ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣೆಗೆ ಮುನ್ನ ಯುದ್ದ ನಡೆಯುತ್ತೆ ಎಂದು 2ವರ್ಷದ ಹಿಂದೆ ತಿಳಿದಿತ್ತು

|
Google Oneindia Kannada News

ಹೈದರಬಾದ್, ಮಾರ್ಚ್ 1: ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಆಂಧ್ರ ಪ್ರದೇಶದಲ್ಲಿ ಸಕ್ರಿಯವಾಗಿರುವ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.

ಗುರುವಾರ (ಫೆ 28) ಕಡಪಾದಲ್ಲಿ ಭಾರೀ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಚಿರಂಜೀವಿಯ ಸಹೋದರರೂ ಆಗಿರುವ ಪವನ್ ಕಲ್ಯಾಣ್, ಲೋಕಸಭಾ ಚುನಾವಣೆಯ ವೇಳೆ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ದ ನಡೆಯುತ್ತದೆ ಎಂದು ಎರಡು ವರ್ಷದ ಹಿಂದೆಯೇ ರಾಜಕೀಯ ತಜ್ಞರು ಹೇಳಿದ್ದರು ಎನ್ನುವ ಹೇಳಿಕೆಯನ್ನು ನೀಡಿದ್ದಾರೆ.

ಪಾಕ್ ಪ್ರಧಾನಿ ಪಠಿಸಿದ ಶಾಂತಿ ಮಂತ್ರ: ಯಾವ ಆಂಗಲ್ ನಿಂದ ನಗೋಣ!ಪಾಕ್ ಪ್ರಧಾನಿ ಪಠಿಸಿದ ಶಾಂತಿ ಮಂತ್ರ: ಯಾವ ಆಂಗಲ್ ನಿಂದ ನಗೋಣ!

ದೇಶಾಭಿಮಾನ ಯಾರ ಸ್ವತ್ತೂ ಅಲ್ಲ, ನಮಗೂ ಹತ್ತು ಪಟ್ಟು ಹೆಚ್ಚು ಅಭಿಮಾನ ದೇಶದ ಮೇಲಿದೆ ಎಂದು ವಾಗ್ದಾಳಿ ನಡೆಸಿರುವ ಪವನ್ ಕಲ್ಯಾಣ್, ನಮ್ಮ ದೇಶ ಯಾವ ಪರಿಸ್ಥಿತಿಯಲ್ಲಿ ಇದೆ ಎನ್ನುವ ಬಗ್ಗೆ ನೀವೇ ಅರ್ಥ ಮಾಡಿಕೊಳ್ಳಿ ಎಂದು ವಿಷಾದ ವ್ಯಕ್ತ ಪಡಿಸಿದ್ದಾರೆ.

BJP told me there will be war before Lok Sabha polls, said Jana Sena chief Pawan Kalyan: Report

ತಮ್ಮ ರಾಜಕೀಯ ಜೀವನದ ಆರಂಭದಲ್ಲಿ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದ ಪವನ್ ಕಲ್ಯಾಣ್ ಬದಲಾದ ಸನ್ನಿವೇಶದಲ್ಲಿ ಬಿಜೆಪಿಯಿಂದ ದೂರವಾಗಿದ್ದಾರೆ. ಯುದ್ಧ ಎನ್ನುವುದು ಯಾವುದೇ ಸಮಸ್ಯೆಗೆ ಪರಿಹಾರವಲ್ಲ, ಅಲ್ಲದೇ ಇದರಿಂದ ಎರಡೂ ದೇಶಗಳಿಗೂ ಅಪಾರ ಹಾನಿ ಉಂಟಾಗುತ್ತದೆ ಎಂದು ಪವನ್ ಕಲ್ಯಾಣ್ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ಆಂಧ್ರದಲ್ಲಿ ಯಾವುದೇ ರೀತಿಯ ಕೋಮುವಾದ ಬಿತ್ತುವ ಕೆಲಸವನ್ನು ಯಾರೇ ಮಾಡಲಿ, ನನ್ನ ಪಕ್ಷದ ಕಾರ್ಯಕರ್ತರು ಅದನ್ನು ವಿಫಲಗೊಳಿಸುತ್ತಾರೆ ಎನ್ನುವ ಎಚ್ಚರಿಕೆಯನ್ನು ಕಡಪಾ ರ‍್ಯಾಲಿಯಲ್ಲಿ ಪವನ್ ಕಲ್ಯಾಣ್ ನೀಡಿದ್ದಾರೆ.

ಹೊಡೆತ ತಿಂದ ನಂತರ ಮಾತುಕತೆಯ ಭಿಕ್ಷೆ ಬೇಡುತ್ತಿರುವ ಇಮ್ರಾನ್ ಖಾನ್ಹೊಡೆತ ತಿಂದ ನಂತರ ಮಾತುಕತೆಯ ಭಿಕ್ಷೆ ಬೇಡುತ್ತಿರುವ ಇಮ್ರಾನ್ ಖಾನ್

ಭಾರತದಲ್ಲಿರುವ ಮುಸ್ಲಿಮರು ತಮ್ಮ ದೇಶಭಕ್ತಿಯನ್ನು ಯಾರಿಗೂ ಸಾಬೀತು ಪಡಿಸುವ ಅವಶ್ಯಕತೆ ಇಲ್ಲ, ಎಲ್ಲರಂತೆ ಅವರೂ ಕೂಡಾ ಭಾರತೀಯರು ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ.

English summary
Tollywood actor-turned-politician Pawan Kalyan here on Thursday claimed, the BJP told him two years ago that there will be war before the Lok Sabha elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X