ಹೈದರಾಬಾದ್: ಭೇಟಿಗೂ ಮೊದಲೇ ಪ್ರಧಾನಿ ಮೋದಿಗೆ ಬೈ ಬೈ ಹೋರ್ಡಿಂಗ್
ಹೈದರಾಬಾದ್, ಜೂನ್ 30: ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಜುಲೈ 2 ಮತ್ತು 3 ರಂದು ನಡೆಯಲಿದ್ದು, ಸಿಕಂದರಾಬಾದ್ನಲ್ಲಿ ಪರೇಡ್ ಗ್ರೌಂಡ್ ಬಳಿ ಬೃಹತ್ ಹೋರ್ಡಿಂಗ್ ಅನ್ನು ಹಾಕಲಾಗಿದೆ.
ಹೋರ್ಡಿಂಗ್ನಲ್ಲಿ ಬೈ ಬೈ ಮೋದಿ (BYE BYE MODI) ಎಂಬ ಹ್ಯಾಶ್ಟ್ಯಾಗ್ಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಮತ್ತು "ಡೋಂಟ್ ಕಿಲ್ ಪೀಪಲ್ ಮೋದಿ" ಮತ್ತು "ಎನಫ್ ಮೋದಿ" ಎಂಬ ಬೃಹತ್ ಬರಹಗಳು ಇದ್ದವು. ಇದು ಹೊಸದಾಗಿ ಪ್ರಾರಂಭಿಸಲಾದ ಅಗ್ನಿಪಥ್ ಯೋಜನೆ, ಕೃಷಿ ಕಾನೂನುಗಳು, ನೋಟು ಅಮಾನ್ಯೀಕರಣ ಮತ್ತು ಎರಡನೇ ತರಂಗದಲ್ಲಿ ಕೋವಿಡ್-19 ಬಿಕ್ಕಟ್ಟನ್ನು ಕೇಂದ್ರ ಸರ್ಕಾರ ನಿಭಾಯಿಸಿದ ಬರೆಯಲಾಗಿತ್ತು.
ಜೂನ್ 28 ರಂದು ಅಪರಿಚಿತರು ಹಾಕಿದ್ದ ಹೋರ್ಡಿಂಗ್ ಅನ್ನು ಮರುದಿನ ತಕ್ಷಣವೇ ತೆಗೆದುಹಾಕಲಾಗಿದೆ. ಆದರೆ ಈ ಹೋರ್ಡಿಂಗ್ಗಳನ್ನು ಅನೇಕ ಜನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನಗರದಾದ್ಯಂತ ಇಂತಹ ಹೋರ್ಡಿಂಗ್ಗಳು ಮತ್ತು ಪೋಸ್ಟರ್ಗಳನ್ನು ಅಳವಡಿಸಿರುವುದು ಇದೇ ಮೊದಲೇನಲ್ಲ. ಈ ವರ್ಷದ ಫೆಬ್ರವರಿಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 5 ರಂದು ಸಮಾನತೆಯ ಪ್ರತಿಮೆಯನ್ನು ಅನಾವರಣಗೊಳಿಸಲು ಹೈದರಾಬಾದ್ನಲ್ಲಿದ್ದಾಗ, ಯುವಕರ ಗುಂಪೊಂದು ಹುಸೇನ್ ಸಾಗರ್ ಕೆರೆಯಲ್ಲಿ ಉದ್ಯೋಗ ಸೃಷ್ಟಿ, ತೆಲಂಗಾಣಕ್ಕೆ ಐಟಿಐಆರ್, ರೈಲ್ ಕೋಚ್ ಫ್ಯಾಕ್ಟರಿ, ಅರಿಶಿನ ಮಂಡಳಿ, ಬಯ್ಯಾರಂ ಸ್ಟೀಲ್ ಫ್ಯಾಕ್ಟರಿ ಮತ್ತು ರಾಜ್ಯದಲ್ಲಿ ಐಐಎಂ ಸ್ಥಾಪನೆ ಮುಂತಾದ ಹಲವಾರು ಪ್ರಶ್ನೆಗಳನ್ನು ಕೇಳುತ್ತಾ ಪ್ರತಿಭಟನೆ ನಡೆಸಿದ್ದರು.
ಮೇ 26 ರಂದು, ಮೋದಿ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ (ISB) 20 ವರ್ಷಗಳ ಪೂರ್ಣಗೊಳಿಸುವಿಕೆ ಮತ್ತು 2022 ರ ತರಗತಿಯ ಪದವಿ ಸಮಾರಂಭದಲ್ಲಿ ಭಾಗವಹಿಸಲು ಹೈದರಾಬಾದ್ಗೆ ಭೇಟಿ ನೀಡಿದರು. ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿಯ ಬೆಂಬಲಿಗರು ವಿಶ್ವವಿದ್ಯಾನಿಲಯಕ್ಕೆ ಹೋಗುವ ದಾರಿಯಲ್ಲಿ ಹಲವಾರು ಬಾಕಿ ಇರುವ ಯೋಜನೆಗಳ ಬಗ್ಗೆ ಪ್ರಶ್ನೆಗಳನ್ನು ಪೋಸ್ಟರ್ನಲ್ಲಿ ಪ್ರಿಂಟ್ ಮಾಡಿಸಿ ಹಾಕಿದ್ದರು.

ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಹೆಚ್ಎಂಸಿ) ನ ವಿಜಿಲೆನ್ಸ್ ಮತ್ತು ಜಾರಿ ವಿಭಾಗದ ಅಧಿಕಾರಿಯನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ, ಅವರು ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.
ಜುಲೈ 2 ಮತ್ತು 3 ರಂದು ಬಿಜೆಪಿ ಕಾರ್ಯಕಾರಿಣಿ ಸಭೆ
ಪ್ರಧಾನಿ ನರೇಂದ್ರ ಮೋದಿ, ಜುಲೈ 2 ಮತ್ತು 3 ರಂದು ಹೈದರಾಬಾದ್ ನಗರಕ್ಕೆ ಭೇಟಿ ನೀಡಲಿದ್ದು, ಹೈದರಾಬಾದ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ (ಎಚ್ಐಸಿಸಿ) ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸಹ ಭಾಗವಹಿಸುವ ನಿರೀಕ್ಷೆಯಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications