ರಾಷ್ಟ್ರಧ್ವಜಕ್ಕೆ ಅಗೌರವ, ನಟಿ ಮಲ್ಲಿಕಾ ಮೇಲೆ ಕೇಸ್
ಹೈದರಾಬಾದ್,ಸೆ.5 : ಬಾಲಿವುಡ್ ನ ವಿವಾದಿತ ಹಾಟ್ ನಟಿ ಮಲ್ಲಿಕಾ ಶೆರಾವತ್ ಮತ್ತೊಮ್ಮೆ ವಿವಾದದಲ್ಲಿ ಸಿಲುಕಿದ್ದಾರೆ. ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಮಲ್ಲಿಕಾ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣ ಇದಾಗಿದೆ. ಡರ್ಟಿ ಪಾಲಿಟಿಕ್ಸ್ ಚಿತ್ರದ ಪ್ರಚಾರಕ್ಕಾಗಿ ಬೆತ್ತಲೆ ದೇಹವನ್ನು ಮುಚ್ಚಲು ತ್ರಿವರ್ಣಧ್ವಜವನ್ನು ಮಲ್ಲಿಕಾ ಬಳಸಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿದೆ.
ಡರ್ಟಿ ಪಾಲಿಟಿಕ್ಸ್ ಚಿತ್ರದ ಪೋಸ್ಟರ್ ನಲ್ಲಿ ತ್ರಿವರ್ಣ ಧ್ವಜವನ್ನು ಬಟ್ಟೆಯಂತೆ ಮೈಮೇಲೆ ಸುತ್ತಿಕೊಂಡು ಪೋಸ್ ನೀಡಿರುವ ಮಲ್ಲಿಕಾಳನ್ನು ಕಂಡು ಕೆರಳಿದ ಸಾಮಾಜಿಕ ಕಾರ್ಯಕರ್ತ ಟಿ ಧನಗೋಪಾಲ್ ರಾವ್ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ತ್ರಿವರ್ಣಧ್ವಜಕ್ಕೆ ಅಪಮಾನ ಮಾಡಿ ಅಗ್ಗದ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ ಎಂದು ವಾದಿಸಿದ್ದರು. ಹೈದರಾಬಾದಿನ ಹೈಕೋರ್ಟ್ ಆಗಸ್ಟ್ ಮೊದಲ ವಾರದಲ್ಲಿ ನಟಿ ಮಲ್ಲಿಕಾ, ಚಿತ್ರದ ನಿರ್ಮಾಪಕ ಕೆಸಿ ಬೊಕಾಡಿಯಾ ಅವರಿಗೂ ನೋಟಿಸ್ ಜಾರಿ ಮಾಡಿತ್ತು. ಈಗ ಹೈದರಾಬಾದಿನ ಫಾಲೂಕುನಂ ಠಾಣೆಯಲ್ಲಿಮತ್ತೊಂದು ಪ್ರಕರಣ ದಾಖಲಾಗಿದೆ.[ರಾಷ್ಟ್ರಧ್ವಜಕ್ಕೆ ಅಪಮಾನ, ಮಲ್ಲಿಕಾಗೆ ನೋಟಿಸ್]

ರಾಷ್ಟ್ರೀಯ ಗೌರವ ಕಾಯ್ದೆ 1971ರ ಅನ್ವಯ ರಾಷ್ಟ್ರ ಧ್ವಜವನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದು ಹಾಗೂ ದೇಶಕ್ಕೆ ಅಪಮಾನ ಮಾಡುವುದು ಶಿಕ್ಷಾರ್ಹವಾಗುತ್ತದೆ. ಈ ನಿಯಮಗಳನ್ನು ಪರಿಗಣಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ಮಹಮ್ಮದ್ ಅಬ್ದುಲ್ ಬಾರಿ ಹೇಳಿದ್ದಾರೆ.
ಖಾದೀರ್ ಹಾಗೂ ಸಮಿಯುದ್ದೀನ್ ಎಂಬ ವ್ಯಕ್ತಿಗಳು ಸ್ಥಳೀಯ ಮ್ಯಾಜಿಸ್ಟ್ರೇಟ್ ಕೋರ್ಟ್ ಮೆಟ್ಟಿಲೇರಿ ಡರ್ಟಿ ಪಾಲಿಟಿಕ್ಸ್ ಚಿತ್ರದ ಪ್ರಚಾರಕ್ಕೆ ಬಳಸಲಾದ ಪೋಸ್ಟರ್ ಗಳಲ್ಲಿ ಮಲ್ಲಿಕಾ ಶೆರಾವತ್ ಅವರು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ ಕ್ರಮ ಜರುಗಿಸಬೇಕಿದೆ ಎಂದು ಮನವಿ ಸಲ್ಲಿಸಿದ್ದರು.
ಡರ್ಟಿ ಪಾಲಿಟಿಕ್ಸ್ ಚಿತ್ರದ ಪಾತ್ರವರ್ಗದಲ್ಲಿ ಓಂ ಪುರಿ, ರಾಜ್ ಪಾಲ್ ಯಾದವ್ ಮುಂತಾದವರಿದ್ದಾರೆ. ಪ್ರಸ್ತುತ ರಾಜಕೀಯ ಸನ್ನಿವೇಶಗಳ ಸುತ್ತ ಕಥೆ ಸುತ್ತುತ್ತದೆ ಎನ್ನಲಾಗಿದೆ. ಮಲ್ಲಿಕಾ ಶೆರಾವತ್ ಅವರು ಅನೂಕಿ ದೇವಿ ಪಾತ್ರವನ್ನು ಚಿತ್ರದಲ್ಲಿ ಪೋಷಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications