ಬಿಜೆಪಿ ಸಿನಿಮಾಗಳನ್ನು ಅಜೆಂಡಾ ಮಾಡಿಕೊಂಡು ಯುವಕರ ದಾರಿ ತಪ್ಪಿಸುತ್ತಿದೆ: ಕೆಟಿಆರ್
ಹೈದರಾಬಾದ್, ಏಪ್ರಿಲ್ 26: ದೇಶದಲ್ಲಿ ಕೋಮುವಾದ ಹಾಗೂ ಗಲಭೆಗಳನ್ನು ಸೃಷ್ಟಿ ಮಾಡಲು ಯುವಕರನ್ನು ಗುರಿಯಾಗಿಸಿಕೊಳ್ಳಲಾಗಿದೆ ಹಾಗೂ ಕೋಮುವಾದವನ್ನು ಬೆರಸಲು ಬಿಜೆಪಿಯು ಸಿನಿಮಾಗಳನ್ನು ಸಾಧನಗಳನ್ನಾಗಿ ಬಳಸಿಕೊಳ್ಳುತ್ತಿದೆ ಎಂದು ತೆಲಂಗಾಣ ಸಚಿವ ಕೆಟಿ ರಾಮ್ರಾವ್ ಬಿಜೆಪಿಯ ವಿರುದ್ಧ ಆರೋಪಿಸಿದ್ದಾರೆ.
ಖಾಸಗಿ ಸುದ್ದಿ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಸಚಿವ ಕೆಟಿ ರಾಮ್ರಾವ್, ಬಿಜೆಪಿ ಪಕ್ಷ ದೇಶದ ಯುವಕರನ್ನು ಬಳಸಿಕೊಳ್ಳುತ್ತಿದೆ. ತನ್ನ ಕಾರ್ಯಸೂಚಿಯನ್ನು ಹೆಚ್ಚಿಸುವ ಮಾರ್ಗವಾಗಿ ಬಿಜೆಪಿಯು ಸಿನಿಮಾ ಸಾಧನಗಳನ್ನಾಗಿ ಬಳಸಿಕೊಂಡು ಯುವಕರಿಗೂ ತಪ್ಪು ದಾರಿ ತೋರಿಸುತ್ತಿದೆ. 2019ರಲ್ಲಿ ಬಾಲಿವುಡ್ ನಟ ವಿಕ್ಕಿ ಕೌಶಲ್ ಅಭಿನಯದ ಉರಿ ಮತ್ತು ವಿವೇಕ್ ಅಗ್ನಿಹೋತ್ರಿ ಅವರ ಇತ್ತೀಚಿನ ಕಾಶ್ಮೀರಿ ಫೈಲ್ಸ್ ಹಾಗೂ ಮುಂಬರುವ ಇಂತಹ ಚಿತ್ರಗಳನ್ನು ಸಾಧನಗಳನ್ನಾಗಿ ಮಾಡಿಕೊಂಡಿದೆ ಎಂದು ಆರೋಪಿಸಿದರು.

ಕಾಶ್ಮೀರ ಫೈಲ್ಸ್ ಈ ಚಲನಚಿತ್ರವನ್ನು ಬಿಜೆಪಿ ಸರ್ಕಾರ ಬೆಂಬಲ ನೀಡಿದೆ ಹಾಗೂ ಬಿಜೆಪಿ ನೇತೃತ್ವದ ಸರ್ಕಾರ ಇರುವ ರಾಜ್ಯಗಳಲ್ಲಿ ತೆರೆಗೆ ಮುಕ್ತಗೊಳಿಸಿದ್ದವು. ಆದರೆ, ಚಿತ್ರಮಂದಿರಗಳಲ್ಲಿ ಮುಸ್ಲಿಂಮರ ವಿರುದ್ಧ ದ್ವೇಷದ ಭಾಷಣಗಳು ಹಾಗೂ ವಿಡಿಯೋಗಳು ಹೊರಹೊಮ್ಮಿದ್ದವು. ಇಂತಹ ಸಂದರ್ಭದಲ್ಲಿ ಯುವಕರರನ್ನು ಬಳಸಿಕೊಂಡು ದ್ವೇಷದ ಭಾವನೆ ಬಿತ್ತಲಾಯಿತು ಎಂದರು.

ಇನ್ನು ಮುಂಬರುವ ಪ್ರಭಾಸ್ ಅಭಿನಯದ ಆದಿಪುರುಷ್ ಸಿನಿಮಾವನ್ನು ಕೂಡಾ ಬಿಜೆಪಿ ಅಜೆಂಡಾ ಮಾಡಿಕೊಂಡಿದೆ ಎಂಬ ಹೇಳಿಕೆ ನೀಡಿದ್ದ ಸಚಿವ ಕೆಟಿ ರಾಮ್ರಾವ್ ಅವರ ಖಾಸಗಿ ಮಾಧ್ಯಮದಲ್ಲಿ ಪ್ರಸಾರವಾದ ಈ ವಿಚಾರಗಳನ್ನು ಹೇಳಿಕೊಂಡಿರುವ ಸಚಿವರ ಸಂದರ್ಶನವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು ಇದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications