮಾಡಿದೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗುತ್ತಿದೆ. ಬಾಲಿವುಡ್ ನಟಿ ತಾಪ್ಸಿ ಪನ್ನು ಸಹ ಈ ವಿಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ರೀ ಟ್ವೀಟ್ ಮಾಡಿದ್ದಾರೆ.
ಪಂಜು ಹಿಡಿದು ಮೆರವಣಿಗೆ ಮಾಡುವುದರ ಜೊತೆಗೆ ಸಾಮಾಜಿಕ ಅಂತರ ಸಹ ಕಾಯ್ದುಕೊಂಡಿಲ್ಲ. ಸಾಕಷ್ಟು ಜನರ ಅಕ್ಕ ಪಕ್ಕ ನಿಂತಿದ್ದಾರೆ. ಹೀಗಾಗಿ, ಟೈಗರ್ ರಾಜ ಸಿಂಗ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
#bjp #hyderabad mla exhorting #chinavirus #corona to go back during #9Baje9Minutes pic.twitter.com/OdI0nc0wOq
— T S Sudhir (@Iamtssudhir) April 5, 2020
ಈ ಹಿಂದೆ 'ಗೊ ಬ್ಯಾಕ್ ಕೊರೊನಾ' ಎಂದು ಸಚಿವ ರಾಮದಾಸ್ ಅತ್ವಾಲೆ ಇದೇ ರೀತಿ ಪ್ರತಿಭಟನೆ ಮಾಡಿದ್ದು, ಅದು ಹಾಸ್ಯವಾಗಿ ಜನರಿಗೆ ಕಂಡಿತು.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications